Breaking News

ಅಂತರಾಷ್ಟ್ರೀಯ

ಶಾಸಕ ಸತೀಶ ಜಾರಕಿಹೊಳಿ ಅವರ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು. ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.

Read More »

ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ.

ಬೆಳಗಾವಿ: ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಉಂಟಾದ ಪ್ರವಾಹ ಮತ್ತು ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಸರ್ಕಾರದಿಂದ ಮೊದಲ ಹಂತದ ಪರಿಹಾರ ವಿತರಣೆ ಕಾರ್ಯ ಇನ್ನೂ ಆರಂಭವಾಗಿಲ್ಲ. ಹೋದ ವರ್ಷದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ನೆರೆ ಮತ್ತು ಅತಿವೃಷ್ಟಿ ಆಗಿತ್ತು. ಈ ಬಾರಿಯೂ ಜಿಲ್ಲೆಯು ‘ನೆರೆಪೀಡಿತ’ ಎಂಬ ಪಟ್ಟಿಗೆ ಸೇರ್ಪಡೆಯಾಗಿದೆ. ನೂರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಸಾವಿರಾರು ಕೃಷಿಕರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲಾಗಲಿಲ್ಲ. ನೆರೆಯು ಗಾಯದ ಮೇಲೆ ‘ಬರೆ’ ಎಳೆದಿದ್ದು, ಜನರು ಪರಿಹಾರದ ‘ಮುಲಾಮಿಗಾಗಿ’ ಕಾಯುತ್ತಿದ್ದಾರೆ. …

Read More »

ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿ……

ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವರಶೀಗಿಹಳ್ಳಿ ಹೊರವಲಯದಲ್ಲಿ ಹುಲ್ಲಿನ ಹೊರೆ ಹೊತ್ತು ಹೋಗುತ್ತಿದ್ದ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಆರೋಪದ ಮೇಲೆ ಮೂವರನ್ನು ಕಿತ್ತೂರು ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ದೇವರಶೀಗಿಹಳ್ಳಿ ಗ್ರಾಮದ ನಾಗೇಶ ದೊಡಮನಿ, ವಿಜಯ ಮದನಬಾವಿ ಮತ್ತು ಚೇತನ ಹಿರೇಮಠ ಬಂಧಿತರು. ಅವರಿಂದ, ಕಳವು ಮಾಡಿದ್ದ ₹ 1.40 ಲಕ್ಷ ಮೌಲ್ಯದ 35 ಗ್ರಾಂ. ತೂಕದ ಚಿನ್ನದ ಸರ, ದ್ವಿಚಕ್ರ ವಾಹನ, ₹ 10 ಸಾವಿರ, …

Read More »

ಇಂದಿನ ಪಂಚಾಂಗ………….

ನಿತ್ಯನೀತಿ : ತನ್ನ ತಾನರಿತವನು ಅರಿವಿನರಮನೆಯ ನಿಜ ಸಂತನು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಭಾನುವಾರ, 04.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.07 ಚಂದ್ರ ಉದಯ ರಾ.07.54 / ಚಂದ್ರ ಅಸ್ತ ಬೆ.07.53 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ (ಬೆ.07.28) / ನಕ್ಷತ್ರ: ಅಶ್ವಿನಿ (ಬೆ.11.52) …

Read More »

ಲಿಬಿಯಾದಲ್ಲಿ 7 ಜನ ಭಾರತೀಯರ ಕಿಡ್ನ್ಯಾಪ್!

ಲಿಬಿಯಾದ ಸ್ಥಳೀಯ ಕ್ರಿಮಿನಲ್​ಗಳು 7 ಜನ ಭಾರತೀಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಅವರನ್ನು ಬಿಡುಗಡೆ ಮಾಡಲು 20 ಸಾವಿರ ಡಾಲರ್‌ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ, ಉತ್ತರ ಪ್ರದೇಶದ ಮಹಾರಾಜ ಗಂಜ್, ಖುಷಿನಗರ , ದಿಯೋರಿಯಾ, ಗುಜರಾತಿನ ಅಮ್ರೇಲಿ, ಜಿಲ್ಲೆಯ 7 ಮಂದಿ ಭಾರತೀಯರು ಕಿಡ್ನ್ಯಾಪ್ ಆಗಿದ್ದಾರೆ. ಕಳೆದ ತಿಂಗಳು 7 ಭಾರತೀಯರ ವೀಸಾ ಅವಧಿ ಮುಗಿದಿತ್ತು. ಹೀಗಾಗಿ ಭಾರತಕ್ಕೆ ವಾಪಸಾಗುವುದಕ್ಕೂ ಮುನ್ನವೇ ಈ 7 ಜನರ ಕಿಡ್ನ್ಯಾಪ್ ಮಾಡಲಾಗಿದೆ. 7 …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 33,974 ವಿದ್ಯಾರ್ಥಿಗಳು ಪದವಿ

