Breaking News

ಅಂತರಾಷ್ಟ್ರೀಯ

ಡಿಸಿಎಂ ಲಕ್ಷ್ಮಣ ಸವದಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …

Read More »

ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ‌

  ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ  ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Read More »

ನಾನೇ ಅಮೆರಿಕಾದ ಮುಂದಿನ ಅಧ್ಯಕ್ಷ, ಕಮಲಾ ಉಪಾಧ್ಯೆಕ್ಷೆ : ಬಿಡೆನ್‍ ಘೋಷಣೆ

ವಾಷಿಂಗ್ಟನ್/ನ್ಯೂಯಾರ್ಕ್,ನ.6- ನಾನು ಮತ್ತು ಕಮಲಾ ಹ್ಯಾರಿಸ್ ವಿಜೇತರಾಗಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಹುದ್ದೆಗಳನ್ನು ಅಲಂಕರಿಸುವುದಾಗಿ ಮಾಜಿ ಉಪಾಧ್ಯಕ್ಷ ಮತ್ತು ಅಧ್ಯಕ್ಷ ಗದ್ದುಗೆ ಏರುವ ಡೆಮೊಕ್ರಾಟಿಕ್ ಪಕ್ಷದ ಅಧ್ಯಕ್ಷೀಯ ಧುರೀಣ ಜೋ ಬಿಡೆನ್ ಹೇಳಿದ್ದಾರೆ. ತಮ್ಮ ತವರು ರಾಜ್ಯ ಡೆಲವೇರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ಅಧಿಕೃತ ಫಲಿತಾಂಶ ಪ್ರಕಟವಾಗುವ ತನಕ ಜನರು ತಾಳ್ಮೆಯಿಂದ ಇರುವಂತೆ ಅವರು ಮನವಿ ಮಾಡಿದ್ದಾರೆ. ಈ ಮಧ್ಯೆ, ಚುನಾವಣೆಗಳಲ್ಲಿ …

Read More »

ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ‌*

  ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ‌, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …

Read More »

ಅರವಿಂದ್ ಪಾಟೀಲ ಬಿಜೆಪಿಗೆ,ಸಿಎಂ ಸಹಮತ- ಡಿಸಿಎಂ ಸವದಿ

ಬೆಳಗಾವಿ-ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯುತ್ತಿದೆ. 16 ನಿರ್ದೇಶಕ ಸ್ಥಾನದ ಪೈಕಿ ಈಗಾಗಲೇ 13ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಮೂರು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ. ಖಾನಾಪುರ ಕ್ಷೇತ್ರದಲ್ಲಿ ಎನೂ ಕುತೂಹಲ ಇಲ್ಲ ಮತದಾರರು ಜಾನರಿದ್ದಾರೆ. ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಸ್ಪರ್ಧೆ, ಮಾಜಿ ಶಾಸಕ ಅರವಿಂದ್ ಪಾಟೀಲ್ …

Read More »

ನ್ಯಾಯ ಎಲ್ಲಿದೆ…? ಅಂತಾ ಇವರು ಕೇಳುತ್ತಿದ್ದಾರೆ….!

ಬೆಳಗಾವಿ- ಗಂಡ,ಹೆಂಡತಿ,ಇಬ್ಬರು ಹೆಣ್ಣು ಮಕ್ಕಳೊಂದಿದೆ ಬೆಳಗಾವಿಯ ಡಿಸಿ ಕಚೇರಿಯ ಎದುರು ಕುಳಿತುಕೊಂಡಿದ್ದಾರೆ.ನ್ಯಾಯ ಎಲ್ಲಿದೆ ಅಂತಾ ಕೇಳುತ್ತಿದ್ದಾರೆ. ನ್ಯಾಯ ಸಿಗೋವರೆಗೂ ಅಹೋರಾತ್ರಿ ಧರಣಿ ಮಾಡುತ್ತೇವೆ,ಅಲ್ಲಿಯವರೆಗೆ ಇಲ್ಲಿಯೇ ಕುಳಿತುಕಿಳ್ಳುತ್ತೇವೆ ಅಂತ,ಈ ಕುಟುಂಬ ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದೆ. ರಾಯಬಾಗ ತಾಲ್ಲೂಕಿನ, ನರಸಲಾಪೂರ ಗ್ರಾಮದ ಸಂಗೀತಾ ಬಂಡು ಚಾವರೆ ಕುಟುಂಬ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.ಈವರ ಪಾಲಿಗೆ ಬರುವ ಜಮೀನು ಮತ್ತು ಆಸ್ತಿಯನ್ನು,ಇವರ ಸಮಂಧಿಕರು ಮಾಡಿಕೊಡುತ್ತಿಲ್ಲ,ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನುವ ಕಾರಣಕ್ಕಾಗಿ ನಮಗೆ …

