ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ …
Read More »ಕೊರನಾ ಸೋಂಕಿನ ಕಣಗಳು ಗಾಳಿಯಲ್ಲೂ ಹರಡುತ್ತದೆ: ವಿಜ್ಞಾನಿಗಳ ವಾದ
ಜಿನಿವಾ,ಜು.8- ಕಿಲ್ಲರ್ ಕೊರನಾ ಸೋಂಕಿನ ಕಣಗಳು ಗಾಳಿಯಲ್ಲೂ ಹರಡುತ್ತದೆ ಎಂಬ ವಿಜ್ಞಾನಿಗಳ ವಾದವನ್ನು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಕೊಂಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿಶ್ವಸಂಸ್ಥೆಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಮರಿಯಾ ವ್ಯಾನ್ ಕೆರ್ಕೋವೆ ಅವರು ಕೋವಿಡ್ ಸೋಂಕು ಗಾಳಿಯಲ್ಲಿ ಹರಡುತ್ತದೆ ಎಂದು 32 ದೇಶಗಳ 239 ವಿಜ್ಞಾನಿಗಳು ಸಾಕ್ಷೀಕರಿಸಿರುವ ಅಂಶವನ್ನು ವಿಶ್ವ ಆರೋಗ್ಯ ಸಂಸ್ಥೆ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ. ಈ ಮೊದಲು ಕೊರೊನಾ ಸೋಂಕು ಕಣ್ಣು ಮೂಗು ಬಾಯಿ …
Read More »ನಾಲ್ಕು ತಿಂಗಳ ಬಳಿಕ ಟಿವಿ ಪರದೆಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನೋಡುವ ಅವಕಾಶ
ನವದೆಹಲಿ: ಬರೋಬ್ಬರಿ ನಾಲ್ಕು ತಿಂಗಳ ಬಳಿಕ ಟಿವಿ ಪರದೆಯ ಮೇಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನೋಡುವ ಅವಕಾಶ ಲಭಿಸಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಟೂರ್ನಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಆಟದ ನಿಯಮಗಳಲ್ಲಿ ಕೆಲ ಮಧ್ಯಂತರ ಬದಲಾವಣೆಗಳನ್ನು ಮಾಡಿ ಮಾಹಿತಿ ನೀಡಿದೆ. ಪಂದ್ಯದ ವೇಳೆ ಚೆಂಡು ಹೊಳೆಯುವಂತೆ ಮಾಡಲು ಲಾಲಾರಸ(ಎಂಜಲು) ಹಾಕುವುದನ್ನು ನಿಷೇಧಿಸಿದೆ. ಅಲ್ಲದೇ ಅಂತಾರಾಷ್ಟ್ರೀಯ ಟೂರ್ನಿಗಳ …
Read More »ಮಲಗಿದ್ದವರ ಮೇಲೆ ಹರಿದ ಟ್ರಕ್- ಐವರು ದುರ್ಮರಣ
ಲಕ್ನೋ: ಪಾದಚಾರಿ ರಸ್ತೆ ಮೇಲೆ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಐವರು ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಸಿಕಂದ್ರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಸುಮಾರು 2 ಗಂಟೆಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಆರೋಪಿ ಟ್ರಕ್ ಚಾಲಕ ಮತ್ತು ಕ್ಲೀನರ್ ಪರಾರಿಯಾಗಲು …
Read More »ಸತತ ಮಳೆ: ನೂರು ಅಡಿ ತಲುಪಿದ KRS ನೀರಿನ ಮಟ್ಟ..!
ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟನೂರು ಅಡಿ ತಲುಪಿದೆ. ಕಳೆದೊಂದು ತಿಂಗಳಲ್ಲಿ ಜಲಾಶಯಕ್ಕೆ 8 ಅಡಿಗಳಷ್ಟುನೀರು ಹರಿದುಬಂದಿದೆ. ಅಣೆಕಟ್ಟು ನೂರರ ಗಡಿ ತಲುಪಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದು, ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ ಬಿರುಸುಗೊಂಡಿದೆ. ಮುಂಗಾರು ಹಂಗಾಮಿಗೆ ನೀರು ಸಿಗುವ ಆಶಾಭಾವನೆಯೂ ರೈತ ಸಮುದಾಯದಲ್ಲಿ ವ್ಯಕ್ತವಾಗಿದೆ. ಜೂ.7ರಂದು ಅಣೆಕಟ್ಟೆಯ ನೀರಿನ ಮಟ್ಟ92.20 ಅಡಿ ದಾಖಲಾಗಿತ್ತು. ಅಂದು ಜಲಾಶಯಕ್ಕೆ 837 ಕ್ಯುಸೆಕ್ ನೀರು ಹರಿದುಬರುತ್ತಿದ್ದು, 415 ಕ್ಯುಸೆಕ್ ನೀರನ್ನು ಅಣೆಕಟ್ಟೆಯಿಂದ ಹೊರಬಿಡಲಾಗುತ್ತಿತ್ತು. …
Read More »ಕೊರೊನಾ ಹಬ್ಬಿಸಿಲು ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆಯೋಜಿಸಿದ್ದಾರೆ……….?
