Breaking News
Home / ಅಂತರಾಷ್ಟ್ರೀಯ (page 248)

ಅಂತರಾಷ್ಟ್ರೀಯ

ಗಾಲ್ವನ್ ಸಂಘರ್ಷದಲ್ಲಿ 100 ಚೀನಿ ಸೈನಿಕರ ಸಾವು..! ಪಿಎಎ ಮಾಜಿ ಸೇನಾಧಿಕಾರಿಯಿಂದ ಸತ್ಯ ಬಹಿರಂಗ

ಬೀಜಿಂಗ್/ನವದೆಹಲಿ, ಜು.7- ಪೂರ್ವ ಲಡಾಖ್‍ನ ಗಾಲ್ವಾನ್ ಕಣಿವೆಯ ವಾಸ್ತವ ನಿಯಂತ್ರಣ ರೇಖೆ (ಎಲ್‍ಎಸಿ) ಬಳಿ ಜೂನ್ 15ರಂದು ನಡೆದ ಸಂಘರ್ಷದಲ್ಲಿ ಭಾರತದ ಯೋಧರ ದಾಳಿಗೆ ನೂರಕ್ಕೂ ಹೆಚ್ಚು ಚೀನಿ ಸೈನಿಕರು ಹತರಾಗಿದ್ದಾರೆ ಎಂಬ ಸಂಗತಿ ಮತ್ತೊಮ್ಮೆ ದೃಢಪಟ್ಟಿದೆ. ಲಡಾಖ್-ಲಡಾಯಿಯಲ್ಲಿ ಚೀನಾದ 150ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆಂದು ಕಮ್ಯುನಿಸ್ಟ್ ದೇಶದ ರಾಜಕಾರಣಿಗಳು ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಚೀನಾದ ನಿವೃತ್ತ ಉನ್ನತ ಸೇನಾಧಿಕಾರಿ ಜಿಯಾನ್‍ಲಿ ಯಾಂಗ್ ಸಹ ಇದೇ ಮಾತನ್ನು ಖಚಿತಪಡಿಸಿದ್ದಾರೆ. …

Read More »

ಕೊರೋನಾ ಅಬ್ಬರಕ್ಕೆ ಜಗತ್ತು ತತ್ತರ : 1.15 ಕೋಟಿ ಸೋಂಕಿತರು, 5.36 ಲಕ್ಷ ಸಾವು..!

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜು.6- ಕೋವಿಡ್-19 ವೈರಸ್ ಅಟ್ಟಹಾಸದಿಂದ ಜಗತ್ತೇ ಹೈರಾಣಾಗಿದ್ದು, 240ಕ್ಕೂ ಹೆಚ್ಚು ದೇಶಗಳಲ್ಲಿ ರೋಗಿಗಳು ಮತ್ತು ಮೃತರÀ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲೇ ಮುಂದುವರಿದಿದೆ. ಜಗತ್ತಿನಾದ್ಯಂತ ಒಟ್ಟು ಸಾವಿನ ಸಂಖ್ಯೆ 5.36 ಲಕ್ಷ ಹಾಗೂ ಸೋಂಕಿತರ ಸಂಖ್ಯೆ 1.15 ಕೋಟಿ ದಾಟಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 65.39 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಜಗತ್ತಿನಾದ್ಯಂತ ನಿನ್ನೆ ಮಧ್ಯರಾತ್ರಿವರೆಗೆ 5,36,900 ಮಂದಿ ಸಾವಿಗೀಡಾಗಿದ್ದು, 1,15,64,518 ಸೋಂಕು ಪ್ರಕರಣಗಳು ವರದಿಯಾಗಿದೆ.. ಸಕ್ರಿಯ …

Read More »

ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆಬಿಜೆಪಿ:ರಾಹುಲ್ ಗಾಂಧಿ

ನವದೆಹಲಿ,ಜು.6- ರಾಹುಲ್ ಗಾಂಧಿ ಅವರು ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯಲ್ಲೂ ಭಾಗವಹಿಸುವುದಿಲ್ಲ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕ ಏನು ಮಾಡಬಾರದೋ ಅದನ್ನೇ ಅವರು ಮಾಡುತ್ತಿದ್ದಾರೆ. ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಚೀನಾ-ಭಾರತದ ಗಡಿ ವಿವಾದ ಕುರಿತು ರಾಹುಲ್ ಗಾಂಧಿ ಸರ್ಕಾರದ ವಿರುದ್ಧದ ಆಕ್ರಮಣಕಾರಿ ಪ್ರಶ್ನೆ ಮುಂದುವರಿಸುತ್ತಿದ್ದಂತೆ, ಇದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ನಾಯಕ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ …

Read More »

ಬಾಗಲಕೋಟೆಯಲ್ಲಿ ರಿಜಿಸ್ಟರ ಮ್ಯಾರೇಜಗೆ ಮಾತ್ರ ಅವಕಾಶ, ಮದುವೆ, ಸೀಮಂತ ಕಾರ್ಯಗಳಿಗೆ ಅನುಮತಿ ನಿಷೇಧ

ಬಾಗಲಕೋಟೆ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದು, ಇದರ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೂ ಕೊರೊನಾ ಸೋಂಕು ಹರಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ …

Read More »

ಅತಿ ಕಡಿಮೆ ‘ಆಕ್ಟಿವ್ ಕೇಸ್’ ಹೊಂದಿರುವ ಕರ್ನಾಟಕದ ಐದು ಜಿಲ್ಲೆಗಳು..

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23 ಸಾವಿರ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಪೈಕಿ ಟಾಪ್ ಹತ್ತರೊಳಗೆ ಕರ್ನಾಟಕ ಗುರುತಿಸಿಕೊಂಡಿದೆ. ಒಂದು ಹಂತದಲ್ಲಿ ಇತರೆ ರಾಜ್ಯಗಳಿಗೆ ಮಾದರಿ ಎನಿಸಿಕೊಂಡಿದ್ದ ಕರ್ನಾಟಕ ಈಗ ಗಂಭೀರ ಸ್ಥಿತಿ ತಲುಪಿತ್ತಿದೆ. ಈವರೆಗೂ ರಾಜ್ಯದಲ್ಲಿ 23,474 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 9847 ಜನರು ಗುಣಮುಖರಾಗಿದ್ದು, 13,251 ಕೇಸ್‌ಗಳು ಸಕ್ರಿಯವಾಗಿದೆ. ಈ ಪೈಕಿ ಬೆಂಗಳೂರು …

Read More »

