Breaking News

ಅಂತರಾಷ್ಟ್ರೀಯ

ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ವಿಪರ್ಯಾಸ ಅಂದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ. ನಿನ್ನೆ 6:30ರ ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದು ತಂದಿದ್ದ ಯುವಕ, ಆಕೆಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ …

Read More »

ಗ್ರಾಮದ ಕೋಡಿಬಸವೇಶ್ವರ ದೇಗುಲದಲ್ಲಿ ಕಳ್ಳತನ ನಡೆದಿದೆ. ತಡ ರಾತ್ರಿ ಖದೀಮರು ದೇವಸ್ಥಾನದ ಬೀಗ ಒಡೆದು ಕೃತ್ಯ ಎಸಗಿದ್ದಾರೆ.

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ವರ್ದಿ ಗ್ರಾಮದ ಕೋಡಿಬಸವೇಶ್ವರ ದೇಗುಲದಲ್ಲಿ ಕಳ್ಳತನ ನಡೆದಿದೆ. ತಡ ರಾತ್ರಿ ಖದೀಮರು ದೇವಸ್ಥಾನದ ಬೀಗ ಒಡೆದು ಕೃತ್ಯ ಎಸಗಿದ್ದಾರೆ. ದೇವಸ್ಥಾನ ಹುಂಡಿಯಲ್ಲಿದ್ದ ಕಾಣಿಕೆ, ಬೆಳ್ಳಿ ಅಭರಣಗಳು ಮತ್ತು ಮೈಕನ್ನು ಎಗರಿಸಿ ಹಣವನ್ನು ತೆಗೆದುಕೊಂಡು ಹುಂಡಿಯನ್ನು ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಹುಂಡಿಯಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಹಣ ಇತ್ತು ಎಂದು ಅಂದಾಜಿಸಲಾಗಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ …

Read More »

ಸೇತುವೆ ಮೇಲಿಂದ ಭೀಮಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ವಿಜಯಪುರ: ಸೇತುವೆ ಮೇಲಿಂದ ಭೀಮಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ್ ಸೇತುವೆ ಬಳಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದದ ನಿವಾಸಿ ಐಶ್ವರ್ಯ ಶ್ರೀಪಾಲ್ ಕಬ್ಬಿನ(20) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ.      ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇಗುಲಕ್ಕೆ ಹೋಗುವಾಗ ದಾರಿ ಮಧ್ಯೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Read More »

ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ.

ಬೆಂಗಳೂರು: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಎಂದು ಬೆಂಗಳೂರಿನಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಕೆಲ ಕಾಂಗ್ರೆಸ್‌ ನಾಯಕರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಮಾಡಿ. ಒಂದು ಕಡೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಜಮೀರ್ ಹೇಳ್ತಾರೆ. ಮತ್ತೊಂದು ಕಡೆ ಡಿಕೆಶಿ ಮುಂದಿನ ಸಿಎಂ ಎಂದು ‘ಕೈ’ …

Read More »

ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು: ನಾನು 10 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದೆ. ಆಗ ಡಿ.ಕೆ. ಸಹೋದರರಿಗೆ ಈ ಮುನಿರತ್ನ ಒಳ್ಳೆಯವನಾಗಿದ್ದ. ಈಗ ಮುನಿರತ್ನ ಇವರಿಗೆ ಅಷ್ಟೊಂದು ಕಹಿಯಾಗಿ ಬಿಟ್ನಾ? ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ಡಿ.ಕೆ. ಶಿವಕುಮಾರ್​ ಕೆಂಪೇಗೌಡ ಅಧ್ಯಯನ ಪೀಠದ ಉದ್ಘಾಟನೆ ದಿನ ನನ್ನನ್ನೂ ಹೊಗಳಿದ್ರು. ಎಲ್ಲರನ್ನೂ ಒಟ್ಟಿಗೆ ಇಟ್ಕೊಂಡು ಹೋಗಿ. ನಾಡಪ್ರಭು ಕೆಂಪೇಗೌಡರ ಇತಿಹಾಸ ಓದಿ. ಕೆಂಪೇಗೌಡರ ಇತಿಹಾಸ ಓದದೆ ನೀವು …

Read More »

ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ

ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್​ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ …

Read More »

ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ.

