ನವದೆಹಲಿ: ಕೊರೊನಾ ಲಾಕ್ಡೌನ್ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ನಿಂದ ಕೋಟಿ ಕೋಟಿ ಹಣ ಗಳಿಸಿದ್ದಾರೆ. ಲಾಕ್ಡೌನ್ ಕೆಲವು ಆಟಗಾರರ ಮೇಲೆ ಯಾವುದೇ ಆರ್ಥಿಕ ಪರಿಣಾಮ ಬೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಪೋರ್ಚುಗಲ್ನ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಇನ್ಸ್ಟಾಗ್ರಾಮ್ನಿಂದ ಸುಮಾರು 18 ಕೋಟಿ ರೂ. ಗಳಿಸಿದ್ದಾರೆ. ಈ ಮೂಲಕ ಇನ್ಸ್ಟಾದಿಂದ ಹೆಚ್ಚು ಹಣಗಳಿಸಿದವರ ಪಟ್ಟಿಯಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದು, …
Read More »ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.
ಬೆಂಗಳೂರು: ಭೂಗತ ಜಗತ್ತಿನ ಡಾನ್ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿದೆ. ಮುಂಬೈನ ಡೊಂಗ್ರಿಯಲ್ಲಿ ಜನಿಸಿದ ದಾವೂದ್ ಇಬ್ರಾಹಿಂ ಕಸ್ಕರ್ ಪ್ರಸ್ತುತ ಕರಾಚಿಯಲ್ಲಿ ವಾಸಿಸುತ್ತಿದ್ದಾನೆ ಎನ್ನಲಾಗಿದೆ. ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪದಕರಲ್ಲಿ ದಾವೂದ್ ಇಬ್ರಾಹಿಂ ಕೂಡ ಒಬ್ಬನಾಗಿದ್ದಾನೆ. ದಾವೂದ್ 1993 ರ ಬಾಂಬೆ ಸ್ಫೋಟದ ಆರೋಪಿಯಾಗಿದ್ದು, ಆತನ ವಿರುದ್ಧ ಹಲವಾರು ಇಂಟರ್ಪೋಲ್ ನೋಟಿಸ್ಗಳಿವೆ. ಸದ್ಯ ದಾವೊದು ಪ್ರಸ್ತುತ ಕರಾಚಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …
Read More »ಮುಂದಿನ ವಾರ ಅಮೆರಿಕದ ಭಾರತಕ್ಕೆ ಬರಲಿವೆ 100 ವೆಂಟಿಲೇಟರ್ ……..
ವಾಷಿಂಗ್ಟನ್, ಜೂ.3- ಡೆಡ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ನೆರವು ನೀಡುವ ನಿಟ್ಟಿನಲ್ಲಿ ಅಮೆರಿಕ ಕೊಡುಗೆ ಯಾಗಿ ನೀಡಿರುವ ಮೊದಲ ತಂಡದ 100 ವೆಂಟಿಲೇಟರ್ಗಳು (ಪ್ರಾಣವಾಯು ಸಾಧನ) ಮುಂದಿನ ವಾರ ಭಾರತ ತಲುಪಲಿವೆ. ಹಡಗಿನ ಮೂಲಕ 100 ವೆಂಟಿಲೇಟರ್ಗಳ ಮೊದಲ ತಂಡ ಮುಂದಿನ ವಾರ ಭಾರತ ತಲುಪಲಿದೆ ಎಂದು ವಾಷಿಂಗ್ಟನ್ನಲ್ಲಿರುವ ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸ ಶ್ವೇತಭವನದ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಮತ್ತು ನರೇಂದ್ರ ಮೋದಿ ಅವರ …
Read More »ಕೊರೊನಾಗೆ ಪಾಕ್ನ ಮತ್ತೊಬ್ಬ ಕ್ರಿಕೆಟಿಗ ಬಲಿ……….
ಇಸ್ಲಾಮಾಬಾದ್: ಹೆಮ್ಮಾರಿ ಕೊರೊನಾ ವೈರಸ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟರ್ ರಿಯಾಝ್ ಶೇಖ್ (51) ಬಲಿಯಾಗಿದ್ದಾರೆ. ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ, ವಿಕೆಟ್ಕೀಪರ್ ರಶೀದ್ ಲತೀಪ್ ಅವರು ಟ್ವಿಟ್ ಮೂಲಕ ರಿಯಾಝ್ ಶೇಖ್ ನಿಧನವನ್ನು ಖಚಿತಪಡಿಸಿದ್ದಾರೆ. ಕೋವಿಡ್-19 ಸೋಂಕು ತಗುಲಿದ್ದ ರಿಯಾಝ್ ಶೇಖ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ರಿಯಾಝ್ 1987ರಿಂದ 2005ರವರೆಗೆ 43 ಪ್ರಥಮದರ್ಜೆ ಪಂದ್ಯಗಳನ್ನು ಆಡಿದ್ದು, ದೇಶಿ ಟೂರ್ನಿಗಳಲ್ಲಿ …
Read More »ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ವಿತರಣೆ .
