Home / ಅಂತರಾಷ್ಟ್ರೀಯ (page 140)

ಅಂತರಾಷ್ಟ್ರೀಯ

ಪ್ರೀತಿಸಿದವಳನ್ನೇ ಕೊಲ್ಲಲು ಯತ್ನಿಸಿ.. ಜೈಲು ಸೇರಿದ ಪ್ರಿಯಕರ

ದೇವನಹಳ್ಳಿ: ಪ್ರೀತಿ ಮಧುರ, ತ್ಯಾಗ ಅಮರ ಅನ್ನೋ ಮಾತಿದೆ. ಆದರೆ ಇತ್ತೀಚಿನ ಯುವಕರು ಪ್ರೀತಿಗಾಗಿ ಪ್ರಾಣ ತೆಗೆಯಲೂ ಸಹ ಹಿಂದೆ ಮುಂದೆ ನೋಡಲ್ಲ. ತಮ್ಮ ಪ್ರೀತಿ ಸಿಗದಿದ್ದರೇ ಸಾಯಿಸಲೂ ಸಿದ್ದ, ಸಾಯಲೂ ಸಿದ್ದ ಅನ್ನುವಂತಿದ್ದಾರೆ. ನಿನ್ನೆ ಹೈದರಾಬಾದ್​ನಲ್ಲೂ ಪಾಗಲ್ ಪ್ರೇಮಿಯೊಬ್ಬ ಯುವತಿ ಪ್ರೀತಿ ನಿರಾಕರಿಸಿದಕ್ಕೆ ಆಕೆಯನ್ನು ಸುಟ್ಟು ಚಿಕಿತ್ಸೆ ಫಲಿಸದೇ ಆತನೂ ಸತ್ತ ಘಟನೆ ನಡೆದಿತ್ತು. ಅದೇ ಮಾದರಿಯಲ್ಲಿ ಇಲ್ಲೊಬ್ಬ ಪ್ರೇಮಿ ತಾನು ಪ್ರೀತಿಸಿದ ನವವಿವಾಹಿತೆಯನ್ನು ಪಾಳು ಬಿದ್ದ ಬಾವಿಗೆ …

Read More »

ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ ಶಂಕರಟ್ಟಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮ

  ಅಥಣಿ :ಅಂತಾರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಪ್ರಯುಕ್ತ  ಶಂಕರಟ್ಟಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ವೇಳೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶುವೈದ್ಯ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು   ಈ  ಸಂದರ್ಭದಲ್ಲಿ ಬಸವರಾಜ ಖೇಮಲಾಪುರ ವಿಪತ್ತು ನಿರ್ವಾಹಕ ಘಟಕದ ಸಂಯೋಜಕರು ದರೂರ ಹಾಗೂ  ವಲಯ ಮೇಲ್ವಿಚಾರಕರು , ಸೇವಾಪ್ರತಿನಿಧಿಗಳು ಮತ್ತು ವೈದ್ದ್ಯಾದಿಕಾರಿಗಳು ಮತ್ತು ನರ್ಸ್ ಸ್ವಯಂ ಸೇವಕರು ಜಕ್ಕಪ್ಪ ತೀರ್ಥ, ವಿಠ್ಠಲ್ ಕುಂಬಾರ್, …

Read More »

ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ

ಚಲಿಸುವ ಗಡಿಯಾರ ಬಿಸಿಲ್ಗುದುರೆಯಂತೆ ಮಿನುಗಿ ಹೋಗುವ ಕಾಲದಂತೆ ಕರಗಿಹೋಗುವ ನೆನಪೇ ಒಂದು ಚಲಿಸುವ ಗಡಿಯಾರ ಹಗಲಲಿ ಕನಸ ನಕ್ಷತ್ರಗಳು ಮರೆಯಾಗುವಂತೆ ಮಾಯವಾಗುವ ನೆನಪೇ ಒಂದು ಚಲಿಸುವ ಗಡಿಯಾರ ಕತ್ತಲೆ ಬೆಳಕನಾವರಿಸುವಂತೆ ಮನವನಾವರಿಸುವ ನೆನಪೇ ಒಂದು ಚಲಿಸುವ ಗಡಿಯಾರ…. ನವಿರಾದ ಸುಖಗಳ ನಡುವೆ ಸಿಹಿಯಾದ ಅನುಭವ ಬೆರೆಸುವ ನೆನಪೇ ಒಂದು ಚಲಿಸುವ ಗಡಿಯಾರ ಭವಿಷ್ಯದ ಗರ್ಭದಲಿ ಗರಿಬಿಚ್ಚಿ ನಲಿವಂತೆ ಸಿಹಿನೆನಪಿನ ತರಂಗಗಳನ್ನು ಬಡಿದೆಬ್ಬಿಸುವ ನೆನಪೇ ಒಂದು ಚಲಿಸುವ ಗಡಿಯಾರ ಹೃದಯದ ಭಾವನೆಗಳನ್ನು …

Read More »

ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್‍ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ …

Read More »

ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ …

Read More »

ಗ್ರಾಮೀಣ ಪ್ರದೇಶದ ಜನ ದಯವಿಟ್ಟು ದಸರಾಗೆ ಬರಬೇಡಿ’

