ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.k