Home / new delhi / ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

Spread the love

ಬೆಳಗಾವಿ: ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಶಂಕರಗೌಡ ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಹಾಗೂ ದೆಹಲಿ‌ ಕಚೇರಿಗಳಲ್ಲಿ ಕರ್ನಾಟಕ ಸರ್ಕಾರದ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಪ್ರಸ್ತಾವಗಳ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತ ವಿಜಯ ರಂಜನ್‌ಸಿಂಗ್, ಹೆಚ್ಚುವರಿ ನಿವಾಸಿ ಆಯುಕ್ತ ಗುರುನೀತ್ ತೇಜ್, ಉಪ ನಿವಾಸಿ ಆಯುಕ್ತ ಎಚ್. ಪ್ರಸನ್ನ ಮತ್ತು ಅಧಿಕಾರಿಗಳು ಇದ್ದರು.

ಬಳಿಕ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.

 


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