Breaking News
Home / ಅಂತರಾಷ್ಟ್ರೀಯ (page 249)

ಅಂತರಾಷ್ಟ್ರೀಯ

17 ದಿನಗಳ ಮಗುವಿನ ಅಂತ್ಯಕ್ರಿಯೆ ನಡೆಸಿ ಕಣ್ಣೀರು ಹಾಕಿದ್ರು ಆರೋಗ್ಯ ಸಿಬ್ಬಂದಿ…

ಬೆಂಗಳೂರು: ಒಂದು ಮಗುವಿನ ಆಗಮನ ಅಂದ್ರೆ ಆ ಮನೆ ತುಂಬಾ ಸಂತೋಷ ತುಂಬಿರುತ್ತದೆ. ಇನ್ನು ತಾಯಿಗಂತೂ ಅದು ಮರುಜನ್ಮ, ಒಂಬತ್ತು ತಿಂಗಳು ಹೊತ್ತು, ಹೆರಿಗೆ ನೋವು ಸಹಿಸಿಕೊಂಡ ಆಕೆಗೆ, ಬಳಿಕ ಆ ಮಗುವಿನ ಮುಕ ನೋಡಿ, ಒಮ್ಮೆ ಮಗುವನ್ನು ಮುದ್ದಾಡಿದರೇ ಎಲ್ಲ ನೋವು ಶಮನ. ಆದ್ರೆ ದುರಾದೃಷ್ಟವಶಾತ್​ ಈ ತಾಯಿಗೆ ಆ ಸಂತೋಷ ಸಿಗದಂತಾಗಿದೆ. ಈ ಕಥೆ ಓದಿದ್ರೆ ನಿಜಕ್ಕೂ ಕಣ್ಣೀರು ಬರುತ್ತದೆ. ಕೊರೊನಾ ತಂದಿಟ್ಟ ಪರಿಸ್ಥಿತಿ ನೋಡಿದರೆ ನಿಜಕ್ಕೂ …

Read More »

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಹವಾಮಾನ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಇಂದಿನಿಂದ ಜುಲೈ 10 ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.     ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಇಂದಿನಿಂದ ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ …

Read More »

24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ …

Read More »

ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

ಮಂಡ್ಯ(ಜು.05): ಕೋವಿಡ್ ಆಸ್ಪತ್ರೆಗೆ ತೆರಳಲು ಜೆಡಿಎಸ್ ಮುಖಂಡ ರಂಪಾಟ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಸೋಂಕು ದೃಢವಾದ್ರೂ ಮಂಡ್ಯದ ಕೋವಿಡ್ ಆಸ್ಪತ್ರೆಗೆ ಬರಲು ಜೆಡಿಎಸ್ ಮುಖಂಡ ಕಿರಿಕ್ ಮಾಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿರುವ ಸೋಂಕಿತ ಮುಖಂಡ ನಾನು ಆಸ್ಪತ್ರೆಗೆ ಬರಲ್ಲ. ಮನೆಯಲ್ಲೇ ಐಸೋಲೇಷನ್ ಆಗುತ್ತೇನೆಂದು ಪಟ್ಟು ಹಿಡಿದಿದ್ದಾರೆ. ಕೊರೋನಾ ತಡೆ​ಗಾಗಿ 15 ದಿನ ಲಾಕ್‌​ಡೌ​ನ್‌ಗೆ ಜೆಡಿ​ಎಸ್‌ ಆಗ್ರ​ಹ ಆರೋಗ್ಯ ಸಚಿವ ಶ್ರೀರಾಮುಲು ಅವರ ಜತೆ …

Read More »

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲಂಬೊ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಕ್ರಿಕೆಟಿಗ ಕುಸಾಲ್ ಮೆಂಡಿಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ 5.30ರ ಸುಮಾರಿಗೆ ಪನುಡೊರಾದ ಹೊರೆತುದುವಾ ಪ್ರದೇಶದಲ್ಲಿ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಸೈಕಲ್ ಸವಾರ 64 ವರ್ಷದ ವೃದ್ಧರೊಬ್ಬರು ಅಸುನೀಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಇಂದು ಕುಸಾಲ್ ಮೆಂಡಿಸ್ ಅವರನ್ನು ಬಂಧಿಸಿದ್ದಾರೆ. ಕ್ರಿಕೆಟಿಗನ ಬಂಧನ ವಿಷಯವನ್ನು ಪೊಲೀಸ್ ವಕ್ತಾರ ಜಲಿಯ ಸೇನರತ್ನೆ ಖಚಿತಪಡಿಸಿದ್ದಾರೆ. 25 ವರ್ಷ ಪ್ರಾಯದ ಕುಸಾಲ್ ಮೆಂಡಿಸ್ …

Read More »

ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದೇ ಕಾರಣಕ್ಕೆ ತೋಟಗಾರಿಕೆ ಇಲಾಖೆ ಲಾಲ್ ಭಾಗ್ ನಲ್ಲಿ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಲಾಲ್ ಭಾಗ್ ನ ಫಲಪುಷ್ಪ ಪ್ರದರ್ಶನ ವ್ಯಾಪಕ ಖ್ಯಾತಿ ಗಳಿಸಿದ್ದು, …

Read More »

ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಚಾರ್ಟರ್ಡ್ ಅಕೌಂಟೆಂಟ್ಸ್(ಸಿಎ) ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಮೇ/ಜುಲೈ ತಿಂಗಳಿನಲ್ಲಿ ನಡೆಯಬೇಕಿತ್ತು. ಮೇ ಮತ್ತು ನವೆಂಬರ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಸಂಯೋಜಿಸಿ ಈ ವರ್ಷದ ನವೆಂಬರ್ ನಲ್ಲಿ ನಡೆಸಲಾಗುವುದು. ಚಾರ್ಟರ್ಡ್ ಅಕೌಂಟೆಂಟ್ಸ್ ಪರೀಕ್ಷೆ ರದ್ದು ಮಾಡಿರುವ ಕುರಿತಾಗಿ ಐಸಿಎಐ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೊದಲು ಸಿಎ ಪರೀಕ್ಷೆಯನ್ನು ಮೇ …

Read More »

ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ….

