Breaking News

ಅಂತರಾಷ್ಟ್ರೀಯ

ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …

Read More »

ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್​ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್‌ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ಗೆ ಹಾಜರುಪಡಿಸಿದರು.       ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್​ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ.   ಮಾಜಿ ಸಚಿವರ ಪರ ಜಾಮೀನು …

Read More »

ಟ್ರಂಪ್‌ಗೆಟ್ರಂಪ್‌ಗೆ ಸೋಲು, ಬೈಡನ್‌ಗೆ ಅಧ್ಯಕ್ಷ ಪಟ್ಟ – ಅಧಿಕೃತ ಘೋಷಣೆಯೊಂದೇ ಬಾಕಿ ಸೋಲು, ಬೈಡನ್‌ಗೆ ಅಧ್ಯಕ್ಷ ಪಟ್ಟ – ಅಧಿಕೃತ ಘೋಷಣೆಯೊಂದೇ ಬಾಕಿ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಜೋ ಬೈಡನ್‌ ಜಯ ಗಳಿಸಿದ್ದಾರೆ. ಪೆನ್ಸಿಲ್ವೇನಿಯಾದಲ್ಲಿ ಬೈಡನ್‌ ಜಯಗಳಿಸುವ ಮೂಲಕ ಒಟ್ಟು 284 ಮತಗಳನ್ನು ಗೆದ್ದಿದ್ದು, ಟ್ರಂಪ್‌ 214 ಮತಗಳನ್ನು ಮಾತ್ರ ಗೆದ್ದುಕೊಂಡಿದ್ದಾರೆ. ಅಮೆರಿಕದ ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಬೈಡನ್‌ 50.6% ಅಂದರೆ 7,48,47,834 ಮತ ಗಳಿಸಿದರೆ ಡೊನಾಲ್ಡ್‌ ಟ್ರಂಪ್‌ 47.7% ಅಂದರೆ 7,05,91,531 ಮತಗಳನ್ನು ಗಳಿಸಿದ್ದಾರೆ. ಅಮೆರಿಕದಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ. …

Read More »

ನಾವು ಯಾವಾಗ ಕಪ್ ಗೆಲ್ಲೋದು- ಆರ್‌ಸಿಬಿ ಸೋಲಿಗೆ ಇಂಗ್ಲೆಂಡ್ ಆಟಗಾರ್ತಿ ಅಲೆಕ್ಸೆಂಡ್ರಾ ಬೇಸರ

ಲಂಡನ್: ಐಪಿಎಲ್ 12ನೇ ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಹೊರ ನಡೆದಿದ್ದಕ್ಕೆ ಅಭಿಮಾನಿಗಳು ತೀವ್ರ ಬೇಸರಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವ ಮೂಲಕ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಅದೇ ರೀತಿ ಇಂಗ್ಲೆಂಡ್ ತಂಡದ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಅಲೆಕ್ಸೆಂಡ್ರಾ ಹಾರ್ಟ್ಲೆ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಪ್ ಗೆಲ್ಲುವ ಅವಕಾಶವನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಆಕ್ರೋಶ ಹಾಗೂ ಬೇಸರದ ಟ್ವೀಟ್ ಮಾಡಿದ್ದಾರೆ. ಐಪಿಎಲ್ ಎಲಿಮಿನೇಟ್ …

Read More »

ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಗಂಡು ಮಕ್ಕಳನ್ನು ಹೆತ್ತ ಮಹಾತಾಯಿ

ವಾಷಿಂಗ್ಟನ್: ಗಂಡು ಮಗು ಬೇಕೆಂದು ಹೆಣ್ಣು ಮಗುವನ್ನು ಹೆತ್ತು ಕಾಯುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ದಂಪತಿ ಹೆಣ್ಣು ಮಗುವಿಗಾಗಿ ಬರೋಬ್ಬರಿ 14 ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅಲ್ಲದೆ ಬರೋಬ್ಬರಿ ಮೂರು ದಶಕಗಳ ಬಳಿಕ ಇದೀಗ ಹೆಣ್ಣು ಮಗು ಜನಿಸಿದ ಖುಷಿಯಲ್ಲಿ ತೇಲಾಡುತ್ತಿದ್ದಾರೆ. ಅಮೆರಿಕದ ಮಿಚಿಗಾನ್ ರಾಜ್ಯದಲ್ಲಿ ಈ ಘಟನೆ ನಡೆದಿದ್ದು, ಕಟೇರಿ ಶ್ವಾಂಡ್ಟ್ ಗುರುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹುಟ್ಟಿದ ಸಮಯದಲ್ಲಿ 3.4 ಕೆ.ಜಿ ತೂಕವಿದ್ದ ಮ್ಯಾಗಿ …

