Breaking News
Home / ಅಂತರಾಷ್ಟ್ರೀಯ / ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ

ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ

Spread the love

ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ

ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.

 

 

 

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ಅವರನ್ನು ಆಯ್ಕೆ ಮಾಡಿದ್ದಾರೆ.

ಸಭೆ ಬಳಿಕ ಡಿಸಿಎಂ ಲಕ್ಷ್ಮಣ ಸವದಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪಕ್ಷದ ವರಿಷ್ಠರು ಸೂಚನೆಯಂತೆ ಬ್ಯಾಂಕ್ ಚುನಾವಣೆಯ ನಡೆಯದೆ ಒಮ್ಮತದ ನಿರ್ಣಯ ಮೂಲಕ ಆಗಬೇಕು ಎನ್ನುವುದಾಗಿತ್ತು. ಅದೇ ರೀತಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲಾಗಿದೆ ಎಂದು ಹೇಳಿದರು.

 

 

ಶಾಸಕ ಉಮೇಶ್ ಕತ್ತಿ, ಮಾಜಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕ ಆನಂದ ಮಾಮನಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಇತರರು ಇದ್ದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