ಬೆಳಗಾವಿ: ‘ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ (ಆರ್‌ಸಿಯು) 8ನೇ ಘಟಿಕೋತ್ಸವ ಅ. 5ರಂದು ಬೆಳಿಗ್ಗೆ 11.30ಕ್ಕೆ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದರು. ‘ರಾಜ್ಯಪಾಲ ವಿ.ಆರ್. ವಾಲಾ ಅಧ್ಯಕ್ಷತೆ ವಹಿಸುವರು. ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅತಿಥಿಯಾಗಿ ಭಾಗವಹಿಸುವರು. ಬೆಂಗಳೂರಿನ ನ್ಯಾಕ್ ನಿರ್ದೇಶಕ ಪ್ರೊ.ಎಸ್.ಸಿ. ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಾರ್ವತಿಗೆ …

Read More »

ಕಲ್ಯಾಣ್​ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್​ ಮೊರೆಹೋದ ಪ್ರೇಮಕವಿ ಪತ್ನಿ

ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಚಿತ್ರಸಾಹಿತಿ ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಕಿಡ್ನ್ಯಾಪ್‌ ಬಗ್ಗೆ ಪೊಲೀಸ್​ ಇನ್​ಸ್ಪೆಕ್ಟರ್​ ಶ್ರೀದೇವಿ ಪಾಟೀಲ್‌ರಿಂದ ವಿಚಾರಣೆ ನಡೆಸಲಾಗುತ್ತಿದ್ದು ಇನ್ನೊಂದು ಕೊಠಡಿಯಲ್ಲಿ ಅಶ್ವಿನಿ ತಂದೆ ಶಿವಾನಂದ ವಾಲಿ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಕೆ.ಕಲ್ಯಾಣ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ವಿಚ್ಛೇಧನ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. …

Read More »

ಡ್ರಗ್ಸ್​​ ಲಿಂಕ್​: ಕೊರೊನಾ ಇದೆ ನನ್ನ ಮುಟ್ಟಬೇಡಿ ಅಂತಿರೋ ಆ ನಟಿ ಯಾರು?

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧಿಸಿ ಬಾಲಿವುಡ್ ಮತ್ತು ಸ್ಯಾಂಡಲ್​ವುಡ್​ನಲ್ಲಿ ಕೇವಲ ನಟಿಯರೇ ವಿಚಾರಣೆಗೆ ಒಳಪಡುತ್ತಿದ್ದಾರೆ. ಡ್ರಗ್ಸ್ ಕೇಸ್​​ನಲ್ಲಿ ನಟಿಯರದ್ದೇ ಕೈ ಕಾಣಿಸುತ್ತಿದೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮಾಡಿರುವ ಟ್ವೀಟ್ ಕುತೂಹಲ ಕೆರಳಿಸಿದೆ. ಡ್ರಗ್ಸ್ ಕೇಸ್​ನಲ್ಲಿ ಜೈಲು ಸೇರಿರುವ ಸಂಜನಾಗೂ, ಪ್ರಶಾಂತ್ ಸಂಬರಗಿಗೂ ಹಾವು ಮುಂಗುಸಿಯ ನಂಟು. ಆಗಾಗ ಒಬ್ಬರನೊಬ್ಬರು ಕಾಲೆಳಿತಾನೇ ಇರ್ತಾರೆ. ಅಲ್ಲದೆ ಪ್ರಕರಣ ಸಂಬಂಧ ಜೈಲು ಸೇರಿದ ಮೇಲೆ ನಟಿಮಣಿಯರು ಒಂದಲ್ಲಾ ಒಂದು ತಕರಾರು ಮಾಡುತ್ತಲೇ …

Read More »

ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?

ಬೆಂಗಳೂರು: ಌಂಕರ್​ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ …

Read More »

ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು

ಬೆಳಗಾವಿ: ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಇದೀಗ, ಪ್ರಕರಣ ತಿರುವು ಪಡೆದುಕೊಂಡಿದೆ. ಹೌದು, ಇದೀಗ ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್​ ಪತ್ನಿ ಅಶ್ವಿನಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಲ್ಯಾಣ್ ಮತ್ತು ನನ್ನ ನಡುವೆ ವೈಮನಸ್ಸು ಉಂಟಾಗಿದೆ. ಕಲ್ಯಾಣ್ ಆಸ್ತಿ ವಿಚಾರಕ್ಕೆ ನನ್ನನ್ನ ಮದುವೆ ಆಗಿದ್ದಾರೆ ಅಂತ ಅಶ್ವಿನಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದಾರೆ. …

Read More »