ಬೆಳಗಾವಿ: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದಿಂದ ಸೆ. 19ರಂದು ‘ಬೃಹತ್ ಇ-ಲೋಕ ಅದಾಲತ್’ ಹಮ್ಮಿಕೊಳ್ಳಲಾಗಿದೆ.
‘ಕಲಂ 138 (ಎನ್ಐ ಆಕ್ಟ್) ಅಡಿ ನೋಂದಾಯಿಸಿದವು, ಮೋಟಾರು ವಾಹನ ಅಪಘಾತ ಪರಿಹಾರ, ಸಾಲ ವಸೂಲಾತಿ ಮತ್ತು ವ್ಯಾಜ್ಯ ಪೂರ್ವ, ಕೌಟುಂಬಿಕ ಹಾಗೂ ಜೀವನಾಂಶ ಮತ್ತು ಸಿವಿಲ್ ಹಾಗೂ ಎಲ್ಲ ರೀತಿಯ ಪ್ರಕರಣಗಳನ್ನು ಆನ್ಲೈನ್ ಮೂಲಕ ರಾಜಿ ಮಾಡಿ ಇತ್ಯರ್ಥಗೊಳಿಸಲಾಗುವುದು. ಅದಾಲತ್ಗೆ ಸಂಬಂಧಿಸಿದಂತೆ ಎಲ್ಲ ನ್ಯಾಯಾಲಯಗಳಲ್ಲೂ ಪೂರ್ವಭಾವಿ ಕಾರ್ಯಕ್ರಮಗಳು ನಡೆಯುತ್ತಿವೆ. ಹೆಚ್ಚಿನ ಮಾಹಿತಿಗೆ ದೂ:0831- 2423216 ಸಂಪರ್ಕಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??