Read More »

ಭೀಮಾತೀರದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಅರೆಸ್ಟ್ ; ಬಂಧಿತರಿಂದ ಎರಡು ಕಂಟ್ರಿ ಪಿಸ್ತೂಲ್ ವಶಕ್ಕೆ..!

    ವಿಜಯಪುರ : ನವೆಂಬರ್ 2 ರಂದು ಭೀಮಾತೀರದ ಕುಖ್ಯಾತಿಯ ಮಹಾದೇವ ಭೈರಗೊಂಡ ಮೇಲೆ ನಡೆದಿದ್ದ ಶೂಟೌಟ್  ಪ್ರಕರಣಕ್ಕೆ ಸಂಭಂದಿಸಿದಂತೆ ವಿಜಯಪುರ. ಪೋಲೀಸರು ಮತ್ತೆ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಹೌದು ನವೆಂಬರ್ 2 ರಂದು ನಡೆದಿದ್ದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಯಾಶೀನ್ ರಮಜಾನಸಾಬ್ ದಂದರಗಿ,  ಕರೆಪ್ಪ ಸೊನ್ನದ ,  ಸಿದ್ದರಾಯ ಬೊಮ್ಮನಜೋಗಿ ,  ಸಚೀನ ಮಾನವರ್ , ಚಡಚಣ. ಮೂಲದ ರವಿ ಬಂಡಿ ಬಂಧಿತ ಆರೋಪಿಗಳು, ಬಂಧಿತ ಆರೋಪಿಗಳಿಂದ  ಐದು …

Read More »

ಖಾನಾಪುರ ಸ್ಥಾನ ಕೊನೆ ಗಳಿಗೆಯಲ್ಲಿ ಸೋಲು : ಶಾಸಕ ಸತೀಶ್ ಜಾರಕಿಹೊಳಿ

  ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …

Read More »

ಡಿಸಿಎಂ ಲಕ್ಷ್ಮಣ ಸವದಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …

Read More »

ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ‌

  ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ  ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Read More »

ನಾನೇ ಅಮೆರಿಕಾದ ಮುಂದಿನ ಅಧ್ಯಕ್ಷ, ಕಮಲಾ ಉಪಾಧ್ಯೆಕ್ಷೆ : ಬಿಡೆನ್‍ ಘೋಷಣೆ

ವಾಷಿಂಗ್ಟನ್/ನ್ಯೂಯಾರ್ಕ್,ನ.6- ನಾನು ಮತ್ತು ಕಮಲಾ ಹ್ಯಾರಿಸ್ ವಿಜೇತರಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಹುದ್ದೆಗಳನ್ನು ಅಲಂಕರಿಸುವುದಾಗಿ ಮಾಜಿ ಉಪಾಧ್ಯಕ್ಷ ಮತ್ತು ಅಧ್ಯಕ್ಷ ಗದ್ದುಗೆ ಏರುವ ಡೆಮೊಕ್ರಾಟಿಕ್ ಪಕ್ಷದ ಅಧ್ಯಕ್ಷೀಯ ಧುರೀಣ ಜೋ ಬಿಡೆನ್ ಹೇಳಿದ್ದಾರೆ. ತಮ್ಮ ತವರು ರಾಜ್ಯ ಡೆಲವೇರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ಅಧಿಕೃತ ಫಲಿತಾಂಶ ಪ್ರಕಟವಾಗುವ ತನಕ ಜನರು ತಾಳ್ಮೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ. ಈ ಮಧ್ಯೆ, ಚುನಾವಣೆಗಳಲ್ಲಿ …

Read More »