Breaking News
Home / ಅಂತರಾಷ್ಟ್ರೀಯ (page 216)

ಅಂತರಾಷ್ಟ್ರೀಯ

ಉತ್ತರ ಕನಾ೯ಟಕದಲ್ಲಿ ಪ್ರವಾಹದಿಂದ ಎಷ್ಟೆಲ್ಲ ಹಾನಿಯಾಗಿದೆ ಗೊತ್ತಾ?

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಒಂದೆಡೆಯಾದರೆ, ಮಹಾರಾಷ್ಟ್ರದಲ್ಲಾಗುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಕರ್ನಾಟಕಕ್ಕೆ ಹರಿದುಬರುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಕೃಷ್ಣೆ, ಮಲಪ್ರಭಾ, ಘಟಪ್ರಭಾ ನದಿಗಳ ಅಬ್ಬರ ಏರಿದೆ. ಕೊಯ್ನಾ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಹಾಪುರದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿದ್ದು, ಆಗಸ್ಟ್ 22ರವರೆಗೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ …

Read More »

8 ತಿಂಗಳಿನಿಂದ ಬಾರದ ಸಂಬಳ : ರಾಜ್ಯ ಸರ್ಕಾರಕ್ಕೆ ರಾತ್ರಿ ಹೊತ್ತು ಕಾವಲುಗಾರನಾಗಿ ಕೆಲಸ ಮಾಡಲು ಪತ್ರ ಬರೆದ ‘ಸರ್ಕಾರಿ ನೌಕರ’

ಬೆಂಗಳೂರು : ಮನೆಯಲ್ಲಿ ಗರ್ಭಿಣಿ ಪತ್ನಿಯಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪೋಷಕರು ಇದ್ದಾರೆ. ಅವರನ್ನು ಉಳಿಸಿಕೊಳ್ಳಲು ಕಚೇರಿ ಕರ್ತವ್ಯಕ್ಕೆ ಧಕ್ಕೆಯಾಗದಂತೆ ರಾತ್ರಿ ಪಾಳಿಯಲ್ಲಿ ಅಲ್ಪಾವಧಿ ಕೆಲಸ ಮಾಡಲು ಅನುಮತಿ ನೀಡುವಂತೆ ನೊಂದಣಿ ಮತ್ತು ಮುದ್ರಣಾಂಕ ಶಾಖೆಯ ಆಡಿಟ್ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರಥಮ ದರ್ಜೆ ಸಹಾಯಕರೊಬ್ಬರು ರಾಜ್ಯ ಸರ್ಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಈ ಮೂಲಕ ಪತ್ರದಿಂದಾಗಿ ರಾಜ್ಯ ಸರ್ಕಾರಿ ನೌಕರರ ಪರಿಸ್ಥಿತಿ ಮನ ಮಿಡಿಯುವಂತಾಗಿದೆ. ರಾಜ್ಯ …

Read More »

ಆಗಲ್ಲ ಅಂದ್ರೆ ಇಬ್ರೂ ರಾಜೀನಾಮೆ ಕೊಡಿ : ಶಾಸಕ, ಸಂಸದರಿಗೆ ಎಚ್ಚರಿಕೆ

ಬೇಲೂರು  : ತಾಲೂಕಿನ ಅಗಸರಹಳ್ಳು ಸೇತುವೆ ವಿಚಾರದಲ್ಲಿ ರಾಜಕೀಯ ಮುಖಂಡರು ಒಬ್ಬರಿಗೊಬ್ಬರು ದೂರು ಹೇಳುವುದನ್ನು ಬಿಟ್ಟು ಯಾವುದೇ ರಾಜಕೀಯ ಮಾಡದೆ ತಕ್ಷಣವೇ ನಮಗೆ ಸೇತುವೆ ಮಾಡಿಸಿಕೊಡಿ. ಇಲ್ಲದಿದ್ದರೆ ಶಾಸಕರು ಹಾಗೂ ಸಂಸದರು ಮತ್ತು ಸಂಬಂಧಪಟ್ಟಅ​ಧಿಕಾರಿಗಳ ವಿರುದ್ಧ 10 ಗ್ರಾಮಸ್ಥರು ಒಟ್ಟುಗೂಡಿ ಉಗ್ರರೀತಿಯ ಪ್ರತಿಭಟನೆ ನಡೆಸುವುದಾಗಿ ಅಗಸರಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಅಟ್ಟಾಡಿಸಿ ಹೊಡೆಸುತ್ತೇನೆ : ಅಧಿಕಾರಿಗಳಿಗೆ ಅವಾಜ್ ಹಾಕಿದ ಎಚ್.ಡಿ.ರೇವಣ್ಣ… ಗ್ರಾಮಸ್ಥರಾದ ಶ್ರೀನಿವಾಸ್‌ ಹಾಗೂ ನಾಗರಾಜ್‌ ಪಟ್ಟಣದಲ್ಲಿ ಸುದ್ದಿಗೊೂೕಷ್ಠಿಯಲ್ಲಿ ಮಾತನಾಡಿ, …

Read More »

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 10.3ರಿಂದ ಶೇಕಡಾ 7.72ಕ್ಕೆ ಇಳಿಕೆ

ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಆದರೂ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಈ ಕುರಿತಂತೆ ಮಾತನಾಡಿದ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರತಿದಿನ 7ರಿಂದ 8 ಲಕ್ಷ ಕೊರೋನಾ ವೈರಸ್ ಪರೀಕ್ಷೆ ಮಾಡುತ್ತಿದ್ದರೂ ಕೂಡ ಪಾಸಿಟಿವ್ ರೋಗಿಗಳ ಸಂಖ್ಯೆ ಕಳೆದ ನಾಲ್ಕೈದು ದಿನಗಳಲ್ಲಿ ಶೇಕಡಾ 10.3ರಿಂದ ಶೇಕಡಾ …

Read More »

ಜುಲೈವೊಂದರಲ್ಲೇ 50 ಲಕ್ಷನೌಕರರ ಉದ್ಯೋಗ ನಷ್ಟ!

