Breaking News

ಅಂತರಾಷ್ಟ್ರೀಯ

ಪ್ರಧಾನ ಮಂತ್ರಿ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ……….?

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಸೇನೆಗಳ ಸಂಘರ್ಷವಾಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸರ್ವ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ 5ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು ಸದ್ಯದ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಯಲಿದೆ. ಭಾರತ ಮತ್ತು ಚೀನಾ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಸಂಘರ್ಷವಾಗಿ 20 ಮಂದಿ ಭಾರತೀಯ ಸೈನಿಕರು ಮೃತಪಟ್ಟಿರುವ ಬಗ್ಗೆ …

Read More »

ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಎದುರಿಸುವುದು ಕಷ್ಟ..

ಲಂಡನ್: ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಎದುರಿಸುವುದು ಕಷ್ಟ ಎಂದು ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಡೇನಿಯಲ್ ವ್ಯಾಟ್ ತಿಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಹೆಚ್ಚಿನ ಸಮಯವನ್ನು ಇಂಗ್ಲೆಂಡ್‍ನಲ್ಲಿ ಕಳೆಯುತ್ತಾರೆ. ಇಂಗ್ಲೆಂಡ್ ಕ್ರಿಕೆಟ್ ಆಟಗಾರರಿಗೆ ತರಬೇತಿ ವೇಳೆ ಬೌಲಿಂಗ್ ಮಾಡುವ ಅವಕಾಶವನ್ನು ಅರ್ಜುನ್ ಪಡೆದಿದ್ದಾರೆ. ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಜೊತೆಯೂ ಅರ್ಜುನ್ …

Read More »

20 ಯೋಧರ ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ: ರಾಜನಾಥ್‍ಸಿಂಗ್

ನವದೆಹಲಿ, ಜೂ.17- ಭಾರತದ ವಿರುದ್ಧ ಕಾಲುಕೆರೆದು ಸಂಘರ್ಷ ಉಂಟುಮಾಡಿದ್ದಲ್ಲದೆ 20 ಯೋಧರನ್ನು ಹತ್ಯೆ ಮಾಡಿರುವ ಪ್ರತೀಕಾರಕ್ಕೆ ಭಾರತ ಸನ್ನದ್ಧವಾಗಿದ್ದು, ಸೈನಿಕರ ತ್ಯಾಗವನ್ನು ಮರೆಯುವುದಿಲ್ಲ ಎನ್ನುವ ಮೂಲಕ ಚೀನಾಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. 20 ಯೋಧರ ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆಯುವುದಿಲ್ಲ. ಸೈನಿಕರ ಸಾವು ಅತ್ಯಂತ ನೋವು ತಂದಿದೆ. ಇದಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‍ಸಿಂಗ್ ಪರೋಕ್ಷವಾಗಿ ಚೀನಾ ರಾಷ್ಟ್ರವನ್ನು ಉಲ್ಲೇಖಿಸದೆ ಭಾರತ ಸಮರಕ್ಕೆ ಸಿದ್ಧ …

Read More »

ವಿಶ್ವದಾದ್ಯಂತ ಕ್ರೂರಿ ಕೊರೋನಾಗೆ 4.47 ಲಕ್ಷ ಬಲಿ, 82.65 ಲಕ್ಷ ಮಂದಿಯಲ್ಲಿ ಸೋಂಕು…………..

