ಲಂಡನ್: ಕೊರೊನಾ ವೈರಸ್ನಿಂದ ನಲುಗುತ್ತಿರುವ ವಿಶ್ವಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿ ಪಡಿಸಿರುವ ಲಸಿಕೆ ಸುರಕ್ಷಿತವಾಗಿದೆ. ಆಕ್ಸ್ಫರ್ಡ್ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ AZD1222 ಹೆಸರಿನ ಲಸಿಕೆಯ ಸುರಕ್ಷಿತವಾಗಿದೆ ಎಂದು ವೈದ್ಯ ಕ್ಷೇತ್ರಕ್ಕೆ ಸಂಬಂಧಿಸಿದ ‘ದಿ ಲ್ಯಾನ್ಸೆಟ್ ಮೆಡಿಕಲ್ ಜರ್ನಲ್’ನಲ್ಲಿ ಸಂಶೋಧನಾ ವರದಿ ಪ್ರಕಟವಾಗಿದೆ. 1,077 ಮಂದಿ ಆರೋಗ್ಯಕರ ಸ್ವಯಂಸೇವಕರ ಮೇಲೆ ನಡೆಸಿದ ಆರಂಭಿಕ ಹಂತದ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದ್ದು, ಈ ವೇಳೆ ಲಸಿಕೆ ರೋಗನಿರೋಧಕ …
Read More »ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ…?
ತೋಟದೊಳಗೆ ಬರುತ್ತಿವೆ ಎಂದು ಪಾಪಿಗಳು ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಐಗೂರಿನ ಡಿಬಿಡಿ ಟಾಟಾ ಎಸ್ಟೇಟ್ನಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಒಳಗೆ ಸ್ಥಳೀಯ ದನಗಳು ಹೋಗುತ್ತಿದ್ದರಿಂದ ಎಸ್ಟೇಟ್ನ ಮ್ಯಾನೇಜರ್ ಮತ್ತು ಸಿಬ್ಬಂದಿ ಸೇರಿ ಬಾಳೆಹಣ್ಣಿಗೆ ವಿಷ ಹಾಕಿ ಹಸುಗಳಿಗೆ ತಿನಿಸಿ ಕೊಂದಿದ್ದಾರೆ. ಈ ರೀತಿ ಕಳೆದ ಹಲವು ದಿನಗಳಿಂದ 20ಕ್ಕೂ ಹೆಚ್ಚು ಹಸುಗಳಿಗೆ ಹತ್ಯೆ ಮಾಡಿದ್ದಾರೆ ಎಂದು …
Read More »ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ …
Read More »ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ
ವಿಜಯಪುರ: ಜಿಲ್ಲೆಯ ಆಲಮೇಲದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ ನಡೆದಿದೆ. ಶಂಕರ್ ಜಂಬಗಿ(50) ಜ್ವರದಿಂದ ನರಳಾಡಿದ ರೋಗಿ. ಸ್ಥಳೀಯವಾಗಿ ಚಿಕಿತ್ಸೆ ಸಿಗದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಲು ಆಯಂಬ್ಯುಲೆನ್ಸ್ಗಾಗಿ ಕಾದರೂ ಒಂದೂವರೆ ಗಂಟೆಗಳ ಕಾಲ ಆಯಂಬುಲೆನ್ಸ್ ಬಂದಿಲ್ಲ. ನಂತರ ಸ್ಥಳೀಯ ಯುವಕರು ಕರೆಮಾಡಿ ಆಯಂಬುಲೆನ್ಸ್ ಕರೆಸಿ ಪತ್ನಿ ಶೋಭಾ ಜೊತೆ ರೋಗಿಯನ್ನ ಸಿಂದಗಿ …
Read More »ಗೋಕಾಕದಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟ್ರೀಟ್ಮೆಂಟ್ ನೀಡಲು ಸಿದ್ಧರಾಗುತ್ತಿದ್ದಾರೆ.