ಮುಂಬೈ : ಕೊರೋನಾ ವೈರಸ್‌ ಉಪಟಳದಿಂದ ಆರ್ಥಿಕತೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿರುವ ಹಿನ್ನೆಲೆಯಲ್ಲಿ ಜುಲೈವೊಂದರಲ್ಲೇ ಬರೋಬ್ಬರಿ 50 ಲಕ್ಷ ಮಂದಿ ಸಂಬಳದಾರ ನೌಕರರು ಕೆಲಸ ಕಳೆದುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ. ಇದರೊಂದಿಗೆ ಕೊರೋನಾ ಆರಂಭವಾದ ಬಳಿಕ ಉದ್ಯೋಗ ನಷ್ಟಅನುಭವಿಸಿದ ವೇತನ ವರ್ಗದವರ ಸಂಖ್ಯೆ 1.89 ಕೋಟಿಗೆ ಹೆಚ್ಚಳವಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಏಪ್ರಿಲ್‌ನಲ್ಲಿ ವೇತನ ಆದಾಯ ಹೊಂದಿರುವ 1.77 ಕೋಟಿ ನೌಕರರ ಉದ್ಯೋಗ ಹೋಗಿತ್ತು. ಮೇ ತಿಂಗಳಿನಲ್ಲಿ 1 …

Read More »

ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.

ಚಿಕ್ಕೋಡಿ: ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಕಲ್ಲಪ್ಪ ಪರಗೌಡರ (70 ) ಮೃತ ದುರ್ದೈವಿ. ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮನೆ ಗೋಡೆಗಳು ಮಳೆ ನೀರಿನಿಂದ ಶಿಥೀಲಗೊಂಡಿದ್ದವು. ನಿನ್ನೆಯೂ ಭಾರೀ ಮಳೆಯಾದ ಹಿನ್ನೆಲೆ ಗೋಡೆ ಕುಸಿದು, ನಿದ್ದೆಯಲ್ಲಿದ್ದ ಕಲ್ಲಪ್ಪ ಪರಗೌಡರ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Read More »

ಘಟಪ್ರಭಾ ನದಿ ಗೋಕಾಕ್​​ನ ಬಡಾವಣೆಗಳು ಜಲಾವೃತ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿವೆ. ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು‌‌ ನುಗ್ಗಿದೆ. ಹಳೆ ದನಗಳಪೇಟೆ, ಉಪ್ಪಾರ ಓಣಿಗೆ ನೀರು ನುಗ್ಗಿ ಹಾನಿಯಾಗಿದೆ. ಗೋಕಾಕ್ ಪ್ರವಾಹದ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, 1.95 ಲಕ್ಷ ಕ್ಯೂಸೆಕ್‌ಗೂ ಅಧಿಕ ಒಳಹರಿವು ಇದೆ. ಇದರಿಂದ ಕೃಷ್ಙಾ ನದಿ ತೀರದ ಜನರಲ್ಲಿ ಪ್ರವಾಹದ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಇದೇ ಆಗಸ್ಟ್‌ನಲ್ಲಿ15 ಅಂದರೆ ಸ್ವಾತಂತ್ರ್ಯೋತ್ಸವ ಹಾಗೂ ರಾಯಣ್ಣೋತ್ಸವದಂದು ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರಧ್ವಜವನ್ನು ತೆರವುಗೊಳಿಸಿ ಅವಮಾನಿಸಿದ್ದನ್ನು ಖಂಡಿಸಿ ಹಾಗೂ ಮತ್ತೆ ಅದೇ ಜಾಗದಲ್ಲಿ ಗೌರವಯುತವಾಗಿ ಶೀಗ್ರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದವರು ತಾಲೂಕಾ ದಂಡಾಧಿಕಾರಿಗಳಾದ ಪ್ರಶಾಂತ ಪಾಟೀಲ್ ಅವರ ಮೂಲಕ ಮಾನ್ಯ ಮುಖ್ಯ …

Read More »

ರಾಜ್ಯದಲ್ಲಿ ಒಂದೇದಿನ ಕೊರೋನಾಕ್ಕೆ 139 ಬಲಿ: 7665 ಕೇಸ್!

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 7,665 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ದಾಖಲೆಯ 139 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 4,201ಕ್ಕೆ ಏರಿಕೆಯಾಗಿದೆ. ಮಂಗಳವಾರ ರಾಜ್ಯದಲ್ಲಿ ಒಂದು ದಿನದ ಗರಿಷ್ಠ ಸಾವು ವರದಿಯಾಗಿದ್ದು, ಕಳೆದ ಭಾನುವಾರ ಒಂದೇ ದಿನ 124 ಮಂದಿ ಸಾವನ್ನಪ್ಪಿದ್ದು ಈವರೆಗಿನ ದಾಖಲೆಯಾಗಿತ್ತು. ಮಂಗಳವಾರ 7,665 ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2.41 ಲಕ್ಷಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ …

Read More »

ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್‌: ರಸ್ತೆಯಲ್ಲೇ ಕಾನ್‌ಸ್ಟೆಬಲ್‌ ಧರಣಿ.

ಸಕಲೇಶಪುರ: ತಹಶೀಲ್ದಾರ್‌ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್‌ ಶಾಪ್‌ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್‌ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …

Read More »