Breaking News
Home / new delhi / ನಿಸ್ವಾರ್ಥ ಭಕ್ತಿಯಿಂದ ಫಲ

ನಿಸ್ವಾರ್ಥ ಭಕ್ತಿಯಿಂದ ಫಲ

Spread the love

ಡಾ.ಅಲ್ಲಮಪ್ರಭು ಸ್ವಾಮೀಜಿ, ನಾಗನೂರ ರುದ್ರಾಕ್ಷಿಮಠ, ಬೆಳಗಾವಿ

—–

ಹರಿದ ಗೋಣಿಯಲೊಬ್ಬ ಕಳವೆಯ ತುಂಬಿದ

ಇರುಳೆಲ್ಲ ನಡೆದನಾ ಸುಂಕಕಂಜಿ

ಕಳವೆಯೆಲ್ಲ ಹೋಗಿ ಬರಿ ಗೋಣಿ ಉಳಿಯಿತ್ತು

ಅಳಿಮನದವನ ಭಕ್ತಿ ಇಂತಾಯಿತ್ತು ರಾಮನಾಥ

ಮಾನವನ ಜೀವನ ತುಂಬಾ ಸೂಕ್ಷ್ಮವಾದುದು. ಆತನ ಬದುಕಿನಲ್ಲಿ ನಿಷ್ಠೆಯ ಸೇವೆ, ಪ್ರಾಮಾಣಿಕತೆ, ತ್ಯಾಗಕ್ಕೆ ಬೆಲೆ ಇದ್ದೇ ಇರುತ್ತದೆ. ಒಬ್ಬ ವ್ಯಕ್ತಿಯು ಹರಿದ ಗೋಣಿ ಚಿಲದಲ್ಲಿ ಭತ್ತವನ್ನು ತುಂಬಿಟ್ಟಿದ್ದ. ಭತ್ತವನ್ನು ಹೊಲದಿಂದ ಹಗಲಿನಲ್ಲಿ ಮನೆಗೆ ಸಾಗಿಸಿದರೆ ತೆರಿಗೆಯವರು ಸುಂಕ ವಿಧಿಸಬಹುದು ಎಂಬ ಭಯದಿಂದ ರಾತ್ರಿಯಲ್ಲಿ ಭತ್ತವನ್ನು ತನ್ನ ಮನೆಗೆ ತೆಗೆದುಕೊಂಡು ಹೊರಟಿದ್ದ. ಮನೆಯನ್ನು ತಲುಪುವಷ್ಟರಲ್ಲಿ ಭತ್ತವೆಲ್ಲ ಮಾರ್ಗ ಮಧ್ಯದಲ್ಲೆ ಬಿದ್ದು ಗೋಣಿ ಚೀಲವಷ್ಟೆ ಉಳಿದಿತ್ತು.

ಹಾಗೆಯೇ, ವ್ಯಕ್ತಿಯು ಭಗವಂತನಲ್ಲಿ ನಿಸ್ವಾರ್ಥ ಶ್ರದ್ಧೆಯನ್ನಿಟ್ಟರೆ ಮಾತ್ರ ಒಳಿತಾಗುತ್ತದೆ. ಮೋಸ-ವಂಚನೆಯ ಬದುಕನ್ನು ಹೊರಗೆ ಸಾಗಿಸಿ, ಒಳಗಡೆ ಭಗವಂತನಿಗೆ ಭಕ್ತಿಯನ್ನು ಸಲ್ಲಿಸಿದರೆ ಯಾವ ಪ್ರತಿಫಲವೂ ದೊರೆಯುವುದಿಲ್ಲ ಎನ್ನುವುದು ಈ ವಚನದ ಸಾರವಾಗಿದೆ. ಇದರಂತೆ ನಾವೆಲ್ಲರೂ ನಡೆದುಕೊಳ್ಳೋಣ. ನಿಸ್ವಾರ್ಥ ಭಕ್ತಿಯಿಂದ ದೇವರ ಕೃಪೆಗೆ ಪಾತ್ರವಾಗುವ ಮೂಲಕ ಒಳಿತೆನೆಡೆಗೆ


Spread the love

About Laxminews 24x7

Check Also

ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ

Spread the love ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