ಬೆಳಗಾವಿ: ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡುವಂತೆ ಮನವಿಮಾಡಲು ಮುಂದಿನ ವಾರ ನಾನು ದೆಹಲಿಗೆ ತೆರಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ. ಪರಿಹಾರದ ಕುರಿತು ಶಾಸಕರೊಂದಿಗೆ ಶೀಘ್ರಸಭೆಕರೆದು ಯೋಜನೆ ರೂಪಿಸುವುದಾಗಿ ತಿಳಿಸಿದ್ದಾರೆ, ಹಾಗೂ ಈ ಬಗ್ಗೆ ಸಂಪೂರ್ಣ …
Read More »ಡಿಕೆಶಿಗೆ ಕೊರೊನಾ ಸೋಂಕು
ಹೌದು ಇಡೀ ದೇಶಕ್ಕೆ ಬಂದಿರುವ ಈ ಕೊರೊನ ಎಂಬ ಸಾಂಕ್ರಾಮಿಕ ಕಾಯಿಲೆ ನಮ್ಮ ರಾಜ್ಯಕ್ಕೂ ಬಂದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಮತ್ತು ಸುಮಾರು ಐದು ತಿಂಗಳಿನಿಂದ ಆರಂಭವಾದ ಕೊರೊನ ಈಗಾಗಲೇ ಸಾಕಷ್ಟು ಜನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದೆ, ಮತ್ತು ಈಗ ಬಂದಿರುವ ಮಾಹಿತಿ ಪ್ರಕಾರ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೂ ಕೊರೊನ ವೈರಸ್ ಸೋಂಕು ತಗುಲಿದೆ ಎನ್ನಲಾಗಿದೆ. ಅಧ್ಯಕ್ಷ ಡಿ …
Read More »ಸಾಂಬ್ರಾ ವಿಮಾನ ನಿಲ್ದಾಣ ಪ್ರವೇಶ ದ್ವಾರದಲ್ಲಿ ರೈತರ ಪ್ರತಿಭಟನೆ
ಬೆಳಗಾವಿ: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರುಸೇನೆಯವರು ಸಾಂಬ್ರಾ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಧರಣಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಮಾನನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಇದೇ ವೇಳೆ ರೈತರು ಹೊರಗಡೆ ಧರಣಿ ನಡೆಸುತ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಕಿತ್ತುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಬಂಡವಾಳಶಾಹಿಗಳು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಹೋದ ವರ್ಷ ನೆರೆ …
Read More »ಜಲಾಶಯಕ್ಕೆ ಸಿಎಂ ಭೇಟಿ : ಬಿಗಿ ಭದ್ರತೆ, ಶೃಂಗಾರಗೊಂಡ ಆಲಮಟ್ಟಿ ಜಲಾಶಯ
ವಿಜಯಪುರ: ಇಂದು ಸಿ ಎಮ್ ಯಡಿಯೂರಪ್ಪನವರು ಆಲಮಟ್ಟಿ ಜಲಾಶಯಕ್ಕೆ ಇಂದು ಮದ್ಯಾಹ್ನ ಆಗಮಿಸುವ ಹಿನ್ನಲೆಯಲ್ಲಿ ಆಲಮಟ್ಟಿ ತಳಿರು ತೋರಣಗಳು, ಪುಷ್ಪಗಳಿಂದ ಶೃಂಗಾರಗೊಂಡಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಕೆ.ಬಿ.ಜಿ ಎನ್.ಎಲ್ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪತ್ರಕರ್ತರಿಗೂ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ. ಸಿಎಂ ಸ್ವಾಗತ ಕೋರಿ ಆಲಮಟ್ಟಿ ಜಲಾಶಯ, ಪ್ರವೇಶ ದ್ವಾರ, ವೃತ್ತ ಸೇರಿದಂತೆ ಪಟ್ಟಣದಲ್ಲಿ ಹೂವಿನ ಅಲಂಕಾರ …
Read More »ಹೆಲಿಕಾಪ್ಟರ್ನಲ್ಲಿ ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಹೆಲಿಕಾಪ್ಟರ್ನಲ್ಲಿ ಸಿಎಂ ಬಿಎಸ್ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸಿಎಂ ಬಿಎಸ್ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
Read More »ವಿಶ್ವದ ಅತಿ ವೇಗದ ಓಟಗಾರ ಉಸೈನ್ ಬೋಲ್ಟ್ಗೆ ಕೊರೊನಾ
ಲಂಡನ್: ವಿಶ್ವದ ಅತೀ ವೇಗದ ಓಟಗಾರ, ಒಲಿಂಪಿಕ್ನಲ್ಲಿ 8 ಬಾರಿ ಚಿನ್ನದ ಪದಕ ತನ್ನದಾಗಿಸಿಕೊಂಡಿರುವ ಉಸೈನ್ ಬೋಲ್ಟ್ಗೆ ತನ್ನ 34ನೇ ಹುಟ್ಟುಹಬ್ಬ ಆಚರಿಸಿಕೊಂಡ ಕೆಲವೇ ದಿನಗಳ ಬಳಿಕ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕುರಿತು ಸ್ವತಃ ಬೋಲ್ಟ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ಎಲ್ಲರಿಗೂ ಶುಭೋದಯ, ನನಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ. ಶನಿವಾರ ನಾನು ಪರೀಕ್ಷೆ ಮಾಡಿಸಿದ್ದೆ. ಹೀಗಾಗಿ ಮನೆಯಲ್ಲೇ ಐಸೋಲೇಶನ್ಗೆ ಒಳಗಾಗಿದ್ದೇನೆ. ನನಗೆ ಯಾವುದೇ ರೀತಿಯ …
Read More »ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!
ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …
Read More »ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ
ಗಂಗಾವತಿ : ನಗರದ ಬಿಜೆಪಿ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ದೇವಪ್ಪ ಕಾಮದೊಡ್ಡಿ (45) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ತೀವ್ರ ಉಸಿರಾಟ ತೊಂದರೆಗೆ ಒಳಗಾಗಿ ಹುಬ್ಬಳ್ಳಿ ಕೆಎಲ್ಇ ಸುಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಹಿಂದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಆಪ್ತ ಬೆಂಬಲಿಗರಾಗಿದ್ದ ದೇವಪ್ಪ ಕಾಮದೊಡ್ಡಿ …
Read More »ಬಾಲೆಯರು ಬಾಲ್ಯದಿಂದ ಬೆಂಕಿಗೆ ನಾಲ್ಕು ತಿಂಗಳಲ್ಲಿ 107 ಬಾಲ್ಯವಿವಾಹ
ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್ಡೌನ್ನ ನಿರ್ಬಂಧಗಳಿಂದ ಉಂಟಾದ ಸ್ತಬ್ಧತೆಯ ಲಾಭ ಪಡೆದು ಹಲವು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗಿದೆ. ಲಾಕ್ಡೌನ್ಗಿಂತ ಹಿಂದಿನ ಅವಧಿಗೆ ಹೋಲಿಸಿದರೆ ಲಾಕ್ಡೌನ್ ದಿನಗಳಲ್ಲಿ ನಡೆದ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚು ಎಂದು ಅಂಕಿ ಅಂಶಗಳು ಹೇಳುತ್ತವೆ. ಬಾಲ್ಯ ವಿವಾಹ ಮಾಡಿಯೇ ತೀರಬೇಕು ಎಂದು ಹಟಕ್ಕೆ ಬಿದ್ದವರು ವಿವಿಧ ರೀತಿಯ ತಂತ್ರ, ಕುತಂತ್ರಗಳನ್ನು ಹೆಣೆದ ವರದಿಗಳು ರಾಜ್ಯದ ವಿವಿಧೆಡೆಯಿಂದ ಬಂದಿವೆ. ಮದುವೆ …
Read More »ರಾಜ್ಯದಲ್ಲಿ ಕಡಿಮೆಯಾಯ್ತಾ ಸೋಂಕಿತರು, ಸಾವಿನ ಸಂಖ್ಯೆ..?
ಬೆಂಗಳೂರು : ರಾಜ್ಯದಲ್ಲಿ ಭಾನುವಾರ 5,938 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 68 ಮಂದಿ ಸಾವನ್ನಪ್ಪಿದ್ದಾರೆ. 4,996 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 2.77 ಲಕ್ಷಕ್ಕೆ ಏರಿಕೆಯಾದರೆ, ಸಾವನ್ನಪ್ಪಿದವರ ಸಂಖ್ಯೆ 4,683 ತಲುಪಿದೆ. ಇದೇ ವೇಳೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1.89 ಲಕ್ಷಕ್ಕೇರಿದೆ. ಉಳಿದ 83,551 ಮಂದಿ ಸಕ್ರಿಯ ಸೋಂಕಿತರಿಗೆ ನಾನಾ ಆಸ್ಪತ್ರೆಗಳು, ಕೋವಿಡ್ ನಿಗಾ ಕೇಂದ್ರ ಮತ್ತು ಗೃಹ ಆರೈಕೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ …
Read More »
Laxmi News 24×7