Breaking News

ಬೆಳಗಾವಿ: ಮಹರ್ಷಿ ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿಸಿ ಚಾಲನೆ

Spread the love

ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು.

ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು.

ಈ‌ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ ಬೆನಕೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ನಗರ ಪೊಲೀಸ್ ಆಯುಕ್ತ ಡಾ.ತ್ಯಾಗರಾಜನ್, ಡಿಸಿಪಿಗಳಾದ ಡಾ. ವಿಕ್ರಮ್ ಆಮಟೆ, ಸಿ.ಐ.ನೀಲಗಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