Breaking News
Home / ಅಂತರಾಷ್ಟ್ರೀಯ (page 211)

ಅಂತರಾಷ್ಟ್ರೀಯ

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

ಭಾರತಕ್ಕೆ ಸದಾ ಹೊರೆಯಾಗಿರೋ ನೆರೆ ರಾಷ್ಟ್ರ ಅಂದ್ರೆ ಅದು ಪಾಕಿಸ್ತಾನ. ಭಾರತಕ್ಕೆ ಕಿರುಕುಳ ನೀಡೋದ್ರಲ್ಲಿ ಸದಾ ಮುಂದಿರೋ ಪಾಪಿ ಪಾಕಿಸ್ತಾನ ಜಗತ್ತಿನ ಮುಂದೆ ಮತ್ತೊಮ್ಮೆ ಬೆತ್ತಲಾಗಿದೆ. ಈ ಮೂಲಕ ತನ್ನ ನರಿಬುದ್ಧಿಯನ್ನ ವಿಶ್ವದ ಎದುರು ಬಯಲಾಗಿದೆ. ಭಾರತಕ್ಕೆ ಬೇಕಿರೋ ಮೋಸ್ಟ್ ವಾಂಟೆಂಡ್ ಕ್ರಿಮಿನಲ್​ಗಳಿಗೆ ಪಾಕಿಸ್ತಾನದ ನೆಲದಲ್ಲಿ ಜಾಗ ನೀಡಿರುವುದನ್ನ ಒಪ್ಪಿಕೊಂಡಿದೆ ಅಂತಾ ಪಾಕಿಸ್ತಾನದಿಂದ್ಲೇ ವರದಿ ಹೊರಬಿದ್ದಿದೆ. ದಾವೂದ್ ತನ್ನ ನೆಲದಲ್ಲಿರೋದಾಗಿ ಒಪ್ಪಿಕೊಂಡಿತಾ ಪಾಕ್? ಪಾಕಿಸ್ತಾನದ ಸ್ಥಳೀಯ ಮಾಧ್ಯಮದ ವರದಿಯನ್ನ ಆಧರಿಸಿ, …

Read More »

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ. ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು …

Read More »

ರಾಜ್ಯದ ಇಬ್ಬರು ಕೈ ನಾಯಕರಿಗೆ `AICC’ಯಲ್ಲಿ ಉನ್ನತ ಹುದ್ದೆ?

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರಾದ ಕೆ.ಹೆಚ್. ಮುನಿಯಪ್ಪ ಹಾಗೂ ಹೆಚ್.ಕೆ.ಪಾಟೀಲ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಉನ್ನತ ಹುದ್ದೆ ನೀಡಲು ಮುಂದಾಗಿದೆ ಎನ್ನಲಾಗಿದ್ದು, ಹೆಚ್.ಕೆ.ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದ್ದು, ಕೆ.ಹೆಚ್. ಮುನಿಯಪ್ಪ ಅವರಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ …

Read More »

ಹಬ್ಬದ ಸಂಭ್ರಮದ ಮಧ್ಯೆ ಊರಿನ ಹೊರಭಾಗದಲ್ಲಿ ಪತ್ತೆಯಾದ ಬ್ಯಾಗ್​ ತೆರೆದ ಗ್ರಾಮಸ್ಥರಿಗೆ ಶಾಕ್​!​

ಕಲಬುರಗಿ: ಮಹಾಮಾರಿ ಕರೊನಾ ವೈರಸ್​ ಭೀತಿಯ ನಡುವೆಯೂ ರಾಜ್ಯದೆಲ್ಲಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿರುವ ಸಮಯದಲ್ಲೇ ಕಲಬುರಗಿಯಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಕೋವಿಡ್​ಗಿಂತಲೂ ಕ್ರೂರಿ ಎಂಬುದನ್ನು ನಿರೂಪಿಸಿದೆ. ಬಹುತೇಕರು ನಮಗೆ ಮಕ್ಕಳಾಗಿಲ್ಲವಲ್ಲ ಎಂದು ದಿನನಿತ್ಯ ಕೊರಗುತ್ತಿರುತ್ತಾರೆ. ಗಂಡಾಗಲಿ ಅಥವಾ ಹೆಣ್ಣಾಗಲಿ ನಮಗೊಂದು ಮಗು ಕರುಣಿಸಪ್ಪಾ ಎಂದು ದೇವರಲ್ಲಿ ಪ್ರಾರ್ಥಿಕೊಳ್ಳುವವರಿಗೇನು ಕಡಿಮೆಯಿಲ್ಲ. ಆದರೆ, ಇವೆಲ್ಲದರ ನಡುವೆ ಮಗು ಜನಿಸಿದರು ಅದು ಬೇಡವೆಂದು ರಸ್ತೆಯಲ್ಲಿ ಅನಾಥವಾಗಿ ಎಸೆದು ಹೋಗುವವರನ್ನು ಎಷ್ಟು ಬೈದರು ಕಡಿಮೆಯೇ. …

Read More »

ಕೊರೊನಾ ಬುಲೆಟಿನ್ : ‘ಗಣೇಶ ಚತುರ್ಥಿ’ ದಿನದಂದೇ ರಾಜ್ಯದಲ್ಲಿ 7330 ಮಂದಿಗೆ ಸೋಂಕು ಧೃಡ, 93 ಬಲಿ

ಬೆಂಗಳೂರು : ಗೌರಿ ಗಣೇಶ ಹಬ್ಬದ ದಿನ ಕೂಡ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ.ರಾಜ್ಯದಲ್ಲಿ ಇಂದು 7330 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೌದು, ರಾಜ್ಯದಲ್ಲಿ ಇಂದು 7330 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,71,876 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 93 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು. ಒಟ್ಟಾರೆ ಸಾವಿನ ಸಂಖ್ಯೆ 4615 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕಳೆದ 24 …

Read More »

ಕೊರೊನಾ ಹಾವಳಿಯಿಂದ ಕುಂದಿದ ಹಬ್ಬದ ಖರೀದಿ: ಸುಮಾರು 400 ಕೋಟಿ ರೂ. ವಹಿವಾಟು ಖೋತಾ?