ವಾಷ್ಟಿಂಗ್ಟನ್/ರಿಯೋ-ಡಿ-ಜನೈರೋ/ಮಾಸ್ಕೋ, ಜೂ.17- ಜಗವೇ ಒಗ್ಗೂಡಿದ್ದರೂ ಜಗ್ಗದಜಗಮೊಂಡ ಕೋಡ್-19 ವೈರಸ್ ಹಾವಳಿ ಮುಂದುವರಿದಿದೆ.  ನಾಶಕಾರಿ ಮಹಾಮಾರಿ ದಾಳಿಯಿಂದ ವಿಶ್ವಕಂಗಾಲಾಗಿದ್ದು, ಸಾವಿನ ಸಂಖ್ಯೆ 4.47ಲಕ್ಷಹಾಗೂ ಸೋಂಕಿತರ ಸಂಖ್ಯೆ82.65 ಲಕ್ಷಮೀರಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 43.21 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಡೆಡ್ಲಿಕೊರೊನಾ ಹಾವಳಿಯಿಂದ ಜಗತ್ತಿನ ನಾನಾ ದೇಶಗಳಲ್ಲಿ ಸೋಂಕು ಮತ್ತು ಸಾವು ಸಂಖ್ಯೆಯಲ್ಲಿಮತ್ತೆಭಾರೀ ಏರಿಕೆ ಕಂಡುಬಂದಿದೆ. ಇನ್ನು ಕೆಲವು ರಾಷ್ಟ್ರಗಳಲ್ಲಿ ಹಾವಳಿ ಕಡಿಮೆಯಾಗಿದೆ. 10ಕ್ಕೂ ಹೆಚ್ಚು ದೇಶಗಳು ಪೀಡೆಯಿಂದ ಮುಕ್ತವಾಗಿರುವುದು …

Read More »

ಕೊರೊನಾ ವೈರಸ್‌ – ರೋಗಿಯ ಜೀವ ಉಳಿಸಬಲ್ಲ ಮೊದಲ ಔಷಧಿ ಲಭ್ಯ…..

ಲಂಡನ್‌: ಸದ್ಯಕ್ಕೆ ಕೊರೊನಾ ವೈರಸ್‌ಗೆ ಔಷಧಿ ಲಭ್ಯವಿಲ್ಲ. ವಿಶ್ವದ ವಿವಿಧ ದೇಶಗಳಲ್ಲಿ ಔಷಧಿ ಕಂಡು ಹಿಡಿಯುವ ಕಾರ್ಯ ನಡೆಯುತ್ತಿದೆ. ಆದರೆ ಇಂಗ್ಲೆಂಡ್‌ ಸಂಶೋಧಕರು ಒಂದು ಡ್ರಗ್ಸ್‌ ನೀಡುವ ಮೂಲಕ ಕೋವಿಡ್‌ 19 ಗುಣಪಡಿಸಬಹುದು ಎಂದು ಹೇಳಿದ್ದಾರೆ. ಹೌದು. ವಿಶ್ವದೆಲ್ಲೆಡೆ ಕಡಿಮೆ ಬೆಲೆಗೆ ಸಿಗುವ ʼಡೆಕ್ಸಮೆಥಾಸೊನ್ʼ(Dexamethasone) ನೀಡಿದ್ರೆ ಕೋವಿಡ್‌ 19 ನಿಂದ ಬಳಲುತ್ತಿರುವ ರೋಗಿ ಗುಣವಾಗುವ ಸಾಧ್ಯತೆ ಹೆಚ್ಚು  ಎಂದು ಸಂಶೋಧಕರು ತಿಳಿಸಿದ್ದಾರೆ. ಡೆಕ್ಸಮೆಥಾಸೊನ್ ನೀಡಿದ್ದರಿಂದ ಇಂಗ್ಲೆಂಡ್‌ನಲ್ಲಿ ಸಾವಿನ ದವಡೆಯಲ್ಲಿದ್ದ ಸುಮಾರು …

Read More »

ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿಯ ಅಳತೆ, ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿ ಮನೆ ಮೇಲೆ ದಾಳಿ ನಡೆದೆ‌ ಅಸಿಸ್ಟೆಂಟ್ ಕಂಟ್ರೋಲರ್ ಸುಭಾಷ್ ಉಪ್ಪಾರ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರುಕ್ಮಿಣಿ ನಗರದ ನಿವಾಸ ಮತ್ತು, ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಸುಭಾಷ್ ಉಪ್ಪಾರ್, ಬೆಳಗಾವಿಯ ತೂಕ ಮತ್ತು ಮಾಪನ ಇಲಾಖೆಯ ಇನ್ವೆಸ್ಟಿಗೇಷನ್ ಯೂನಿಟ್ 3ರ ಅಸಿಸ್ಟೆಂಟ್ ಕಂಟ್ರೋಲರ್ ಆಗಿದ್ದಾರೆ. ಏಕಕಾಲದಲ್ಲಿ ನಾಲ್ಕು ಕಡೆ ದಾಳಿ ಮಾಡಿದ 30 …

