Home / ಅಂತರಾಷ್ಟ್ರೀಯ (page 161)

ಅಂತರಾಷ್ಟ್ರೀಯ

ಮತ್ತೆ ಲಾಕ್‌ಡೌನ್ ಇಲ್ಲ; ಮೈಕ್ರೋ ಸೀಲ್‌ಡೌನ್‌ ಜಾರಿಗೆ ಚಿಂತನೆ..!

ಬೆಂಗಳೂರು : ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಡೆಯಲು ಮತ್ತೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಾಗುವುದೇ ಎಂಬ ಚರ್ಚೆ ಆರಂಭವಾಗಿದೆ. ಆದರೆ ಈ ಹಿಂದಿನಂತೆ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗುವ ಸಾಧ್ಯತೆಗಳು ಇಲ್ಲ. ಆದರೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮೈಕ್ರೋ ಸೀಲ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಕೋವಿಡ್‌ ನಿಯಂತ್ರಣ ಕುರಿತಂತೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ನಡೆಸಿದ ಸಂವಾದದಲ್ಲಿ ಈ ವಿಷಯ ಸೂಕ್ಷ್ಮವಾಗಿ …

Read More »

BSY ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಮಂಡನೆ..!

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರವು ಸದನದ ವಿಶ್ವಾಸ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಅವಿಶ್ವಾಸ ಪ್ರಸ್ತಾಪಕ್ಕೆ ಅನುಮತಿ ಸಿಕ್ಕಿದೆ. ಕೋವಿಡ್‌ನಿಂದಾಗಿ ಆಡಳಿತಾರೂಢ ಬಿಜೆಪಿಯ ಹಲವು ಸಚಿವರು ಹಾಗೂ ಶಾಸಕರು ಸದನಕ್ಕೆ ಆಗಮಿಸುವುದು ಕಷ್ಟವಿರುವುದರಿಂದ ಈ ನಿರ್ಣಯ ಎದುರಿಸಿ ಗೆಲ್ಲುವುದು ಸಹಜವಾಗಿಯೇ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಾಗಿ ಪರಿಣಮಿಸಿದೆ. ಗುರುವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ವಿಶ್ವಾಸ ಕಳೆದುಕೊಂಡಿರುವ ಬಗ್ಗೆ ನೋಟಿಸ್‌ ನೀಡಲಾಗಿದ್ದು, …

Read More »

ಈ ವರ್ಷ ವ್ಯಾಕ್ಸಿನ್‌ ಅನುಮಾನ : ಜನರೇ ಎಚ್ಚರ

ಬೆಂಗಳೂರು : ಕೊರೋನಾ ಸೋಂಕಿಗೆ ಪ್ರಸಕ್ತ ವರ್ಷದಲ್ಲಿ ವ್ಯಾಕ್ಸಿನ್‌ ಬರುವುದು ಬಹುತೇಕ ಅನುಮಾನ. ಜತೆಗೆ, ಈ ಹಂತದಲ್ಲಿ ಲಾಕ್ಡೌನ್‌ ಮಾಡುವುದು ಸಹ ಪ್ರಯೋಜನಕಾರಿಯಲ್ಲ. ಹೀಗಾಗಿ ಸಾರ್ವಜನಿಕರೇ ಹೆಚ್ಚು ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ರಾಜ್ಯ ಕೊರೋನಾ ಟಾಸ್ಕ್‌ಫೋರ್ಸ್‌ ಸದಸ್ಯರಾದ ಡಾ.ಸಿ.ಎನ್‌. ಮಂಜುನಾಥ್‌ ಹೇಳಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರೂ ಆದ ಮಂಜುನಾಥ್‌ ಅವರ ಪ್ರಕಾರ, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಈಗಾಗಲೇ ಸೋಂಕು ಹರಡಿರುವುದರಿಂದ ಈ ಹಂತದಲ್ಲಿ …

Read More »

ಗೂಡ್ಸ್ ರೈಲು ಅಡಿಗೆ ಬಿದ್ದ ಎರಡು ವರ್ಷದ ಬಾಲಕ ಬಚಾವ್​ ಆಗಿದ್ದು ಹೇಗೆ ನೋಡಿ..

ಫರೀದಾಬಾದ್​: ಹರಿಯಾಣದ ಫರೀದಾಬಾದ್ ಜಿಲ್ಲೆಯ ವಲ್ಲಭಗಢ ರೈಲ್ವೆ ನಿಲ್ದಾಣದಲ್ಲಿ ಎರಡು ವರ್ಷದ ಬಾಲಕನೊಬ್ಬ ಗೂಡ್ಸ್ ರೈಲಿನ ಅಡಿಗೆ ಬಿದ್ದು ಅದೃಷ್ಟವಶಾತ್ ಒಂದಿನಿತೂ ಗಾಯವಿಲ್ಲದೆ ಬಚಾವ್ ಆಗಿದ್ದಾನೆ. ಈ ಕುರಿತ ವಿಡಿಯೋ ವೈರಲ್​ ಆಗಿದೆ. ಗೂಡ್ಸ್ ರೈಲ್​ ವೇಗವಾಗಿ ಸಂಚರಿಸುತ್ತಿದ್ದ ವೇಳೆ, ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹಳಿಯ ಮೇಲೆ ಈ ಬಾಲಕ ಆಡವಾಡುತ್ತಿದ್ದ. ದೂರದಿಂದ ಇದನ್ನು ಗಮನಿಸಿದ ಗೂಡ್ಸ್ ರೈಲಿನ ಲೋಕೊ ಪೈಲಟ್ ಕೂಡಲೇ ತುರ್ತು ಬ್ರೇಕ್ ಹಾಕಿದ್ದ. ಆದರೆ, ಅಷ್ಟರಲ್ಲಾಗಲೇ ಸಮಯ …