ಬೆಂಗಳೂರು:ಕೊರೊನಾ ಮಹಾಮಾರಿ ದೇಶದ ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಿದೆ. ಈಗ ಅದರ ಹೊಡೆತ ಗಣೇಶೋತ್ಸವಕ್ಕೂ ತಗಲಿದ್ದು, ರಾಜ್ಯಾದ್ಯಂತ ಸುಮಾರು 400 ಕೋಟಿ ರೂಪಾಯಿಯಷ್ಟು ವಹಿವಾಟು ಖೋತಾ ಹೊಡೆದಿದೆ. ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಸೇರುವ ಆಚರಣೆಗಳಿಗೆ ಬ್ರೇಕ್ ಹಾಕಲಾಗಿದೆ.ಇದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಬೃಹತ್ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ, ಬೃಹತ್ ಗಣೇಶ ಮೂರ್ತಿಗಳು ವ್ಯಾಪಾರವಾಗದೆ, ಮೂರ್ತಿ ತಯಾರಕರಿಗೆ ಭಾರಿ …

Read More »

ಗಣೇಶೋತ್ಸವ: ಮಾರ್ಗಸೂಚಿ ಪಾಲನೆ ಕಡ್ಡಾಯ

ಹರಿಹರ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನಗರಸಭೆ ಪೌರಾಯುಕ್ತೆ ಎಸ್‌.ಲಕ್ಷ್ಮಿ ತಿಳಿಸಿದ್ದಾರೆ. ದೇವಸ್ಥಾನ, ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬವನ್ನು 20 ಜನರ ಸಂಖ್ಯೆ ಮೀರದಂತೆ ಆಚರಿಸಬೇಕು. ಸಾರ್ವಜನಿಕ ಸ್ಥಳದ ಮೂರ್ತಿ 4 ಅಡಿ, ಮನೆಗಳಲ್ಲಿ 2 ಅಡಿ ಅಳತೆ ಮೀರಬಾರದು. ನಗರಸಭೆಯಿಂದ ಪೂರ್ವಾನುಮತಿ ಪಡೆಯಬೇಕು. ವಾರ್ಡ್‌ಗೆ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಮೆರವಣಿಗೆ ಸೇರಿದಂತೆ ಸಾಂಸ್ಕೃತಿಕ, ಸಂಗೀತ, …

Read More »

ರಾಜ್ಯದಲ್ಲಿಂದು 7,571 ಜನರಿಗೆ ಸೋಂಕು.. ಜಿಲ್ಲಾವಾರು ಮಾಹಿತಿ ಇಲ್ಲಿದೆ ನೋಡಿ

ರಾಜ್ಯದಲ್ಲಿ ಇವತ್ತು 7,571 ಜನರಿಗೆ ಸೋಂಕು ತಗುಲಿದ್ದು, 93 ಜನ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,64,546 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,522 ಆಗಿದೆ. ಇವತ್ತು 6,561 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 1,76,942 ಆಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ ಕೂಡ 83,066 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 698 ರೋಗಿಗಳು ತೀವ್ರ ನಿಗಾ ಘಟಕದಲ್ಲಿದ್ದಾರೆ. ಇವತ್ತು …

Read More »

ಮಂಗಳವಾರ ಉತ್ತರ ಕರ್ನಾಟಕ ಭಾಗದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

ಬೆಂಗಳೂರು : ಭಾರೀ ಮಳೆಯಿಂದಾಗಿ ರಾಜ್ಯದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಹಾನಿ ಸಂಭವಿಸಿದ್ದು, ಈ ಕುರಿತು ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ 9 ಗಂಟೆಗೆ ಹೆಚ್‍ಎಎಲ್‍ನಿಂದ ಬೆಳಗಾವಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ, ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ಮಳೆ ಹಾನಿ ಸಂಬಂಧ ಸಭೆ ನಡೆಸಲಿದ್ದಾರೆ. ಬಳಿಕ 11.15ಕ್ಕೆ …

Read More »

ಕಿತ್ತೂರು ಕ್ಷೇತ್ರದಲ್ಲಿ ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪಿಸಿ

ಬೈಲಹೊಂಗಲ: ಕೈಗಾರಿಕೆ ರಫ್ತು ವಲಯ ಕೇಂದ್ರ ಸ್ಥಾಪನೆ ತೀರ ಅಗತ್ಯವಾಗಿದ್ದು, ತಮ್ಮ ಕಿತ್ತೂರು ಮತಕ್ಷೇತ್ರದಲ್ಲಿ ಇದನ್ನು ತೆರೆಯುವಂತೆ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ರಫ್ತು ಪ್ರಮೋಷನ್‌ ಸಮಿತಿ ಸಭೆಯ ನಂತರ ಶಾಸಕರ ಕಾರ್ಯಾಲಯದಿಂದ ಈ ಕುರಿತು ಹೇಳಿಕೆ ನೀಡಿರುವ ಶಾಸಕರು ತಮ್ಮ ಬೇಡಿಕೆಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಪ್ರದೇಶದಲ್ಲಿ ಕೈಗಾರಿಕಾ ರಫ್ತು ವಲಯ …

Read More »