Breaking News
Home / new delhi / ಜಾನುವಾರು ಹುಲ್ಲುಗಾವಲಿಗೆ ಜಾಗ: ಹಲಗಾ ಗ್ರಾಮಸ್ಥರ ಆಗ್ರಹ

ಜಾನುವಾರು ಹುಲ್ಲುಗಾವಲಿಗೆ ಜಾಗ: ಹಲಗಾ ಗ್ರಾಮಸ್ಥರ ಆಗ್ರಹ

Spread the love

ಬೆಳಗಾವಿ: ‘ತಾಲ್ಲೂಕಿನ ಸುವರ್ಣ ವಿಧಾನಸೌಧದ ಸಮೀಪದಲ್ಲಿರುವ ಹಲಗಾ ಗ್ರಾಮದಲ್ಲಿ ಜಾನುವಾರುಗೆ ಹುಲ್ಲುಗಾವಲುಗಾಗಿ ಏಳು ಏಕರೆ ಜಾಗ ನೀಡಬೇಕು ಮತ್ತು ಪಶು ಆಸ್ಪತ್ರೆ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

‘ಹೈನುಗಾರಿಕೆ ಮತ್ತು ಕೃಷಿಯನ್ನು ಅವಲಂಬಿಸಿ ನಾವು ಜೀವನ ನಡೆಸುತ್ತಿದ್ದೇವೆ. ಸದ್ಯ ದನ, ಎಮ್ಮೆ, ಕರುಗಳನ್ನು ಮೇಯಿಸುವುದಕ್ಕೆ ನಿರ್ದಿಷ್ಟ ಜಾಗವಿಲ್ಲದೆ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಜಾಗ ನೀಡಿ ಅಲ್ಲಿ ಹುಲ್ಲುಗಾವಲು ಮಾಡಲು ಅವಕಾಶ ಕಲ್ಪಿಸಬೇಕು’ ಎಂದು ಕೋರಿದರು.

‘ಗ್ರಾಮದ ಸರ್ವೇ ‘ನಂ.262/ಎ’ಯಲ್ಲಿ ಗಾಯರಾಣ ಜಮೀನನ್ನು ಕೆಲವು ಸಂಘ ಸಂಸ್ಥೆಗಳಿಗೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸುವರ್ಣಸೌಧದ ಸಮೀಪದಲ್ಲಿರುವ ಈ ಭೂಮಿಯನ್ನು ಕಬಳಿಸಲು ಕೆಲವರು ಹೊಂಚು ಹಾಕುತ್ತಿದ್ದಾರೆ.

ಇದಕ್ಕೆ ಅವಕಾಶ ಕೊಡಬಾರದು. ಗ್ರಾಮಸ್ಥರ ಅನುಕೂಲಕ್ಕಾಗಿ ಜಮೀನು ನೀಡಬೇಕು’ ಎಂದು ಒತ್ತಾಯಿಸಿದರು.

ವಕೀಲ ಅಣ್ಣಾಸಾಹೇಬ ಘೋರ್ಪಡೆ, ವೈ.ಕೆ. ದಿವಟೆ, ಬಸಯ್ಯ ಹಿರೇಮಠ, ಮಹಾವೀರ ಬೆಲ್ಲದ, ಕೆ.ಕೆ. ಸಂತಾಜಿ, ಚಂದ್ರು ಕಾಮೋಜಿ, ಪ್ರಕಾಶ ಲೋಹಾರ, ಕಿರಣ ಹನುಮಂತಾಚೆ, ಮಹಾವೀರ ಪಾಟೀಲ, ದೀಪಕ ಕಾಮನಾಚೆ, ಪ್ರಫುಲ್ಲ ಮಾಸ್ತಮರ್ಡಿ, ಶಿವಕುಮಾರ ಹುಡೇದ, ಬಾಬು ಧಾಮಣೆಕರ, ಪರಶುರಾಮ ಬಸ್ತವಾಡಕರ, ಕಾಚು ಸಾವಂತ ಇದ್ದರು.


Spread the love

About Laxminews 24x7

Check Also

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

Spread the loveಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