Breaking News
Home / ಅಂತರಾಷ್ಟ್ರೀಯ (page 214)

ಅಂತರಾಷ್ಟ್ರೀಯ

ನಡು ರಸ್ತೆಯಲ್ಲಿ ಪುಂಡರಿಗೆ ಬಸ್ಕಿ ಹೊಡೆಸಿದ ಪೊಲೀಸರು.. ಎಲ್ಲಿ?

ಇಂದೋರ್: ಅಪರಾಧಿಗಳನ್ನು ಬಂಧಿಸಿ ಶಿಕ್ಷೆ ನೀಡುವ ಪದ್ದತಿ ಸಾಮಾನ್ಯವಾಗಿ ಕಾಣಬಹುದು. ಆದರೆ ಇಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇಬ್ಬರು ಅಪರಾಧಿಗಳಿಗೆ ಅವರ ಅಡ್ಡಾದಲ್ಲೇ ಶಿಕ್ಷೆ ನೀಡಿದ್ದಾರೆ. ಹಾಗೂ ಅಲ್ಲಿನ ಜನರಿಗೆ ಅಪರಾಧಿಗಳು ಕ್ಷಮೆ ಕೇಳುವಂತೆ ಮಾಡಿದ್ದಾರೆ. ಅಪರಾಧ ಎಸಗಿದ ಇಬ್ಬರು ವ್ಯಕ್ತಿಗಳನ್ನು ನಡು ರಸ್ತೆಯಲ್ಲೇ ಕಿವಿ ಹಿಡಿದು ಬಸ್ಕಿ ಹೊಡೆಸಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಸಂಜೆ ನಡೆದಿದೆ. ಈ ವೇಳೆ ನೆರೆಹೊರೆಯವರು ತಮ್ಮ ಬಾಲ್ಕನಿಗಳಿಂದಲೇ ಚಪ್ಪಾಳೆ ತಟ್ಟಿ ಅಪರಾಧಿಗಳ …

Read More »

ಕೃಷ್ಣಾರೋಗಿಗೆ ‘ಡ್ರೋನ್‌’ನಿಂದ ಮಾತ್ರೆ ರವಾನೆ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿಯ ಕರಕಲಗಡ್ಡಿ ನಡುಗಡ್ಡೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ರೋಗಿಗೆ ಡ್ರೋನ್‌ ಮೂಲಕ ಮಾತ್ರೆ ಹಾಗೂ ಔಷಧಿಗಳನ್ನು ಶುಕ್ರವಾರ ಯಶಸ್ವಿಯಾಗಿ ತಲುಪಿಸಲಾಯಿತು. ಕರಕಲಗಡ್ಡಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರು ಉಳಿದುಕೊಂಡಿದ್ದಾರೆ. ತಿಪ್ಪಣ್ಣ ಎನ್ನುವವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ವೈದ್ಯರ ಸಲಹೆಯಂತೆ ಅವರು ನಿರಂತರ ತೆಗೆದುಕೊಳ್ಳುತ್ತಿದ್ದ ಮಾತ್ರೆಗಳು ಖಾಲಿಯಾಗಿದ್ದವು. ಮಾತ್ರೆಗಳನ್ನು ಕಳುಹಿಸುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಡುಗಡ್ಡೆ ಜನರು ಗುರುವಾರ ಮನವಿ ಮಾಡಿದ್ದರು. ನಾರಾಯಣಪುರ ಜಲಾಶಯದಿಂದ 2.72 ಲಕ್ಷ ಕ್ಯುಸೆಕ್‌ ನೀರನ್ನು …

Read More »

ರೈತರ `ಪಶು ಸಂಜೀವಿನಿ’ ಸಂಚಾರಿ ಚಿಕಿತ್ಸಾಲಯಕ್ಕೆ ಸಿಎಂ ಚಾಲನೆ

ಬೆಂಗಳೂರು,  : ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರಕಾರ ಸಜ್ಜಾಗಿದ್ದು, ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ ಸಹಾಯವಾಣಿ ಸೇವೆಗಳಿಗೆ ಲಿಂಕ್ ಮಾಡಿ 24/7 ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಬಳಿ ಪಶುಸಂಗೋಪನಾ ಇಲಾಖೆಯ ವತಿಯಿಂದ ಆಯೋಜಿಸಿದ್ದ `ಪಶುಸಂಜೀವಿನಿ’ ಸುಸಜ್ಜಿತ ಸಂಚಾರಿ ಪಶುಚಿಕಿತ್ಸಾ ವಾಹನಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಸಿರು …

Read More »