Read More »

ಬೆಳಗಾವಿಯ ನಿವಾಸಿ ಈಗ ಅಮೇರಿಕಾದ ಸಂಸದ

  ಅಜ್ಜನ ಕಡೆ ಮಾಸ್ಕ್ ಯಾವ ತರಾ ಇದೆ ಈ ವಿಡಿಯೋ ಕೊನೇವರಿಗೆ ನೀವು ನೋಡ್ಲೆ ಬೇಕು…….           ಬೆಳಗಾವಿ- ಬೆಳಗಾವಿಯ ನಿವಾಸಿಯೊಬ್ಬ ಅಮೇರಿಕಾದ ಸಂಸದನಾಗಿ ಆಯ್ಕೆಯಾಗಿದ್ದಾನೆ. ಬೆಳಗಾವಿ ಶಹಾಪೂರ ಪ್ರದೇಶದ ಮೀರಾಪೂರ ಗಲ್ಲಿಯ ನಿವಾಸಿ ಶ್ರೀನಿವಾಸ ಥಾಣೆದಾರ ಈಗ ಅಮೆರಿಕಾ ದೇಶದ ಸೆನೆಟ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ. ಚಿಂತಾಮಣರಾವ ಶಾಲೆಯಲ್ಲಿ ಹೈಸ್ಕೂಲ ಕಲೆತಿರುವ ಶ್ರೀನಿವಾಸ ಥಾಣೆದಾರ್ ಅಮೇರಿಕಾದಲ್ಲಿ ಕೆಮಿಕಲ್ ಉದ್ಯಮಿಯಾಗಿದ್ದಾರೆ.

Read More »

ಮತ ಎಣಿಕೆ ನಿಲ್ಲಿಸುವಂತೆ ಟ್ರಂಪ್‌ ಆಗ್ರಹ – ಗೂಂದಲದ ಗೂಡಾಯ್ತು ಚುನಾವಣೆ

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಎಲೆಕ್ಟೊರಲ್ ಮತಗಳ ಎಣಿಕೆಯಲ್ಲಿ ಜೋ ಬೈಡನ್ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಮ್ಯಾಜಿಕ್ ಫಿಗರ್ 270ರ ಸನಿಹದಲ್ಲಿದ್ದಾರೆ. ಸದ್ಯ ಜೋ ಬೈಡನ್‍ಗೆ 264 ಮತ ಬಿದ್ದಿದ್ರೆ, ಟ್ರಂಪ್‍ಗೆ 214 ಮತಗಳಷ್ಟೇ ಬಂದಿವೆ. ಇಲ್ಲಿಯವರೆಗೆ 45 ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು, ಪೆನ್ಸಿಲ್ವೇನಿಯಾ, ಜಾರ್ಜಿಯಾ, ನಾರ್ತ್ ಕರೋಲಿನಾ, ನೆವಾಡ, ಅಲಸ್ಕಾ ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಈ ಐದರ ಪೈಕಿ ಮೂರರಲ್ಲಿ ಟ್ರಂಪ್ …

Read More »

ಆನ್‍ಲೈನ್ ಕ್ಲಾಸ್‍ನಲ್ಲಿ ಶಿಕ್ಷಕನಿಗೆ ‘ದಿಸ್ ಮ್ಯಾನ್ ಸೋ ಸೆಕ್ಸಿ’ ಎಂದ ವಿದ್ಯಾರ್ಥಿನಿ

ವಾಷಿಂಗ್‍ಟನ್: ಆನ್‍ಲೈನ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿ ಶಿಕ್ಷಕನಿಗೆ ಸೆಕ್ಸಿ ಎಂದು ಕರೆದಿರುವ ವೀಡಿಯೋ ಟಿಕ್‍ಟಾಕ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟಿಕ್‍ಟಾಕ್ ನಲ್ಲಿ 50 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದ್ದು, 8 ಸಾವಿರಕ್ಕೂ ಹೆಚ್ಚು ಕಮೆಂಟ್ ಬಂದಿವೆ. ಕೊರೊನಾ ಹಿನ್ನೆಲೆ ಸರ್ಕಾರಗಳು ಆನ್‍ಲೈನ್ ತರಗತಿಗಳಿಗೆ ಹೆಚ್ಚು ಒತ್ತು ನೀಡುತ್ತಿವೆ. ವಿದೇಶಗಳಲ್ಲಿ ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ವರ್ಚುವಲ್ ತರಗತಿಗಳು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಗಳನ್ನು ರೆಕಾರ್ಡ್ ಮಾಡಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ. …

Read More »

ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ.

ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …

Read More »