Breaking News

ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ

Spread the love

ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ  ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು  ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ.

ಟೈಯರ್ ರೋಡ್‌ನಲ್ಲಿ ಅಪಘಾತ ಸಂಭವಿಸಿದ್ದು, ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಅಪಘಾತ ನಡೆದಿದೆ.

ಅಪಘಾತದಲ್ಲಿ ಶೇಖರಪ್ಪ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೃಷ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