Breaking News

ಸಿಂಬಾಲ್… ಕೆಪಿಸಿಸಿ ಅಂಗಳದಲ್ಲಿ ಬೆಳಗಾವಿ ಬಾಲ್….!!!

Spread the love

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನೇಮಿಸಲಾದ ಕಾಂಗ್ರೆಸ್ ಮೇಲುಸ್ತುವಾರಿ ಸಮೀತಿ ಇಂದು ಬೆಳಗಾವಿಯಲ್ಲಿ ಸ್ಥಳೀಯ ನಾಯಕರ ಜೊತೆ,ಮಾಜಿ ನಗರಸೇವಕರ ಜೊತೆ,ಸಭೆ ಮಾಡಿದ್ರೂ ಪಾಲಿಕೆ ಚುನಾವಣೆ ಯನ್ನು ಪಕ್ಷದ ಚಿಹ್ನೆಯ ಮೇಲೆ ಮಾಡಬೇಕೋ..ಬಿಡಬೇಕೋ ಎನ್ನುವ ನಿರ್ಧಾರ ಕೈಗೊಳ್ಳುವಲ್ಲಿ ಸಫಲವಾಗಿಲ್ಲ.

ಸುಮಾರು ಎರಡು ಘಂಟೆಗಳ ಕಾಲ ಬೆಳಗಾವಿಯ ನಾಯಕರ ಜೊತೆ ಮಾಜಿ ಸಚಿವ ಎಂ.ಬಿ ಪಾಟೀಲ,ಬಿ.ಕೆ ಹರಿಪ್ರಸಾದ ಸೇರಿದಂತೆ ಮೇಲುಸ್ತುವಾರಿ ಸಮೀತಿಯ ಸದಸ್ಯರು ಸಭೆ ಮಾಡಿದ್ರು,ಆದ್ರೆ ಸಭೆಯಲ್ಲಿ ಸ್ಥಳೀಯ ನಾಯಕರು,ಮಾಜಿ ನಗರ ಸೇವಕರು ಚುನಾವಣೆಯನ್ನು ಪಕ್ಷದ ಸಿಂಬಾಲ್ ಮೇಲೆ ಮಾಡುವ ಕುರಿತು ಪರ,ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಉಸ್ತುವಾರಿ ಸಮೀತಿ ಇವತ್ತು ಈ ಕುರಿತು ಇವತ್ತು ಅಂತಿಮ ನಿರ್ಧಾರ ಕೈಗಳ್ಳಲು ಸಾಧ್ಯವಾಗಲಿಲ್ಲ.

ಸಭೆಯ ಬಳಿಕ ಪತ್ರಿಕಾಗೋಷ್ಢಿ ನಡೆಸಿದ,ಮಾಜಿ ಸಚಿವ ಎಂ.ಬಿ ಪಾಟೀಲ.ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕುರಿತು ಬೆಳಗಾವಿಯ ಮುಖಂಡರು,ಮಾಜಿ ನಗರಸೇವಕರ ಜೊತೆ ಸಭೆ ಮಾಡಿ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ ,ಸಿಂಬಾಲ್ ಮೇಲೆ ಇಲೆಕ್ಷನ್ ಮಾಡುವ ಕುರಿತು ಪರ,ಮತ್ತು ವಿರೋಧ ಅಭಿಪ್ರಾಯಗಳು ವ್ಯೆಕ್ತವಾಗಿವೆ ಎಂದು ತಿಳಿಸಿದರು.

ಬೆಳಗಾವಿ ಸಭೆಯಲ್ಲಿ ಪ್ರಸ್ತಾಪವಾದ ಅಭಿಪ್ರಾಯಗಳನ್ನು,ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರಿಗೆ ತಿಳಿಸ್ತೀವಿ,ನಾಳೆ ಅಥವಾ ನಾಡಿದ್ದು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಎಂ.ಬಿ ಪಾಟೀಲ ಹೇಳಿದ್ರು…


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