Breaking News
Home / ಅಂತರಾಷ್ಟ್ರೀಯ (page 160)

ಅಂತರಾಷ್ಟ್ರೀಯ

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಅನ್ನದಾತರು

ಬೆಂಗಳೂರು, – ಅನ್ನದಾತರ ಆಕ್ರೋಶ ಬುಗಿಲೆದ್ದಿದೆ. ಎಪಿಎಂಸಿ, ಭೂ ಸುಧಾರಣೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು, ಕಾರ್ಮಿಕರು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕತರು ಇಂದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳ ಶಾಹಿಗಳ ಪರವಾಗಿವೆ. ರೈತರ ಪಾಲಿಗೆ ಕಂಟಕವಾಗಿದೆ ಎಂದು ರೈತ ಸಂಘಟನೆಗಳು ವಿವಿಧ …

Read More »

ಲಾಕ್‍ಡೌನ್ ವೇಳೆ ಅನುಷ್ಕಾ ಜೊತೆ ಪ್ರಾಕ್ಟೀಸ್- ಕ್ಯಾಚ್ ಡ್ರಾಪ್ ಕುರಿತು ಗವಾಸ್ಕರ್ ಕಾಮೆಂಟ್

ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಎರಡು ಕ್ಯಾಚ್ ಕೈಚೆಲ್ಲಿದ್ದರು. ಈ ಕುರಿತಂತೆ ವಿಶ್ಲೇಷಣೆ ನೀಡಿದ್ದ ಗವಾಸ್ಕರ್ ಅವರ ಕಾಮೆಂಟ್‍ಗಳು ಸದ್ಯ ವಿವಾದಕ್ಕೆ ಕಾರಣವಾಗಿದೆ. ಗವಾಸ್ಕರ್ ಕಾಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣಲದಲ್ಲಿ ಆಕ್ರೋಶ ಹೊರ ಹಾಕಿರುವ ಕ್ರಿಕೆಟ್ ಅಭಿಮಾನಿಗಳು ಸುನಿಲ್ ಗವಾಸ್ಕರ್ ಅವರ ವಿರುದ್ಧ ಕಿರಿಕಾರಿದ್ದಾರೆ. ಅಲ್ಲದೇ ಕಾಮೆಂಟರಿ ಬಾಕ್ಸ್ ನಿಂದ ಅವರನ್ನು ಮನೆಗೆ ವಾಪಸ್ ಕಳುಹಿಸಲು ಆಗ್ರಹಿಸಿದ್ದಾರೆ. ಸೆ.24 ರಂದು ದುಬೈನಲ್ಲಿ …

Read More »

ಸಿಆರ್‌ಪಿಎಫ್‌ ಯೋಧರ ಮೇಲೆ ಮತ್ತೆ ಉಗ್ರರ ದಾಳಿ

ಶ್ರೀನಗರ,  -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …

Read More »

ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?

ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್​ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​​ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …

Read More »

ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್​ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ …

Read More »

ಬೆಂಗಳೂರಲ್ಲಿ ಸೋಂಕು ಪತ್ತೆ ಶೇ.5ಕ್ಕಿಂತ ಕಡಿಮೆ ಮಾಡಿ: ಪ್ರಧಾನಿ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊರೋನಾ ಸೋಂಕು ಪರೀಕ್ಷೆ ಪ್ರಮಾಣ ದ್ವಿಗುಣಗೊಳಿಸಿ ಹಾಗೂ ಸೋಂಕು ಪತ್ತೆ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೊಳಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಕ್ಕೆ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕಳೆದ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದರು. ಈ ವೇಳೆ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೋನಾ …

Read More »

ಮಗನ ಅಂತಿಮ ದರ್ಶನ ಇಲ್ಲದ್ದಕ್ಕೆ ಕಣ್ಣೀರಿಟ್ಟ ಅಂಗಡಿ ತಾಯಿ

ಬೆಳಗಾವಿ  : ದೆಹಲಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಸಂಸ್ಕಾರ ನಡೆಯುತ್ತಿದ್ದರೆ, ಬೆಳಗಾವಿಯ ಅವರ ನಿವಾಸದಲ್ಲಿ ತಾಯಿ ಸೋಮವ್ವ ಅವರ ಸಂಕಟ, ವೇದನೆ ಹೇಳತೀರದ್ದಾಗಿತ್ತು. ಕಣ್ಣೆದುರೇ ಬಹು ಎತ್ತರಕ್ಕೆ ಬೆಳೆದಿದ್ದ ಮಗನ ಅಕಾಲಿಕ ಮರಣದ ದುಃಖದೊಂದಿಗೇ ಕೈಯ್ಯಾರೆ ಬೆಳೆಸಿದ ಮಗನನ್ನು ಅಂತಿಮವಾಗಿ ನೋಡಲು ಸಾಧ್ಯವಾಗಲಿಲ್ಲವಲ್ಲ ಎಂಬ ನೋವು ಅವರನ್ನು ಆವರಿಸಿಕೊಂಡಿತ್ತು. ಕೋವಿಡ್‌ ನಿಯಮಾನುಸಾರ ಅಂಗಡಿಯವರ ಪಾರ್ಥಿವ ಶರೀರರನ್ನು ಹುಟ್ಟೂರಿಗೂ ತರಲಾಗಿರಲಿಲ್ಲ. ತಾಯಿ ಸೋಮವ್ವ ಅಂಗಡಿ ಮಗನ …

Read More »

ಹಂಪಿಗೆ ಡಬಲ್‌ ಡೆಕ್ಕರ್‌ ಬಸ್‌!300 ರು. ಫಿಕ್ಸ್

ಹೊಸಪೇಟೆ : ಕಣ್ಣಿದ್ರೇ ಕನಕಗಿರಿ ನೋಡಬೇಕು… ಕಾಲಿದ್ರೇ ಹಂಪಿ ಸುತ್ತಬೇಕು ಅನ್ನೋ ವಾಡಿಕೆ ಮಾತಿಗೆ ಮತ್ತೊಂದು ಸೇರ್ಪಡೆ, ಹಣವಿದ್ದವರಿಗೆ ಡಬಲ್‌ ಡೆಕ್ಕರ್‌ ಬಸ್‌! ಹೌದು, ಇನ್ಮುಂದೆ ಹಂಪಿಯ ಸ್ಮಾರಕಗಳ ಸೊಬಗನ್ನು ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಸುತ್ತಾಡಿ ಕಣ್ಣದುಂಬಿಕೊಳ್ಳಬಹುದು. ಹಂಪಿಯಲ್ಲಿ ಆರಂಭದಲ್ಲಿ ಮೂರು ಬಸ್‌ಗಳು ಬರಲಿವೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಈ ಬಗ್ಗೆ ಯೋಜನೆ ರೂಪಿಸಿದ್ದು, ಹಂಪಿಯಲ್ಲಿ ಬಸ್‌ ಓಡಾಟದ ಕುರಿತ ಮಾರ್ಗ (ರೂಟ್‌ ಸರ್ವೇ) ಸಮೀಕ್ಷೆ ನಡೆಸಲಾಗುತ್ತಿದೆ. ಭೋರ್ಗರೆದ ತುಂಗಭದ್ರಾ: …

Read More »