ಗೋಕಾಕ : ದೇಶ ಹಾಗೂ ರಾಜ್ಯಾದ್ಯಂತ ಉಲ್ಬಣಗೊಂಡಿರುವ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಗೋಕಾಕ ತಾಲೂಕಿನ ಸ್ಥಳೀಯ ಕೆಲ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಐಸೋಲೇಶನ್ ವಾರ್ಡ್ಗಳನ್ನು ಸ್ಥಾಪಸಿ ಚಿಕಿತ್ಸೆ ನೀಡಬೇಕು ಎಂದು ಸರಕಾರದ ಆದೇಶವಿದೆ.1)ಆರೋಗ್ಯ ಆಧಾರ್ ಹಾಸ್ಪಿಟಲ ಗೋಕಾಕ 2)ಘೋಡಗೇರಿ ಆಸ್ಪತ್ರೆ ಗೋಕಾಕ 3)ಅಥರ್ವ ಅಥೋ ಹಾಸ್ಪಿಟಲ್ ಗೋಕಾಕ 4)ಕಪ್ಪಲಗುದ್ದಿ ಆಸ್ಪತ್ರೆ ಗೋಕಾಕ 5)ಗಂಗಾ ಹಾಸ್ಪಿಟಲ್ ಗೋಕಾಕ 6)ಜಯರತ್ನ ಹಾಸ್ಪಿಟಲ್ ಗೋಕಾಕ 7)ಕೆ ಎಲ್ ಇ ಹಾಸ್ಪಿಟಲ್ ಗೋಕಾಕ …
Read More »ಐಶ್ವರ್ಯಾ ರೈ ಫೋಟೋ ಹಂಚಿಕೊಂಡ WWE ಸೂಪರ್ ಸ್ಟಾರ್ ಜಾನ್ ಸಿನಾ
ಮುಂಬೈ: ಡಬ್ಲ್ಯೂಡಬ್ಲ್ಯೂಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಇತ್ತೀಚೆಗೆ ಕೊರೊನಾ ಸೋಂಕಿಗೆ ತುತ್ತಾಗಿರುವ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಅವರಿಗೆ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ನಂತರ ಐಶ್ವರ್ಯಾ ರೈ ಮತ್ತು ಮಗಳ ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಕಳೆದ ಶುಕ್ರವಾರದವರೆಗೂ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು, ನಂತರ ಅವರನ್ನು ಕೂಡ ಮುಂಬೈನ ನಾನಾವತಿ …
Read More »8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?
ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …
Read More »ಕೋವಿಡ್ ಲ್ಯಾಬ್ ಆರಂಭಿಸಿ: ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪತ್ರ
ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತಲಿದ್ದು, ಸೋಂಕು ತಡೆಗಟ್ಟಲು ಅಗತ್ಯ ಸೌಲಭ್ಯಗಳ ಕಲ್ಪಿಸುವುದರ ಜತೆಗೆ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರಗಳನ್ನು ಆರಂಭಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತಲಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಇಬ್ಬರು ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ವ್ಯಾಪಕವಾಗಿ ಹಡರುತ್ತಿರುವ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡು …
Read More »ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಿದ್ದ ಬಿಗ್ ಬಿ ಅಭಿಮಾನಿಗಳಿಗೆ ಧನ್ಯವಾದ ಮತ್ತು ವಂದನೆ ಸಲ್ಲಿಸಿದ್ದರು.
ಮುಂಬೈ: ಕೊರೋನಾ ಸೋಂಕಿಗೆ ಗುರಿಯಾಗಿರುವ ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ತಂದೆ ಕವಿ ಹರಿವಂಶರಾಯ್ ಬಚ್ಚನ್ ಅವರ ಕವಿತೆ ಸಾಲುಗಳನ್ನು ಶೇರ್ ಮಾಡಿಕೊಂಡಿದ್ದಾರೆ. ತಮ್ಮ ಬ್ಲಾಗ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾನು ಇಂದು ಯಾವ ಸ್ಥಿತಿಯಲ್ಲಿ ಇದ್ದೇನೆ ಎಂಬುದಕ್ಕೆ ತನ್ನ ಭೂತಕಾಲದ ಕೆಲ ನಿರ್ಧಾರಗಳು ಕಾರಣ ಎಂಬ ಅರ್ಥದ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ರಿಪ್ಲೆಕ್ಷನ್ ಗೆ ಅಂದಿನ ನಿರ್ಧಾರಗಳೇ ಕಾರಣ ಎಂಬ ಅರ್ಥದಲ್ಲಿ ಹೇಳಿದ್ದಾರೆ. ಕೊರೋನಾ ಸೋಂಕು ದೃಢಪಟ್ಟ …
Read More »ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು; ತನಿಖೆಗೆ ಆದೇಶಿಸಿದ ಬೆಳಗಾವಿ ಡಿಸಿ
ಬೆಳಗಾವಿ : ಬಿಮ್ಸ್ ನಲ್ಲಿ ನರಳಾಡಿ ಕೊರೊನಾ ಸೋಂಕಿತ ಸಾವು ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ತನಿಖೆಗೆ ಬೆಳಗಾವಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ 65 ವರ್ಷದ ವೃದ್ಧರೊಬ್ಬರು ನರಳಾಡಿ ಸಾವನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮದಲ್ಲಿ ಸುದ್ಧಿ ಬಿತ್ತರವಾದ ಹಿನ್ನಲೆಯಲ್ಲಿ, ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬಿಮ್ಸ್ ನಿರ್ದೇಶಕರಿಗೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಡಿಸಿ ಹಿರೇಮಠ ಅವರು, ಬಿಮ್ಸ್ ನಿರ್ದೇಶಕರಿಗೆ …
Read More »
Laxmi News 24×7