Breaking News

ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು.

Spread the love

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮುಖಂಡರು ಇಲ್ಲಿನ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿ ಅವರ ಕುಟುಂಬದವರಿಗೆ ಶುಕ್ರವಾರ ರಾತ್ರಿ ಸಾಂತ್ವನ ಹೇಳಿದರು.

ಶಾಸಕರಾದ ಸತೀಶ ಜಾರಕಿಹೊಳಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಡಾ.ಅಂಜಲಿ ನಿಂಬಾಳ್ಕರ್ ಮತ್ತು ಮಹಾಂತೇಶ ಕೌಜಗಲಿ ಧೈರ್ಯ ಹೇಳಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವಕುಮಾರ್, ‘ಸುರೇಶ ಅಂಗಡಿ ಬಹಳ ಸೌಮ್ಯ ಸ್ವಭಾವದವರಾಗಿದ್ದರು. ನನ್ನೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದರು. ಭೇಟಿಯೂ ಆಗಿದ್ದೆ. ಸಚಿವರಾದ ನಂತರವೂ ಹಲವು ಬಾರಿ ಮಾತನಾಡಿದ್ದೆವು. ಅವರ ಅಕಾಲಿಕ ನಿಧನ ನಮಗೂ ಬಹಳ ದುಃಖವನ್ನುಂಟು ಮಾಡಿದೆ’ ಎಂದರು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