ವಾಷಿಂಗ್ಟನ್: ಆತಂಕ ಮೂಡಿಸಿರುವ ಕೊರೊನಾ ತಡೆಗಟ್ಟಲು ರಾಷ್ಟ್ರಗಳು ಲಾಕ್ಡೌನ್ ಜಾರಿ ಮಾಡಿ ಸಾಮಾಜಿಕ ಅಂತ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ ಎಂದು ಸೂಚನೆ ನೀಡುತ್ತಿವೆ. ಆದರೆ ಅಮೆರಿಕದಲ್ಲಿ ಕೊರೊನಾ ಹಬ್ಬಿಸಿಲು ವಿದ್ಯಾರ್ಥಿಗಳು ಸ್ಪರ್ಧೆಯನ್ನು ಆಯೋಜಿಸಿದ್ದಾರೆ. ʼಯಾರಿಗೆ ಮೊದಲು ಕೊರೊನಾ ಬರುತ್ತದೆ?ʼ ಎಂಬ ಸ್ಪರ್ಧೆಯ ಪಾರ್ಟಿಯನ್ನು ಅಮೆರಿಕ ಅಲಬಾಮಾದ ಟಸ್ಕಲೂಸಾ ಎಂಬಲ್ಲಿ ಆಯೋಜಿಸಲಾಗಿತ್ತು. ಈ ಹುಚ್ಚಾಟದ ಸ್ಪರ್ಧೆಗೆ ಕೊರೊನಾ ಪಾಸಿಟಿವ್ ಬಂದವರನ್ನು ಉದ್ದೇಶಪೂರ್ವಕವಾಗಿ ಕರೆಸಲಾಗಿತ್ತು. ಕೊರೊನಾ ಬಾರದವರನ್ನು ಆಹ್ವಾನಿಸಲಾಗಿತ್ತು. ಕೊರೊನಾ ಬಾರದವರು ಪಾಸಿಟಿವ್ …
Read More »59 ಅಪ್ಲಿಕೇಶನ್ ನಿಷೇಧಿಸಿ ಡಿಜಿಟಲ್ ಸ್ಟ್ರೈಕ್ ಮಾಡಿದ ಬೆನ್ನಲ್ಲೇ ಭಾರತ ಚೀನಾಗೆ ಮತ್ತೊಂದು ಬಲವಾದ ಹೊಡೆತ ನೀಡಲು ಮುಂದಾಗುತ್ತಿದೆ.
ನವದೆಹಲಿ: 59 ಅಪ್ಲಿಕೇಶನ್ ನಿಷೇಧಿಸಿ ಡಿಜಿಟಲ್ ಸ್ಟ್ರೈಕ್ ಮಾಡಿದ ಬೆನ್ನಲ್ಲೇ ಭಾರತ ಚೀನಾಗೆ ಮತ್ತೊಂದು ಬಲವಾದ ಹೊಡೆತ ನೀಡಲು ಮುಂದಾಗುತ್ತಿದೆ. ಎರಡು ದೇಶಗಳ ವ್ಯಾಪಾರ ವಿಚಾರದಲ್ಲಿ ಭಾರತ ರಫ್ತು ಮಾಡುವುದಕ್ಕಿಂತ ಹೆಚ್ಚಾಗಿ ಚೀನಾದಿಂದ ಆಮದು ಜಾಸ್ತಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗ ಭಾರತ ಚೀನಾದಿಂದ ಆಮದು ಆಗುವ ವಸ್ತುಗಳ ಮೇಲೆ ಭಾರೀ ಪ್ರಮಾಣದಲ್ಲಿ ಆಮದು ಸುಂಕ ಏರಿಸಲು ಸಿದ್ಧತೆ ನಡೆಸುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ ಭಾರತದಲ್ಲಿ ತಯಾರಾಗುವ ವಸ್ತುಗಳು ಮತ್ತು …
Read More »ಕಿಲ್ಲರ್ ಕೊರೋನಾ ಹಾವಳಿಗೆ ವಿಶ್ವ ಹೈರಾಣ : 1.18 ಕೋಟಿ ಸೋಂಕಿತರು, ಮೃತರ ಸಂಖ್ಯೆ 5.41 ಲಕ್ಷ..!
ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜು.7- ಮಹಾಮಾರಿ ಕಿಲ್ಲರ್ ಕೊರೊನಾ ಕಬಂಧ ಬಾಹುಗಳಲ್ಲಿ ವಿಶ್ವವೇ ಹೈರಾಣಾಗಿದ್ದು, ರೋಗಿಗಳು ಮತ್ತು ಮೃತರÀ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲೇ ಮುಂದುವರಿದಿದೆ. ಜಗತ್ತಿನಾದ್ಯಂತ ಒಟ್ಟು ಸಾವಿನ ಸಂಖ್ಯೆ 5.41 ಲಕ್ಷ ಹಾಗೂ ಸೋಂಕಿತರ ಸಂಖ್ಯೆ 1.18 ಕೋಟಿ ದಾಟಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 67.42 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಜಗತ್ತಿನಾದ್ಯಂತ ನಿನ್ನೆ ಮಧ್ಯರಾತ್ರಿವರೆಗೆ 5,40,848 ಮಂದಿ ಸಾವಿಗೀಡಾಗಿದ್ದು, 1,17,48,938 ಸೋಂಕು ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳ …
Read More »ಯೋಗದಲ್ಲಿ ವಿಶ್ವದಾಖಲೆ ಬರೆದ 6ರ ಬಾಲೆ …..
ಬೆಳೆಯುವ ಪೈರು ಮೊಳಕೆ ಯಲ್ಲೇ ಎಂಬಂತೆ ಮಕ್ಕಳ ಪ್ರತಿಭೆ ಕಿರುವಯಸ್ಸಿನಲ್ಲೇ ಪರಿಚಿತ ವಾಗುತ್ತದೆ ಅದಕ್ಕೆ ನಿದರ್ಶನ ಬೆಂಗಳೂರಿನ ಆರು ವರ್ಷದ ಬಾಲೆ ನಿಖಿತ. ಇಷ್ಟು ಸಣ್ಣ ವಯಸ್ಸಿನಲ್ಲೇ ಯೋಗದಲ್ಲಿ ನೋಬೆಲ್ ವರ್ಡ್ರೆಕಾರ್ಡ್ ಮಾಡುವ ಮೂಲಕ ತನ್ನಅಸಾಧಾರಣ ಪ್ರತಿಭೆ ಮೆರೆದ ಪೋರಿಗೆ ಯೋಗವೆಂದರೆ ಅಚ್ಚುಮೆಚ್ಚು. ಈ ಸಣ್ಣ ವಯಸ್ಸಿನಲ್ಲಿ ಅತ್ಯಂತ ಕ್ಲಿಷ್ಟಕರವಾದ ಆಸನಗಳಾದ ಗಂಡಬೇರುಂಡಾಸನ, ಪೂರ್ಣಶಲ ಭಾಸನ, ಮಯೂರಾಸನ, ದೀಪಾಸನ,ಚಕ್ರಬಂಧಾಸನದಂತಹ ಹಲವು ಆಸನ ಕ್ರಿಯೆಗಳನ್ನು ಸಲೀಸಾಗಿ ಮಾಡುವ ನಿಖಿತಾ ಈ ಸಾಧನೆಯಿಂದ …
Read More »ನಾಯಿ ಮಾಂಸ ಮಾರಾಟ ನಿಷೇಧಕ್ಕೆ ಭಕ್ಷಕರಿಂದ ಆಕ್ರೋಶ..!
ನವದೆಹಲಿ,ಜು.7- ನಾಗಾಲ್ಯಾಂಡ್ನಲ್ಲಿ ನಾಯಿ ಮತ್ತು ಅದರ ಮಾಂಸ ಮಾರಾಟವನ್ನು ನಿಷೇಧಿಸಿರುವುದರ ಬಗ್ಗೆ ಕುಪಿತಗೊಂಡಿರುವ ಸ್ಥಳೀಯರು, ಏಕಾಏಕಿ ನಾಯಿ ಮಾಂಸದೂಟವನ್ನು ನಿಷೇಧಿಸುವುದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಾಲ್ಯಾಂಡ್ ಅಲ್ಲದೆ ದೇಶದ ಹಲವೆಡೆ ನಾಯಿ ಮಾಂಸವನ್ನು ಹೆಚ್ಚು ಮಾರಾಟ ಮಾಡಲಾಗುತ್ತದೆ. ಮಣಿಪುರ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಗುಡ್ಡಗಾಡು ಪ್ರದೇಶಗಳಲ್ಲಿ ನಾಯಿ ಮಾಂಸವನ್ನು ತಿನ್ನಲಾಗುತ್ತದೆ. ಇಡೀ ಈಶಾನ್ಯ ಪ್ರದೇಶಗಳಲ್ಲಿ ನಾಯಿಗಳ ಕಳ್ಳಸಾಗಣೆಯ ದಂಧೆಯೇ ನಡೆಯುತ್ತಿದೆ. ನಾಗಾಲ್ಯಾಂಡ್ ಮತ್ತು …
Read More »
Laxmi News 24×7