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ತಯಾರಿ ಶುರುವಾಗಿದ್ದು, ಗ್ರಾಮೀಣ ಪ್ರದೇಶದ ಜನ ದಯವಿಟ್ಟು ದಸರಾಗೆ ಬರಬೇಡಿ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ ಸದುದ್ದೇಶದ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ಹಬ್ಬಲು/ಹಬ್ಬಿಸಿಕೊಳ್ಳಲು ಅವಕಾಶ ಕೊಡಬೇಡಿ ಈ ಬಾರಿ ದಸರಾದಲ್ಲಿ ಜಂಬೂಸವಾರಿ ಮೆರವಣಿಗೆ ಇರಲ್ಲ. ಅರಮನೆಯಲ್ಲಿ ಮಾತ್ರ ಜಂಬೂಸವಾರಿ ಇರುತ್ತೆ. ಅರಮನೆ ಒಳಗೆ 300 ಜನರಿಗೆ ಮಾತ್ರ ಅವಕಾಶ ಇದೆ. ಸಾರ್ವಜನಿಕರಿಗೆ ನೇರವಾಗಿ ಜಂಬೂಸವಾರಿ ನೋಡುವ ಅವಕಾಶ …

Read More »

ಬಿಸಿಲು ನಾಡಿನ ಮಿಂಚೇರಿ ನೀಡ್ತಿದೆ ಮಲೆನಾಡಿನ ಅನುಭವ, ಪ್ರಕೃತಿ ಸೌಂದರ್ಯಕ್ಕೆ ಪ್ರವಾಸಿಗರು ಮಂತ್ರಮುಗ್ಧ

ಬಳ್ಳಾರಿ: ಗಣಿನಾಡು ಬಳ್ಳಾರಿ ಅಂದ್ರೆ ಥಟ್ ಅಂತ ನೆನಪಾಗೋದು ಗಣಿ ಧೂಳು. ಅಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಜೆಸಿಬಿ, ಲಾರಿಗಳು ಸದ್ದು ಮಾಡೋದನ್ನ ನೀವು ನೋಡಿದ್ದೀರಾ. ಆದ್ರೆ ಈಗ ಅಲ್ಲಿನ ಆ ಅರಣ್ಯ ಪ್ರದೇಶ ಹಸಿರಿನಿಂದ ಕಂಗೊಳಿಸುತ್ತಿದೆ. ಮಲೆನಾಡಿನಂತೆ ಗಣಿನಾಡಾಗಿದೆ. ಗಣಿನಾಡು ಬಳ್ಳಾರಿಯಲ್ಲಿ ಮಲೆನಾಡಿನ ಸೌಂದರ್ಯ ಮನೆ ಮಾಡಿದೆ. ಬಳ್ಳಾರಿ ತಾಲೂಕಿನಿಂದ 18 ಕಿಮೀ ದೂರದಲ್ಲಿರುವ ಮಿಂಚೇರಿ ಅರಣ್ಯ ಪ್ರದೇಶ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಈ ವರ್ಷ ಹೆಚ್ಚು ಮಳೆಯಾಗಿದ್ದರಿಂದ …

Read More »

ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ‌

ಮೇಕೆದಾಟು ಯೋಜನೆಯ‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ‌ ಮತ್ತು ಅರಣ್ಯ ‌ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ …

Read More »

ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು

ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್‌ಡೌನ್‌ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ. ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್​ಗಳನ್ನು ಪ್ರದರ್ಶಿಸಿ ಆಡಿಯೋ, …

Read More »

ಒಂದೇ ಫ್ರೇಮ್​ನಲ್ಲಿ ರಾಷ್ಟ್ರ ಪ್ರಾಣಿ-ರಾಷ್ಟ್ರ ಪಕ್ಷಿ! ಈ ಫೋಟೋಗೆ ಸಿಕ್ತು ಪ್ರಥಮ ಬಹುಮಾನ

ಮೈಸೂರು: 66ನೇ ವನ್ಯ ಜೀವಿ ಸಪ್ತಾಹದ ಅಂಗವಾಗಿ ನಾಗರಹೊಳೆ ಅರಣ್ಯ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ ಛಾಯಾಗ್ರಹಣ ಸ್ಪರ್ಧೆಯ ಬಹುಮಾನವನ್ನು ಅರಣ್ಯ ಇಲಾಖೆ ಘೋಷಣೆ ಮಾಡಿದೆ. ಅದರಲ್ಲಿ ಅನಿಲ್ ಅಂತರಸಂತೆ ಎಂಬುವವರ ಕ್ಯಾಮರಾಕ್ಕೆ ಸೆರೆ ಸಿಕ್ಕಿದ್ದ ಹುಲಿ ಹಾಗೂ ನವಿಲು ಒಂದೆ ಫ್ರೇಮ್​ನಲ್ಲಿದ್ದ ಫೋಟೋಗೆ ಪ್ರಥಮ ಬಹುಮಾನ ಸಿಕ್ಕಿದೆ. ವನ್ಯ ಜೀವಿ ಸಪ್ತಾಹ ಅಂಗವಾಗಿ ಛಾಯಾಗ್ರಹಣ, ರಸಪ್ರಶ್ನೆ, ಘೋಷವಾಕ್ಯ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಸ್ಪರ್ಧೆಯಲ್ಲಿ ದೇಶದ ಮೂಲೆ ಮೂಲೆಗಳಿಂದ ಸಾಕಷ್ಟು …

Read More »