Breaking News

ಅಂತರಾಷ್ಟ್ರೀಯ

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ

ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ. ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್​ ಸವಾರ ಸಂತೋಷ್​ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Read More »

ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ …

Read More »

ಪೊಲೀಸರ ಮೇಲೂ ತಲವಾರು ಬೀಸಿದ ಬಂಟ್ವಾಳ ಹತ್ಯೆ ಪ್ರಕರಣದ ಆರೋಪಿ | ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಅವರನ್ನು ಬೆನ್ನಟ್ಟಿ ಹೋಗಿದ್ದು, ಗುಂಡ್ಯ ಸಮೀಪದಲ್ಲಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದಾನೆ ಎಂದು …

Read More »

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು.   ನೂತನ …

Read More »

ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …

Read More »

ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ.

ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್‌ ಆರ್‌. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್‌ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ. ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್‌ ಟಿ. ಎಸ್ಪರ್‌ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ …

Read More »

ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ.        ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು …

Read More »

ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.           ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ …

Read More »

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ

ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್​ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. …

Read More »