ಕಳೆದ ತಿಂಗಳು 19 ರಂದು ಸುರಪುರದ ದೀವಳಗುಡ್ಡದ ನಿವಾಸಿಯಾದ ಬಸ್ ಕಂಡಕ್ಟರ್ ಗೆ ಕೊರೋನಾ ವಕ್ಕರಿಸಿತ್ತು. ಸೋಂಕಿತ ನಿರ್ವಾಹಕ ಬಸ್ ಘಟಕ ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆ ಓಡಾಡಿಕೊಂಡಿದ್ದರು. ಅಲ್ಲದೆ, ಸೋಂಕಿತ ವ್ಯಕ್ತಿಯ ಪತ್ನಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಹೀಗಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದ ಸೋಂಕಿತ ಬಸ್ ಕಂಡಕ್ಟರ್ ಹಾಗೂ ಆತನ ಪತ್ನಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದರೆ, ಬಸ್ ಕಂಡಕ್ಟರ್ ನಿಂದ ಹರಡಿದ ಸೋಂಕಿನಿಂದ 16 ಜನರಿಗೆ ಇದೀಗ ಕೊರೋನಾ ವಕ್ಕರಿಸಿದೆ. ಬಸ್ ಘಟಕದಲ್ಲಿನ 7 ಜನರಿಗೆ ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿದ್ದ 9 ಜನರಲ್ಲಿ ಕೊರೋನಾ ಕಾಣಿಸಿಕೊಂಡಿದೆ. ಹೀಗಾಗಿ ಮುಂಜಾಗ್ರತೆ ವಹಿಸಿ ಸುರಪುರ ಬಸ್ ಘಟಕ ಸೀಲ್ ಡೌನ್ ಮಾಡಲಾಗಿದೆ. ಸುರಪುರ ಬಸ್ ಘಟಕದಿಂದ ಯಾವುದೇ ಬಸ್ ಸಂಚಾರವಿರುವದಿಲ್ಲ ಎನ್ನಲಾಗಿದೆ. ಸುರಪುರ ಬಸ್ ಘಟಕದಲ್ಲಿ 335 ಜನ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದು ಎಲ್ಲಾ ಸಿಬ್ಬಂದಿಗಳ ಸ್ಯಾಂಪಲ್‌ ಸಂಗ್ರಹ ಮಾಡಲಾಗುತ್ತಿದೆ. ಇಲ್ಲಿವರಗೆ 300 ಜನರ ಸ್ಯಾಂಪಲ್‌ ಸಂಗ್ರಹ ಮಾಡಲಾಗಿದ್ದು ಅದರಲ್ಲಿ 60 ಜನರ ಸ್ಯಾಂಪಲ್‌ ವರದಿ ನೆಗೆಟಿವ್ ಬಂದಿದೆ. ಇದರಿಂದ ಸಿಬ್ಬಂದಿಗಳು ಸ್ವಲ್ಪ ನಿರಾಳರಾಗಿದ್ದಾರೆ. ಸುರಪುರ ತಾಲೂಕು ಆರೋಗ್ಯಧಿಕಾರಿ ಡಾ.ಆರ್.ವಿ.ನಾಯಕ, “ಕಂಡಕ್ಟರ್ ಮೂಲಕ 16 ಜನರಿಗೆ ಕೊರೊನಾ ಬಂದಿದ್ದು 300 ಜನರ ಸ್ಯಾಂಪಲ್‌ ಸಂಗ್ರಹ ಮಾಡಲಾಗಿದೆ. ಅದರಲ್ಲಿ 60 ಜನರ ವರದಿ ನೆಗೆಟಿವ್ ಬಂದಿದೆ. ಜನರು ಯಾವುದೇ ಆತಂಕ ಪಡದೆ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡರೆ ಕೊರೊನಾಗೆ ಭಯಪಡುವ ಅಗತ್ಯ ಇಲ್ಲ” ಎಂದು ತಿಳಿಸಿದ್ದಾರೆ.

ಕಳೆದ ತಿಂಗಳು 19 ರಂದು ಸುರಪುರದ ದೀವಳಗುಡ್ಡದ ನಿವಾಸಿಯಾದ ಬಸ್ ಕಂಡಕ್ಟರ್ ಗೆ ಕೊರೋನಾ ವಕ್ಕರಿಸಿತ್ತು. ಸೋಂಕಿತ ನಿರ್ವಾಹಕ ಬಸ್ ಘಟಕ ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆ ಓಡಾಡಿಕೊಂಡಿದ್ದರು. ಅಲ್ಲದೆ, ಸೋಂಕಿತ ವ್ಯಕ್ತಿಯ ಪತ್ನಿಗೂ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಹೀಗಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದ ಸೋಂಕಿತ ಬಸ್ ಕಂಡಕ್ಟರ್ ಹಾಗೂ ಆತನ ಪತ್ನಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.   ಆದರೆ, ಬಸ್ ಕಂಡಕ್ಟರ್ ನಿಂದ ಹರಡಿದ ಸೋಂಕಿನಿಂದ …

Read More »

ಚಿತ್ರದುರ್ಗದಲ್ಲಿ ನ್ಯಾಯಾಲಯದ ಟೈಪಿಸ್ಟ್​​ಗೆ ಕೊರೋನಾ; 23 ಜನರೊಂದಿಗೆ ಪ್ರಾಥಮಿಕ ಸಂಪರ್ಕ; ಜಿಲ್ಲೆಯ ಜನರಲ್ಲಿ ಆತಂಕ