ಬೆಳಗಾವಿ: ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಇಂದು ಜಿಲ್ಲೆ ಸಂಪೂರ್ಣ ಸ್ಥಬ್ದವಾಗಿದೆ. ಶನಿವಾರ ರಾತ್ರಿ 8 ಗಂಟೆಯಿಂದಲೆ ಲಾಕ್ ಡೌನ್ ಜಾರಿಗಿದ್ದರು ಸಹ ಸ್ವಲ್ಪ ಮಟ್ಟಿಗೆ ವಾಹನಗಳು ರಸ್ತೆ ಇಳಿದಿದ್ದವು. ಆದ್ರೆ ಭಾನುವಾರ ಬೆಳಗಿನ ಜಾವದಿಂದ ಬೆಳಗಾವಿ ಸ್ಥಬ್ಧವಾಗಿದೆ. ಪ್ರತಿ ದಿನ ಜನದಟ್ಟನೆ ಯಿಂದ ಕೂಡಿರುವ ಸಂಗೋಳಿ ರಾಮಣ್ಣ ವೃತ್ತ, ಬಸ್ ನಿಲ್ದಾಣ ರಸ್ತೆ, ಚನ್ನಮ್ಮ ವೃತ್ತ, ಖಡೇಬಜಾರ …

Read More »

ಪ್ರಸಕ್ತ ವರ್ಷದ ಮೂರನೇ ಚಂದ್ರಗ್ರಹಣ

ಬೆಂಗಳೂರು: ಪ್ರಸಕ್ತ ವರ್ಷದ ಮೂರನೇ ಚಂದ್ರಗ್ರಹಣ ಅಂದ್ರೆ ಗುರು ಪೂರ್ಣಿಮೆ ದಿನವೇ ಸಂಭವಿಸಲಿದೆ. ಅರೆನೆರಳಿನ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಆರಂಭವಾಗಿ, ಬೆಳಗ್ಗೆ 9.59ಕ್ಕೆ ಪೂರ್ಣ ಗೋಚರ ಕಂಡು, ಬೆಳಗ್ಗೆ 11.37ಕ್ಕೆ ಗ್ರಹಣ ಮೋಕ್ಷ ಕಾಣಲಿದೆ. ಒಟ್ಟು 2 ಗಂಟೆ 45 ನಿಮಿಷಗಳ ಕಾಲ ಚಂದ್ರನಿಗೆ ಗ್ರಹಣ ಹಿಡಿಯಲಿದೆ. ಆದರೆ ಭಾರತದಲ್ಲಿ ಈ ಚಂದ್ರಗ್ರಹಣ ಗೋಚರಿಸುವುದಿಲ್ಲ. ಇದು ಆಫ್ರಿಕಾ, ಉತ್ತರ ಅಮೆರಿಕಾ, ಫೆಸಿಫಿಕ್, ಅಟ್ಲಾಂಟಿಕ್, ಅಂಟಾರ್ಟಿಕಾದಲ್ಲಿ ಹೆಚ್ಚು ಗೋಚರವಾಗಲಿದೆ. ಜೋತಿಷ್ಯ ಶಾಸ್ತ್ರದ …

Read More »

ಕೊರೋನಾ ವಾರಿಯರ್ ತುಂಬು ಗರ್ಭಿಣಿ ಪತ್ನಿ ಬಿಚ್ಚಿಟ್ಟ ಕರಾಳ ಸತ್ಯ!

ಒಂಬತ್ತು ತಿಂಗಳ ಹೆಂಡತಿ ಹಾಗೂ ಆಕೆಯ ಗರ್ಭದಲ್ಲಿರುವ ದಿನ ತುಂಬಿದ ಮಗುವಿನ ಮೇಲೆ ಪ್ರಾಣವನ್ನೇ ಇಟ್ಟುಕೊಂಡ ಡಾಕ್ಟರ್ ಕೋವಿಡ್ ರೋಗಿಗಳನ್ನು ನೋಡುವ ಡ್ಯೂಟಿಯಲ್ಲಿರುವುದರಿಂದ 15 ದಿನಗಳಿಂದ ಮನೆಯತ್ತ ಮುಖ ಮಾಡಿಲ್ಲ. ಲಾಕ್‌ಡೌನ್ ಕಾರಣಕ್ಕೆ ಅತ್ತೆಮಾವರಾಗಲೀ, ಅಪ್ಪಅಮ್ಮರಾಗಲೀ ಗರ್ಭಿಣಿ ಮಿಸಸ್ ಕುಲಕರ್ಣಿಯ ಜೊತೆಗಿರಲು ಬರಲು ಸಾಧ್ಯವಾಗಿಲ್ಲ. ಮನೆಯಲ್ಲೊಬ್ಬಳೇ ಇರುವ ಮಿಸಸ್ ಕುಲಕರ್ಣಿ ತನ್ನ ಹೊಟ್ಟೆಯಲ್ಲಿರುವ ಕಂದನೊಡನೆ ಮಾತಾಡುತ್ತಾ ಪತಿ ಹಾಗೂ ಮಗುವಿನ ಕುರಿತ ತನ್ನ ನೆನಪು ಹಾಗೂ ಕನಸುಗಳನ್ನು ಬಿಚ್ಚಿಡುತ್ತಾ ಹೋಗುತ್ತಾಳೆ. …

Read More »