Read More »

ರಾಜ್ಯದ ಜನತೆಗೆ ಗುಡ್‌ ನ್ಯೂಸ್‌: ಇನ್ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಸಿಗಲಿದೆ ‘ಜನನ- ಮರಣ ಪ್ರಮಾಣ ಪತ್ರ’

ಮಂಗಳೂರು : ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ ನೇಮಸಿ ಸರ್ಕಾರವು ಆದೇಶಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಆನ್‍ಲೈನ್ ಜನನ ಮರಣ ನೋಂದಣಿ ವ್ಯವಸ್ಥೆಯು 2015 ರ ಎಪ್ರಿಲ್ 1 ರಿಂದ ಜಾರಿಯಲ್ಲಿದ್ದು, ಸದರಿ ದಿನಾಂಕದ ನಂತರದಲ್ಲಿ ನೋಂದಣಿಯಾದ ದಾಖಲೆಗಳನ್ನು ಸರ್ಕಾರವು ನಿಗದಿಪಡಿಸಿದ ದರಗಳನ್ವಯ ಸೇವಾ ಶುಲ್ಕವನ್ನು ಪಾವತಿಸಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರು ಪ್ರಮಾಣ ಪತ್ರಗಳನ್ನು ಪಡೆಯಬಹುದು. 2015 …

Read More »

ಉದ್ಯಮಿ ಪುತ್ರನ ಅಪಹರಣ: ಪೊಲೀಸರ ಮೇಲೆ ಹಲ್ಲೆ, ಆರೋಪಿಗೆ ಶೂಟ್‌

ಬೆಂಗಳೂರು : ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ಐದು ಲಕ್ಷ ರು.ಗಳಿಗೆ ಬೇಡಿಕೆ ಇಟ್ಟಿದ್ದ ಕಿಡಿಗೇಡಿಗೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಕೋಣನಕುಂಟೆ ನಿವಾಸಿ ಕೃಷ್ಣ ಅಲಿಯಾಸ್‌ ಆಟೋ ಕೃಷ್ಣ ಎಂಬಾತನಿಗೆ ಗುಂಡೇಟು ಬಿದ್ದಿದ್ದು, ಹುಳಿಮಾವು ಸಮೀಪದ ಬೇಗೂರು-ಕೊಪ್ಪ ರಸ್ತೆಯಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದೆ. ಉದ್ಯಮಿ ಜೋಸೆಫ್‌ ಪುತ್ರ ಜೋಕಿಮ್‌ನನ್ನು ರಕ್ಷಿಸಲಾಗಿದೆ. ಬೇಗೂರು ಸುತ್ತಮುತ್ತ ಜೆಲ್ಲಿ ಕಲ್ಲು ಗಣಿಗಾರಿಕೆಯಲ್ಲಿ ಸಂತ್ರಸ್ತ ಜೊಕಿಮ್‌ ತಂದೆ ಜೋಸೆಫ್‌ …

Read More »

ಅಥಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಬಸ್ ನಿಲ್ದಾಣದ ಪರಸ್ಥಿತಿ

  ಅಥಣಿ : ಪಟ್ಟಣದಲ್ಲಿ ಇತ್ತಿಚೆಗೆ ಕಟ್ಟಿದ ಬಸ ನಿಲ್ದಾಣದ ಕಾಮಗಾರಿಯು‌ ಅವೈಜ್ಞಾನಿಕವಾಗಿದೆ . ಏಕೆಂದರೆ ಸತತ ಮೂರು ದಿನದಿಂದ ಪ್ರತಿನಿತ್ಯ ಸುರಿಯುತ್ತಿರುವ ಮಳೆಗೆ ಶೌಚಾಲಯದಲ್ಲಿ ಮೋಳಕಾಲಿನ ವರೆಗೂ ನೀರು ನಿಂತು ಯಾರು ಹೋಗದಂತಾಗಿದೆ . ಅದಕ್ಕೆ ನೀರು ಹೋರ ಹೋಗಲು ಯಾವುದೆ ದಾರಿ ಇಲ್ಲದೆ ಬಂದ ನೀರೆಲ್ಲಾ ಶೌಚಾಲದಯ ಮೂಲಕವೆ ಹೋಗಬೇಕಾ ಅನಿವಾರ್ಯತೆ ಎದುರಾಗಿದೆ . ಇದರಿಂದಾಗಿ ಹಲವಾರು ಗಂಟೆಗಳವರೆಗೂ ಯಾರು ಶೌಚಾಲದ ಒಳಗೆ ಹೋಗದಂತಾಗಿತ್ತು ಮತ್ತು ಹೋಗಬೇಕಾದರು …

Read More »

ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ 18 ಕೆಜಿ ಗಾಂಜಾ ವಶ ಆರೋಪಿ ಬಂಧನ.

