ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …
Read More »ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ
ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …
Read More »ಪ್ರಿಯಾಂಕಾ ರಾಧಾಕೃಷ್ಣನ್ (41) ನ್ಯೂಜಿಲೆಂಡ್ನ ಭಾರತೀಯ ಮೂಲದ ಪ್ರಥಮ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ
ಮೆಲ್ಬೋರ್ನ್, ನ.2- ಪ್ರಿಯಾಂಕಾ ರಾಧಾಕೃಷ್ಣನ್ (41) ನ್ಯೂಜಿಲೆಂಡ್ನ ಭಾರತೀಯ ಮೂಲದ ಪ್ರಥಮ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ನ್ಯೂಜಿಲೆಂಡ್ ಪ್ರಧಾನಮಂತ್ರಿ ಜಸ್ಸಿಂಡಾ ಅಡ್ರ್ರೆನ್ ಅವರು ತಮ್ಮ ಸಂಪುಟಕ್ಕೆ ಐವರು ಸಚಿವರನ್ನು ಸೇರ್ಪಡೆ ಮಾಡಿಕೊಂಡಿದ್ದು , ಇವರಲ್ಲಿ ಪ್ರಿಯಾಂಕಾ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.ಪ್ರಿಯಾಂಕಾ ಭಾರತದಲ್ಲಿ ಜನಿಸಿ ನಂತರ ಸಿಂಗಾಪೂರ್ನಲ್ಲಿ ಶಿಕ್ಷಣ ಪಡೆದರು. ತರುವಾಯ ನ್ಯೂಜಿಲೆಂಡ್ನಲ್ಲಿ ಕಾನೂನು ಶಿಕ್ಷಣದಲ್ಲಿ ಉನ್ನತ ಪದವಿ ಪಡೆದರು. ಶೋಷಿತ ಮಹಿಳೆಯರು, ದುರ್ಬಲರು, ವಲಸಿಗರು, ಮೊದಲಾದ ಸೂಕ್ಷ್ಮ ವರ್ಗಗಳ ಪರ …
Read More »ಗೋಕಾಕ ನಗರಸಭೆ ಅಧ್ಯಕ್ಷರ ಅವಿರೋಧ ಆಯ್ಕೆ ಒಳ್ಳೆಯ ಬೆಳವಣಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ ಬಣ್ಣನೆ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …
Read More »ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ
ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …
Read More »ನಿಮ್ಮೊಳಗೂ ಸಾಧಿಸುವ ಛಲ ಹುಟ್ಟಿಸುತ್ತೆ ಮೊದಲ ಜೇಮ್ಸ್ ಬಾಂಡ್ ಕೆನರಿ ಲೈಫ್ ಸ್ಟೋರಿ
ಟಿವಿ, ರೇಡಿಯೋ, ಕಾಮಿಕ್ ಸ್ಟ್ರಿಪ್, ವಿಡಿಯೋ ಗೇಮ್ ನಲ್ಲಿ ಕೇಳುತ್ತಿದ್ದ ಆ ಧ್ವನಿ ಕಿವಿಯಲ್ಲಿ ಈಗಲೂ ಪಿಸುಗುಡುತ್ತಿದೆ. ಸಿನಿಮಾಗಳಲ್ಲಿ ಕಣ್ರೆಪ್ಪೆಗಳನ್ನು ಮಿಟುಕಿಸದಂತೆ ನೋಡಿದ ಆ ದೃಶ್ಯ ಈಗಲೂ ರೋಮಾಂಚನ ಉಂಟುಮಾಡುತ್ತದೆ. ಅದೊಂದು ಸಾಲು ಕೇಳಿದರೆ ಸಾಕು, ನಮ್ಮ ನೆನಪುಗಳು ಬಾಲ್ಯದ ದಿನಗಳಿಗೆ ಜಾರಿ ಬಿಡುತ್ತದೆ. ಏಕೆಂದರೆ ಆ ಧ್ವನಿ ಇಡೀ ಜಗತ್ತಿನ ಎಲ್ಲ ಮನಸ್ಸುಗಳಿಗೆ ಒಂದು ರೀತಿ ಥ್ರಿಲ್ ಕೊಟ್ಟಂತಹ ಎಲ್ಲರಿಗೂ ಈಗಲೂ ಅಚ್ಚುಮೆಚ್ಚಿನ ಆ ಸಾಲುಗಳು ಜಗತ್ತಿಗೆ ವೆರಿ …
Read More »ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.
ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್ಪೆಕ್ಟರ್ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …
Read More »ಮೊದಲ ‘ಜೇಮ್ಸ್ ಬಾಂಡ್’, ನಟ ಶಾನ್ ಕಾನರಿ ನಿಧನ
ವಾಷ್ಟಿಂಗನ್: ಜನಪ್ರಿಯ ‘ಜೇಮ್ಸ್ ಬಾಂಡ್’ ಸರಣಿ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಶಾನ್ ಕಾನರಿ ಶನಿವಾರ (ಆ.31) ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. 1962ರಿಂದ 1971ರವರೆಗೆ ಮೂಡಿಬಂದ 6 ಜೇಮ್ಸ್ ಬಾಂಡ್ ಸಿನಿಮಾಗಳಲ್ಲಿ ಶಾನ್ ಕಾನರಿ ಹೀರೋ ಆಗಿ ನಟಿಸಿದ್ದರು. ಆ ಮೂಲಕ ಅವರು ಸ್ಟಾರ್ ನಟನಾಗಿ ಮಿಂಚಿದರು. ಚಿತ್ರರಂಗದಲ್ಲಿ ಬಾಂಡ್ ಚಿತ್ರಗಳಿಗೆ ಪ್ರತ್ಯೇಕ ಸ್ಥಾನವಿದೆ. ಇಲ್ಲಿಯವರೆಗೂ ಹಾಲಿವುಡ್ ನಲ್ಲಿ ಬಾಂಡ್ ಹೆಸರಿನಲ್ಲಿ 25 ಸಿನಿಮಾಗಳು ಬಂದಿವೆ. ಅದರಲ್ಲೂ ಮೊದಲ …
Read More »ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು
ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …
Read More »
Laxmi News 24×7