ಬೆಂಗಳೂರು: ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ. ನಾನು ಅವರ ಸಲಹೆ ಸ್ವೀಕರಿಸುತ್ತೇನೆ. ನನಗೆ ರಾಜಕೀಯದಲ್ಲಿ ಈ ವಿದ್ಯೆನೂ ಇದೆ ಅಂತಾ ಗೊತ್ತಿರಲಿಲ್ಲ. ಮುನಿರತ್ನಗೆ ಒಳ್ಳೆದಾಗಲಿ ಎಂದು ಮುನಿರತ್ನ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ‘ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ’ ‘ಕೈ’ ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆಂಬ ಮುನಿರತ್ನ ಹೇಳಿಕೆಗೆ ಶಿವಕುಮಾರ್​ ಹೌದು ನಾನು ಕೂಡ ಸಿದ್ದರಾಮಯ್ಯರ ಜೊತೆಯೇ …

Read More »

ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ.

ಬೆಂಗಳೂರು:  ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಹಬ್ಬದ ಮುನ್ನಾ ದಿನವಾದ ಶನಿವಾರ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟು ಜೋರಾಗಿತ್ತು. ಜನರು ರೋಗವನ್ನು ಲೆಕ್ಕಿಸದೆ ಖರೀದಿಯಲ್ಲಿ ನಿರತರಾಗಿದ್ದರು. ಕೋವಿಡ್‌ನಿಂದಾಗಿ ಈ ಬಾರಿ ಕೆಲವರು ಸರಳ ಮತ್ತು ಸಾಂಪ್ರದಾಯಿಕವಾಗಿ ನಾಡಹಬ್ಬ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವಾಹನ, ಮಳಿಗೆ, ಯಂತ್ರಗಳ ಪೂಜೆಗಾಗಿ ಸ್ವಚ್ಛಗೊಳಿಸಿ ತಯಾರಿ ನಡೆಸಿದರು. ಸೋಮವಾರ ವಿಜಯದಶಮಿ …

Read More »

ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾ‌ನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಖದೀಮರು ದೇವಸ್ಥಾ‌ನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ. …

Read More »

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ

ದಾನಕ್ಕಿಂತ ಶ್ರೇಷ್ಠವಾದ ಕಾರ್ಯ ಮತ್ತೊಂದಿಲ್ಲ ಎನ್ನುತ್ತಾರೆ. ನಾವು ಬೇರೆಯವರಿಗೆ, ಕಷ್ಟದಲ್ಲಿರುವವರಿಗೆ ದಾನವನ್ನು ನೀಡಿದರೆ ಅದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ವಸ್ತುವನ್ನು ದಾನ ಮಾಡಬೇಡಿ. ಕೆಲವರ ಮನೆಯಲ್ಲಿ ಲಕ್ಷ್ಮೀದೇವಿಯ ಪೂಜೆಗೆಂದು ಕಮಲದ ಹೂಗಳನ್ನು ತಂದಿರುತ್ತಾರೆ. ಆದರೆ ಕೆಲವೊಮ್ಮೆ ಈ ಹೂಗಳನ್ನು ಬೇರೆಯವರಿಗೆ ನೀಡುತ್ತೇವೆ. ಈ ರೀತಿ ಮಾಡಿದರೆ ನಿಮ್ಮ ಮನೆಯ ಲಕ್ಷ್ಮೀ ಹೊರಟುಹೋಗುತ್ತಾಳೆ. ಹಾಗೇ ಪ್ಲಾಸ್ಟಿಕ್ ವಸ್ತುಗಳನ್ನು ದಾನ ಮಾಡಬಾರದು. ಇದರಿಂದ ದೇವಿಯ ಕೋಪಕ್ಕೆ ಗುರಿಯಾಗುತ್ತೀರಿ. …

Read More »