ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು.
ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ ಬೆನಕೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ನಗರ ಪೊಲೀಸ್ ಆಯುಕ್ತ ಡಾ.ತ್ಯಾಗರಾಜನ್, ಡಿಸಿಪಿಗಳಾದ ಡಾ. ವಿಕ್ರಮ್ ಆಮಟೆ, ಸಿ.ಐ.ನೀಲಗಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.