Breaking News

ಚಚಡಿ ಗ್ರಾಮದ ಬಳಿ ಭೀಕರ ಅಪಘಾತ : ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಸಚಿವ ಮುರಗೇಶ್ ನಿರಾಣಿ

Spread the love

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮುರಗೇಶ್ ನಿರಾಣಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

 

ಕಾರು -ಬಸ್ ನಡುವೆ ಇಂದು ಭೀಕರ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹೊರಟ್ಟಿದ್ದ ಗಣಿ ಮತ್ತು ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಕಾರು ನಿಲ್ಲಿಸಿದ್ದಾರೆ.

ಅಪಘಾತ ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ತಕ್ಷಣ ಆ್ಯಂಬುಲೆನ್ಸ್ ಗೆ ಕರೆ ಮಾಡಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಗ್ಯ ಅಧಿಕಾರಿಗಳಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Spread the loveನವದೆಹಲಿ: ಕರ್ನಾಟಕ  ಹಾಗೂ ತಮಿಳುನಾಡು  ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