ಗ್ರಾಮಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮ ಪಂಚಾಯತಿಗೆ 2020-21 ರಲ್ಲಿ ನಡೆಯುವ ಪಂಚಾಯತಿ ಚುನಾವಣೆ ವಾರ್ಡಗಳ ಮೀಸಲಾತಿ ಪಟ್ಟಿ ಯಾದಿಯ ಸರ್ಕಾರ ಅಧಿಕೃತ ಪ್ರಕಟಿಸುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದು ಹಲವು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾ. ಪಂ. ಮಾಜಿ ಸದಸ್ಯ ವಿಕ್ರಮ ಬಣಗೆ ಆರೋಪಿಸಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿ  ಸರ್ಕಾರ ಪ್ರಕಟಿಸುವ 20 ದಿನಗಳ ಮೊದಲೇ ಸಾಮಾಜಿಕ ಜಾಲತಾಣದಲ್ಲಿ ಹರದಾಡಿರುವ ಪಟ್ಟಿ …

Read More »

ಮಾರುತಿ ಕಾರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು, ಐವರು ಗಂಭೀರ

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದರೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರ ಪೈಕಿ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದ ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಸಿಪಿಐ ರಾಘವೇಂದ್ರ, …

Read More »

KCET Result 2020- ಎಂಜಿನಿಯರಿಂಗ್ ವಿಭಾಗದಲ್ಲಿ ರಕ್ಷಿತ್ ನಂ. 1; ಇಲ್ಲಿದೆ ವಿವಿಧ ವಿಭಾಗಗಳ ಟಾಪ್ ರ್‍ಯಾಂಕರ್ಸ್

ಬೆಂಗಳೂರು: ರಾಜ್ಯದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಎಂಜಿನಿಯರಿಂಗ್, ಫಾರ್ಮಾ, ಕೃಷಿ, ನ್ಯಾಚುರೋಪಥಿ ವಿಭಾಗಗಳಲ್ಲಿ ವಿದ್ಯಾರ್ಥಿಗಳ ರ್‍ಯಾಂಕಿಂಗ್ ಲಿಸ್ಟ್ ಪ್ರಕಟಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಫಲಿತಾಂಶದಲ್ಲಿ ಬೆಂಗಳೂರಿನ ಆರ್.ವಿ. ಕಾಲೇಜು ವಿದ್ಯಾರ್ಥಿ ರಕ್ಷಿತ್ ಎಂ ಅವರು ಎಂಜಿನಿಯರಿಂಗ್​ನಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ. ಸಿಇಟಿ ಪರೀಕ್ಷೆ ಬರೆದ 1.75 ಲಕ್ಷ ವಿದ್ಯಾರ್ಥಿಗಳ ಪೈಕಿ 1,55,668 ಮಕ್ಕಳು ಅರ್ಹತೆ ಗಿಟ್ಟಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಅಶ್ವಥ …

Read More »

ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾಗಿನ

ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, …

Read More »

ಘಟಪ್ರಭಾ, ಮಲಪ್ರಭಾ ಜಲಾಶಯಗಳ ಹೊರಹರಿವು ಇಳಿಕೆ

ಬೆಳಗಾವಿ: ಜಿಲ್ಲೆಯಂತೆ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲೂ ಶುಕ್ರವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಅಲ್ಲಿಂದ ಕೃಷ್ಣಾ ನದಿಗೆ ಹರಿದು ಬರುತ್ತಿದ್ದ ಒಳಹರಿವು ತೀವ್ರ ಗತಿಯಲ್ಲಿ ಕಡಿಮೆಯಾಗಿದೆ. 1.73 ಲಕ್ಷ ಕ್ಯುಸೆಕ್‌ ನೀರು ಹರಿದು ಬಂದಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ 25 ಸಾವಿರ ಕ್ಯುಸೆಕ್‌ ಕಡಿಮೆಯಾಗಿದೆ. ಇದೇ ರೀತಿ, ಘಟಪ್ರಭಾ ಹರಿವು ಕೂಡ ಕಡಿಮೆಯಾಗಿದೆ. 19,775 ಕ್ಯುಸೆಕ್‌ ಒಳಹರಿವು ಇದೆ. ಹಿಂದಿನ ದಿನ 31,627 ಕ್ಯುಸೆಕ್‌ ಇತ್ತು. ಹಿಡಕಲ್‌ ಬಳಿಯ ಜಲಾಶಯದಿಂದ ಹೊರಬಿಡುವ ನೀರಿನ …

Read More »

ಕೊರೊನಾ ನಡುವೆ ಸೆ.21 ರಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಲಾಪ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.   ಸೆ. 21 ರಿಂದ 30 ರವರೆಗೆ ಬೆಂಗಳೂರಿನಲ್ಲಿ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನದ ನಡುವೆ ಆರು ತಿಂಗಳಿಗಿಂತ ಹೆಚ್ಚು ಅಂತರ ಇರಬಾರದು ಎಂದು …

Read More »

ಇಂದು ಕಾವೇರಿಗೆ ಯಡಿಯೂರಪ್ಪ ಬಾಗಿನ – ಎರಡೆರಡು ದಾಖಲೆ ಬರೆಯಲಿದ್ದಾರೆ ಸಿಎಂ ಇವರಿಂದ ಪ್ರಕಟಿಸಲಾಗಿದೆ

ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೊರೆತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ.ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ …

Read More »