Breaking News

ಅಂತರಾಷ್ಟ್ರೀಯ

ಸಚಿವ ರಮೇಶ್ ಜಾರಕಿಹೊಳಿ ಪ್ರಯತ್ನ : ಮಾರಿಹಾಳ ಗ್ರಾಪಂ.ಗೆ 5 ಸ್ಥಾನಗಳು ಅವಿರೋಧ ಆಯ್ಕೆ

ಬೆಳಗಾವಿ : ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನ ದಿಂದ ಸಮೀಪದ ಮಾರಿಹಾಳ ಗ್ರಾಮ ಪಂಚಾಯತಿಯ 18 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಅವಿರೋಧ ಆಯ್ಕೆಯಾದ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭ್ಯುದಯಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಸರ್ವ ಸಮ್ಮತ ಅರ್ಹವ್ಯಕ್ತಿಗಳ ಅವಿರೋಧ ಆಯ್ಕೆಯಾಗಬೇಕು ಇದರಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟು ಹಾಗೂ ನೆಮ್ಮದಿಯ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ …

Read More »

ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು.   ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …

Read More »

ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು‌ ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …

Read More »

ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …

Read More »

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ

ಬ್ರೇಕಿಂಗ್: ರಾಜ್ಯಾದ್ಯಂತ ಇಂದಿನಿಂದ 9 ದಿನ ನೈಟ್ ಕರ್ಪ್ಯೂ ಜಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇಂದಿನಿಂದ 9 ದಿನಗಳವರೆಗೆ ಅಂದರೆ ಜನೆವರಿ 2 ವರೆಗೆ ಈ ಆದೇಶ ಅನ್ವಯವಾಗಲಿದೆ. ಇನ್ನು ಹೊರ ದೇಶದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಬೇಕು. ರಾತ್ರಿ ಹೊತ್ತು …

Read More »

ಬಿಜೆಪಿ-ಜೆಡಿಎಸ್‌ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …

Read More »

ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ

ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.‌ ಕಳೆದ ಆರು …

Read More »

ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ

  ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …

Read More »

ಖಡಕ್ ಸೂಚನೆ ಹಿನ್ನೆಲೆ, ಅಂಕಲಗಿ ಪುಡಾರಿ ರಾಜು ತಳವಾರ್ ಅರೆಸ್ಟ್

ಗೋಕಾಕ: ಬಿಜೆಪಿ ಮುಖಂಡ ರಾಜು ತಳವಾರ ಹಾಗೂ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕಲಗಿಯ ಬಿಜೆಪಿ ಮುಖಂಡ ರಾಜು ತಳವಾರನನ್ನ ಬಂಧಿಸಲಾಗಿದೆ. ಗೋಕಾಕ ಡಿವೈಎಸ್ಪಿ ನೇತೃತ್ವದ ತಂಡ ರಾಜು ತಳವಾರನನ್ನ ಹೆಡೆಮುರಿ ಕಟ್ಟಿದ್ದು, ರಾಜು ತಳವಾರನನ್ನ ಕೂಡಲೇ ಬಂಧಿಸುವಂತೆ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಕ್ಷುಲ್ಲಕ ಕಾರಣಕ್ಕೆ ಚಿಕ್ಕುಗೋಳ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರಾಜು ತಳವಾರ ಆಂಡ್ ಗ್ಯಾಂಗ್ …

Read More »

ಗೋಕಾಕ: ಅಧಿಕಾರಿಗಳಿಗೆ ದೂರು ನೀಡಿ ತಂಗಿ ಬಾಲ್ಯ ವಿವಾಹ ತಡೆದ ಅಣ್ಣ

ಗೋಕಾಕ : ಅಧಿಕಾರಿಗಳಿಗೆ ದೂರು ನೀಡಿ ಅಣ್ಣನೇ ತಂಗಿಯ ಬಾಲ್ಯ ವಿವಾಹವನ್ನು ತಡೆದಿರುವ ಘಟನೆ ಗೋಕಾಕ ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಅತ್ತೆ, ಮಾವ  ವಿದ್ಯಾಭ್ಯಾಸ ಕಲಿಸೋದಾಗಿ ಹೇಳಿ  ನನ್ನ ತಂಗಿ ರಾಧಿಕಾಳನ್ನು ಇಟ್ಟುಕೊಂಡಿದ್ದರು. ಒತ್ತಾಯ ಪೂರ್ವಕವಾಗಿ ತಂಗಿಗೆ  ಮದುವೆ ಮಾಡ್ತಿದ್ದರು ಎಂದು ರಾಧಿಕಾ ಅಣ್ಣ ರಾಜು ಮಗೆನ್ನವರ್ ಆರೋಪಿಸಿದ್ದಾನೆ. ರಮೇಶ್ ಕೆಂಪಣ್ಣ ಮೊದಗಿ  ಹಾಗೂ ರಾಧಿಕಾ ಮಲ್ಲೇಶ ಮಗೆನ್ನವರ್ ಅವರು, ರಮೇಶ್(24) ಹಾಗೂ ರಾಧಿಕಾಗೆ(16)ಗೆ ಮದುವೆಗೆ ಏರ್ಪಾಡು ಮಾಡಿದ್ದರು. ಈ …

Read More »