Breaking News

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

Spread the love

ಬೆಳಗಾವಿ: ‘ಏಣಗಿ ಬಾಳಪ್ಪ ಸ್ಮಾರಕ ಟ್ರಸ್ಟ್ ಸ್ಥಾಪಿಸಬೇಕು’ ಎಂದು ಒತ್ತಾಯಿಸಿ ಸಾಹಿತಿಗಳು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

‘ನಗರದ ಟಿಳಕವಾಡಿಯಲ್ಲಿ ಪುನರ್‌ ನಿರ್ಮಾಣವಾಗುತ್ತಿರುವ ಕಲಾಮಂದಿರಕ್ಕೆ ಏಣಗಿ ಬಾಳಪ್ಪ ಅವರ ಹೆಸರು ನಾಮಕರಣ ಮಾಡಬೇಕು. ಪ್ರಮುಖ ರಸ್ತೆಗೆ ಅವರ ಹೆಸರಿಡಬೇಕು’ ಎಂದು ಕೋರಿದರು.

‘ಅವರ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಸರ್ಕಾರ ಹಿಂದೇಟು ಹಾಕುತ್ತಿರುವ ಕಾರಣ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ, ಶಾಸಕರು ಮತ್ತು ಸಂಸದರ ನಿಧಿಯಿಂದ ವಂತಿಗೆ ಸಂಗ್ರಹಿಸಿ ನಾಟಕ ಕಲೆ ಹಾಗೂ ಸಂಸ್ಕೃತಿಯನ್ನು ಕಾಪಾಡಿಕೊಂಡು ಬರಬೇಕು’ ಎಂದು ಒತ್ತಾಯಿಸಿದರು.

ಬಿ.ಎಸ್. ಗವಿಮಠ, ಸರಜೂ ಕಾಟ್ಕರ್, ಡಾ.ಬಸವರಾಜ ಜಗಜಂಪಿ, ಡಾ.ಗುರುದೇವಿ ಹುಲೆಪ್ಪನವರಮಠ, ಏಣಗಿ ಸುಭಾಷ್, ವಿ.ಜಿ. ಅಷ್ಟಗಿ, ರಾಮಕೃಷ್ಣ ಮರಾಠೆ ಇದ್ದರು.


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