Read More »

ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ

 ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್​​-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ. ಇನ್ನು, ಮಹಾಮಾರಿ ಕೋವಿಡ್​​-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್​ನಿಂದ …

Read More »

ಟ್ವೀಟ್ ಮೂಲಕ ತಿಳಿಸಿದ ಅಫ್ರಿದಿ

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಆಟಗಾರ, ಶಾಹಿದ್ ಅಫ್ರಿದಿ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಆಗಿದೆ. ಈ ಕುರಿತು ಖುದ್ದು ಶಾಹಿದ್ ಆಫ್ರಿದಿ ಅವರು ಟ್ವೀಟ್ ಮಾಡಿದ್ದಾರೆ.   “ಗುರುವಾರದಿಂದ ನನ್ನ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು, ನನ್ನ ದೇಹ ಬಹಳ ನೋವನ್ನು ಅನುಭವಿಸುತ್ತಿತ್ತು. ಟೆಸ್ಟ್ ಮಾಡಿಸಿದಾಗ, ಕೊರೊನಾ ಸೋಂಕು ಪಾಸಿಟಿವ್ ಎಂದು ರಿಪೋರ್ಟ ಬಂದಿದೆ. ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಆದ ಶಾಹಿದ್ ಅಫ್ರಿದಿ.

Read More »

ಕೊರೊನಾ ಅಟ್ಟಹಾಸ- ವಿಶ್ವ ಪಟ್ಟಿಯಲ್ಲಿ ಭಾರತಕ್ಕೆ ಐದನೇ ಸ್ಥಾನಕ್ಕೆ……….

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಆದ್ರೆ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಭಾರತದಲ್ಲಿ ಇನ್ನು ಕೊರೊನಾ ಸ್ಫೋಟಗೊಂಡಿಲ್ಲ. ಲಾಕ್‍ಡೌನ್ ವಿನಾಯತಿ ಹಿನ್ನೆಲೆ ಮುಂದೆ ಈ ಸಾಧ್ಯತೆಗಳು ಹೆಚ್ಚು ಎನ್ನುತ್ತಿದೆ. ಈ ವಾದಗಳ ನಡುವೆ ಇಂದು ಭಾರತ ಮತ್ತೊಂದು ಕೆಟ್ಟ ದಾಖಲೆ ಬರೆಯುವತ್ತ ಹೆಜ್ಜೆ ಹಾಕಿದೆ.   ದೇಶದಲ್ಲಿ ಕೊರೊನಾ ಸೋಂಕಿನ ಬಳ್ಳಿ ವೇಗವಾಗಿ ಹಬ್ಬಲು ಶುರುವಾಗಿದೆ. ಲಾಕ್‍ಡೌನ್ ನಿಂದ ರಾಜ್ಯಗಳಿಗೆ ಸೀಮಿತವಾಗಿದ್ದ ಸೋಂಕು, ವಿನಾಯತಿ …

Read More »

ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ:

ಚಂಡೀಗಢ: ಬಿಜೆಪಿ ಮುಖಂಡೆ, ಟಿಕ್‍ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಫೋಗಟ್ ಶುಕ್ರವಾರ ಹಿಸಾರ್ ನ ಬಾಲ್ಸಮಂದ್ ಮಂಡಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹಿಸಾರ್ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಲ್ತಾನ್ ಸಿಂಗ್‍ರನ್ನು ಫೋಗಟ್ ಥಳಿಸಿದ್ದಾರೆ. ಕೆಲವು ರೈತರು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸುವ ವಿಚಾರದಲ್ಲಿ ಸಮಸ್ಯೆಗಳಿವೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಫೋಗಟ್ ಮಂಡಿಯ …

Read More »