ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್ಐಸಿ ಕಚೇರಿ ಸಮೀಪದ ಗ್ಯಾರೇಜ್ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ.
ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ರಿಪೇರಿಗಾಗಿ ಗ್ಯಾರೇಜ್ಗೆ ಬಂದಿದ್ದ ಕಾರುಗಳನ್ನು ಹೊರಗಡೆ ನಿಲ್ಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡು ಅ ನಾಲ್ಕು ಕಾರುಗಳು ಸುಟ್ಟು ಹೋಗಿವೆ.
Laxmi News 24×7