Breaking News

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ.

Spread the love

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ ರೀತಿಯ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದ್ದು, ವೃದ್ಧರೊಬ್ಬರಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನೇಸರಗಿ ಮೂಲದ ನಾಗಭೂಷಣ ಸಂಪಗಾವಿ (73) ಎಂಬ ವೃದ್ಧ ಉಸಿರಾಟ ಸಮಸ್ಯೆಯಿಂದ ರಸ್ತೆಯಲ್ಲೇ ನರಳಾಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