ಪಾಟ್ನಾ: 14 ದಿನಗಳ ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್ಗಳನ್ನು ಉಚಿತವಾಗಿ ವಿತರಣೆ ಮಾಡಿದೆ. ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಿಹಾರದಲ್ಲಿ ಕುಟುಂಬ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹೊಸ ಯೋಜನೆ ಜಾರಿ ಮಾಡಿದೆ. ಅಲ್ಲದೇ ಕೋವಿಡ್-19ಗೂ ಸರ್ಕಾರದ ಹೊಸ ಕಾರ್ಯಕ್ರಮಕ್ಕೂ …
Read More »ಇಂಡೋನೇಷ್ಯಾದ ರಕ್ಷಣಾ ಸಚಿವರು ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಜಕಾರ್ತಾ: ಇಡೀ ವಿಶ್ವವೇ ಕೊರೊನಾ ವೈರಸ್ಗೆ ಬೆಚ್ಚಿಬಿದ್ದಿದೆ. ಆದರೆ ಈ ನಡುವೆ ಇಂಡೋನೇಷ್ಯಾದ ರಕ್ಷಣಾ ಸಚಿವರು ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡಿ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಇವರನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂಡೋನೇಷ್ಯಾದ ಸಚಿವ ಮೊಹಮ್ಮದ್ ಮಹಫೂದ್ ಎಂ.ಡಿ ಕೊರೊನಾ ವೈರಸ್ ಅನ್ನು ಪತ್ನಿಗೆ ಹೋಲಿಕೆ ಮಾಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ಜಕಾರ್ತದ ಸ್ಥಳೀಯ ವಿಶ್ವವಿದ್ಯಾಲಯವೊಂದು ಆಯೋಜಿಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಎಡವಟ್ಟು ಹೇಳಿಕೆ ನೀಡಿದ್ದಾರೆ. …
Read More »ಇನ್ಮುಂದೆ ನಮಗೂ,(ಡಬ್ಲ್ಯೂಹೆಚ್ಒ) ಅದಕ್ಕೂ ಸಂಬಂಧವೇ ಇಲ್ಲ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಹೆಚ್ಒ) ಜೊತೆಗಿನ ಸಂಬಂಧವನ್ನು ಅಮೆರಿಕ ಕಡಿದುಕೊಂಡಿದ್ದು, ಇನ್ಮುಂದೆ ನಮಗೂ ಅದಕ್ಕೂ ಸಂಬಂಧವೇ ಇಲ್ಲವೆಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ನಾವು ಮನವಿ ಮಾಡಿದ್ದ ಹಾಗೂ ನಮಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾವು ಅದರ ಜೊತೆಗಿನ ಸಂಬಂಧವನನ್ನು ಕಡಿತಗೊಳಿಸುವುದಾಗಿ ಮಾಧ್ಯಮಗಳ ಮುಂದೆ ಟ್ರಂಪ್ ಹೇಳಿಕೆ ನೀಡಿದ್ದಾರೆ.ಕೊರೊನಾ ತಡೆಗೆ ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ …
Read More »ನ್ಯೂಜಿಲೆಂಡ್ ಈಗ ಜಗತ್ತಿನ ಕೊರೊನಾ ಮುಕ್ತವಾದ ಮೊದಲ ದೇಶ…….
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಈಗ ಜಗತ್ತಿನ ಕೊರೊನಾ ಮುಕ್ತವಾದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನ್ಯೂಜಿಲೆಂಡಿನಲ್ಲಿ 1,504 ಪ್ರಕರಣಗಳು(836 ಹೆಂಗಸರು, 668 ಗಂಡಸರು) ಬೆಳಕಿಗೆ ಬಂದಿದ್ದು 22 ಮಂದಿ ಸಾವನ್ನಪ್ಪಿದ್ದಾರೆ. ಇಂದು ಕೊನೆಯ ರೋಗಿ ಆಸ್ಪತ್ರೆಯಿಂದ ಗುಣಮುಖವಾಗುವ ಮೂಲಕ ಕೊರೊನಾ ಮುಕ್ತ ದೇಶವಾಗಿ ಹೊರಹೊಮ್ಮಿದೆ. ಮುಕ್ತವಾಗಿದ್ದು ಹೇಗೆ? ಕೊರೊನಾ ವೈರಸ್ ಹಾವಳಿ ವ್ಯಾಪಕವಾಗಲಿದೆ ಎಂಬುದನ್ನು ಮೊದಲೇ ತಿಳಿದು ಮಾರ್ಚ್ 14ರಂದು ವಿದೇಶದಿಂದ ಬಂದವರು ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ನಲ್ಲಿರಬೇಕೆಂದು ಸರ್ಕಾರ ಸೂಚಿಸಿತ್ತು. …
Read More »ಸೋಮವಾರದಿಂದ ವಿಮಾನ ಟೇಕಾಫ್- ಪ್ರಯಾಣಿಕರ ಕ್ವಾರಂಟೈನ್ ಹೇಗೆ?
ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಕೊರೋನಾ ಅಟ್ಟಹಾಸದ ನಡುವೆ ಸೋಮವಾರದಿಂದ ದೇಶದಲ್ಲಿ ದೇಶಿಯ ವಿಮಾನಗಳ ಹಾರಾಟ ಆರಂಭ ಆಗುತ್ತಿದೆ. ಸರಿಸುಮಾರು 2 ತಿಂಗಳ ಬಳಿಕ ವಿಮಾನಗಳು ಗರಿಬಿಚ್ಚಿ ಹಾರಲಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇ 25ರಿಂದ ಜೂನ್ 30ರವರೆಗೂ ವಿಮಾನಗಳ ಹಾರಾಟಕ್ಕೆ ಮೊದಲ ಹಂತದ ಅನುಮತಿ ನೀಡಲಾಗಿದೆ. ನಾಳೆಯಿಂದ ನಿತ್ಯವೂ 215 ವಿಮಾನಗಳ ಟೇಕ್ ಆಫ್, ಲ್ಯಾಂಡಿಂಗ್ ನಡೆಯಲಿದೆ. ಪ್ರತಿ 10 ನಿಮಿಷಕ್ಕೆ ಒಂದರಂತೆ ವಿಮಾನಗಳು ಟೆಕ್ಆಫ್ …
Read More »ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
ಬೆಂಗಳೂರು: ಕೊರೊನಾ ವೈರಸ್ ಲಾಕ್ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ …
Read More »
Laxmi News 24×7