  ಅಥಣಿ : ಪರ್ಮಿಷನ್  ಇಲ್ಲದೇ ಅಕ್ರಮವಾಗಿ ಗಾಂಜಾ  ಮಾದಕ ಪದಾರ್ಥವನ್ನು ತನ್ನ ಜಮೀನದಲ್ಲಿ ಬೆಳೆಸಿ ಅವುಗಳನ್ನು ಕಿತ್ತು ಮಾರಾಟ ಮಾಡುವ ಸಲುವಾಗಿ ತನ್ನ ಮನೆಯ ಮುಂದೆ ಇಟ್ಟು ಕೊಂಡಾಗ ದಾಳಿ ಮಾಡಿ ಅಥಣಿ  ಪೊಲೀಸರು  ಕಾರ್ಯಾಚರಣೆ ನಡೆಸಿ 18 ಕೆಜಿ ಗಾಂಜಾ ವಶಪಡಿಸಿಕೊಂಡು  ಆರೋಪಿಯನ್ನು  ಬಂಧಿಸಿದ್ಧಾರೆ. ಅಥಣಿ ತಾಲ್ಲೂಕಿನ ಆರೋಪಿ ಕರೆಪ್ಪ ಶ್ರೀಪಣ್ಣ ಐನಾಪೂರೆ @ ದೇವಕತೆ ಸಾ || ಹಣಮಾಪೂರ ಹಾಲಿ ಮದಬಾವಿ ಕುಂಬಾರ ಗುತ್ತಿ ಸದರಿ ಆರೋಪಿತನು ತನ್ನ ಸ್ವಂತ ಪಾಯ್ದೆಗೊಸ್ಕರ ಯಾವುದೇ …

Read More »

ಕೊನೆಯ ಬಾರಿ ಮಗನ ಮುಖ ನೋಡಲಾಗದೆ, ಸುರೇಶ್​​ ಅಂಗಡಿ ತಾಯಿಯ ಆಕ್ರಂದನ

ಬೆಳಗಾವಿ: ಕೇಂದ್ರ ಸಚಿವ ಸುರೇಶ್​ ಅಂಗಡಿ ನಿನ್ನೆ ಕೊರೊನಾದಿಂದ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ. ಸುರೇಶ್​ ಸಂಗಡಿ ತಾಯಿ ಸೋಮವ್ವ ಅವರ ಆಕ್ರಂದನ ಮುಗಿಲು ಮುಟ್ಟಿದ್ದು ಕೊನೆಯ ಬಾರಿ ಮಗನ ಮುಖ ನೋಡಲು ಅವಕಾಶ ಸಿಗದೆ ತೀವ್ರ ದುಃಖ ಅನುಭವಿಸುತ್ತಿದ್ದಾರೆ. ಸೋಮವ್ವ ಮಗನ ಸಾವಿನ ಸುದ್ದಿ ಕೇಳಿ ನಿನ್ನೆಯೇ ಕೆ.ಕೆ ಕೊಪ್ಪದಿಂದ ಬೆಳಗಾವಿ ನಿವಾಸಕ್ಕೆ ಆಗಮಿಸಿದ್ದಾರೆ. ಆದ್ರೆ ಏಮ್ಸ್​ ಆಸ್ಪತ್ರೆಯಲ್ಲಿರುವ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರುವುದು …

Read More »

ಕರ್ನಾಟಕದ ಬೌದ್ಧ ಭಿಕ್ಕುಗಳಿಗೆ ಚೀನಾದಿಂದ ಲಂಚ!

ನವದೆಹಲಿ: ಭಾರತದಲ್ಲಿ ನೆಲೆಯೂರಿರುವ ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಹಾಗೂ ಅವರ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು, ಲಾಮಾ ಉತ್ತರಾಧಿಕಾರಿ ಸ್ಥಾನಕ್ಕೆ ಚೀನಾ ಮೂಲದ ವ್ಯಕ್ತಿಯ ಪರ ಬೆಂಬಲ ಗಳಿಸಲು ದೇಶದ ವಿವಿಧೆಡೆ ನೆಲೆಸಿರುವ ಬೌದ್ಧ ಭಿಕ್ಕುಗಳಿಗೆ ಚೀನಾ ಭರ್ಜರಿ ಲಂಚ ನೀಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಬೈಲಕುಪ್ಪೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿರುವ ಟಿಬೆಟಿಯನ್‌ ಶಿಬಿರದಲ್ಲಿರುವ ಬೌದ್ಧ ಸನ್ಯಾಸಿಗಳಿಗೆ ಲಕ್ಷಾಂತರ ರು. ಹಣವನ್ನು ಚೀನಾ ಸಂದಾಯ …

Read More »