ಚಿತ್ರದುರ್ಗ(ಜು.06): ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಜಿಲ್ಲೆಯ ಆರೂ ತಾಲ್ಲೂಕುಗಳಲ್ಲಿ ಒಬ್ಬೊಬ್ಬರಿಗೆ ಹರಡಿದ ಕೊರೋನಾ ಸೋಂಕು ಈಗ ಚಿತ್ರದುರ್ಗ ಜಿಲ್ಲಾ ಸೀನಿಯರ್ ಡಿವಿಷನ್ ನ್ಯಾಯಾಲಯಕ್ಕೆ ಕಾಲಿಟ್ಟಿದೆ. ನಿನ್ನೆ ಚಿತ್ರದುರ್ಗದ ಸಿಜೆಎಂ ನ್ಯಾಯಾಲಯದ ಟೈಪಿಸ್ಟ್ ಗೆ ಕೊರೋನಾ ಪಾಸಿಟಿವ್ ಬಂದಿದು ಜಿಲ್ಲೆಯ ಜನರನ್ನ ಬೆಚ್ಚಿ ಬೀಳುವಂತೆ ಮಾಡಿದೆ. ಚಿತ್ರದುರ್ಗ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯೂರು ಮೂಲದ 33 ವರ್ಷದ ವ್ಯಕ್ತಿಗೆ ಕೊರೋ‌ನಾ ಪಾಸಿಟಿವ್ …

Read More »

60 ವರ್ಷ ಮೇಲ್ಪಟ್ಟವರು ಹೊರಬರದಂತೆ ರಾಜ್ಯದಲ್ಲಿ ಕಾನೂನು

ಬೆಂಗಳೂರು(ಜು.06): ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುವವರೆಗೂ ಕಿಡ್ನಿ, ಲಿವರ್‌, ಹೃದಯ ಸಂಬಂಧಿ ಸಮಸ್ಯೆ ಸೇರಿದಂತೆ ಪೂರ್ವ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರಬರಬಾರದೆಂಬ ಕಾನೂನು ರೂಪಿಸುವ ಚಿಂತನೆ ನಡೆಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಪೈಕಿ ಬಹುತೇಕ ಮಂದಿ 60 ವರ್ಷ ಮೇಲ್ಪಟ್ಟವರು ಹಾಗೂ ಈಗಾಗಲೇ ಪೂರ್ವ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಾಗಿದ್ದಾರೆ. …

Read More »

ಕೊಡಗು: ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ ಕುಟುಂಬದ ಬದುಕು ಕಿತ್ತುಕೊಂಡು ಗಾಯದ ಮೇಲೆ ಬರೆ ಎಳೆದ ಕೊರೋನಾ…

ಕೊಡಗು(ಜು.06): ಮಾರಕ ಕೊರೋನಾ ವೈರಸ್​ ಪ್ರತಿಯೊಬ್ಬರ ಜೀವನನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಭೂಕುಸಿತದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದ ಕುಟುಂಬ ಲಾಕ್ಡೌನ್​​ನಿಂದ ಕೂಲಿಯನ್ನು ಕಳೆದುಕೊಂಡು ಒಂದೊತ್ತಿನ ಗಂಜಿಗೂ ಪರಿಪಾಟಲು ಪಡುತ್ತಿದೆ. ಹಲವು ಕಾಯಿಲೆಗಳಿಂದ ನರಳುವ ತಂದೆ ತಾಯಿಯನ್ನು ಸಾಕೋದು ಪಿಯುಸಿ ಓದುತ್ತಿದ್ದ ಮಗನ ಹೆಗಲಿಗೆ ಬಿದ್ದಿದೆ. ಅಂತಹ ಮನಕಲಕುವ ಕಥೆ ವ್ಯವಸ್ಥೆಯನ್ನು ನೋವು ನೋಡ್ಲೇಬೇಕು. Ρ ಕಣ್ಣು ಕಾಣದೆ ತನ್ನ ಕೆಲಸವನ್ನು ತಾನು ಮಾಡಿಕೊಳ್ಳಲು ಸಾಧ್ಯವಾಗದ ತಂದೆ, ಸಂಧಿವಾತದಿಂದ ಕೈ …

Read More »

ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ. ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ …

Read More »