ನವದೆಹಲಿ, ಫೆ.8-ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 3ನೇ ಬಾರಿ ಗೆಲುವಿನೊಂದಿಗೆ ಹ್ಯಾಟ್ರಿಕ್ ವಿಜಯ ಸಾಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿ.ಆರ್.ಲೈನ್ನಲ್ಲಿ ಇಂದು ತಮ್ಮ ಪತ್ನಿ ಸುನೀತಾ ಮತ್ತು ಪ್ರಥಮ ಬಾರಿ ಮತ ಚಲಾಯಿಸಲು ಅರ್ಹತೆ ಪಡೆದಿರುವ ಪುತ್ರ ಪುಳಕಿತ್ ಅವರೊಂದಿಗೆ ಹಕ್ಕು ಚಲಾಯಿಸಿದ ನಂತರ ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿದರು. ನಮ್ಮ ಉತ್ತಮ ಆಡಳಿತವನ್ನು ಮೆಚ್ಚಿ ದೆಹಲಿ ಜನತೆ …
Read More »ಚೀನಾ-ಬೆಂಗಳೂರು ನಡುವೆ ವಿಮಾನ ಸಂಚಾರ ಬಂದ್..!
ಬೆಂಗಳೂರು, ಫೆ.4-ಕೊರೋನಾ ವೈರಸ್ ಭೀತಿಯಿಂದಾಗಿ ಚೀನಾ-ಬೆಂಗಳೂರು ನಡುವೆ ಸಂಚರಿಸುವ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಹಾಂಕಾಂಗ್, ಥೈಲ್ಯಾಂಡ್, ಸಿಂಗಪೂರ್ ನಡುವಿನ ಸಂಚಾರ ಮುಂದುವರೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹುತೇಕ ಕೊರೋನಾ ವೈರಸ್ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸುವುದನ್ನು ಕಡಿಮೆ ಮಾಡಲಾಗಿದೆ. ಕಳೆದ ವಾರದವರೆಗೂ ಚೀನಾದಿಂದ ವಿಮಾನಗಳು ಭಾರತಕ್ಕೆ ಆಗಮಿಸುತ್ತಿದ್ದವು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೀನಾದಿಂದ ನೇರವಾಗಿ ವಿಮಾನಗಳು ಸಂಚರಿಸುತ್ತಿದ್ದವು. ಆದರೆ ಕೊರೋನಾ ವೈರಸ್ನ ಹರಡುವಿಕೆ ಹೆಚ್ಚಾಗಿದ್ದರಿಂದಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ.ಚೀನಾದಿಂದ …
Read More »ಸಾಹುಕಾರ್ ರಮೇಶ್ ಜಾರಕಿಹೋಳಿ ನೇತೃತ್ವದಲ್ಲಿ ತಿರುಪತಿಗೆ ತೆರಳಲು ಸಿದ್ಧ ಮಾಡಿಕೊಂಡಿರೋ ತಂಡ
ಸಿಎಂ ಯಡಿಯೂರಪ್ಪ ಸಂಪುಟ ಸಂಪುಟ ವಿಸ್ತರಣೆಗೆ ಗುರುವಾರ ಸಮಯ ನಿಗದಿ ಮಾಡಿದ್ದಾರೆ. ಈಗಾಗಲೇ ಯಾರು ಮಂತ್ರಿ ಅಂತಾನೂ ಬಹುತೇಕ ಫೈನಲ್ ಆಗಿದೆ. ಹೆಸರು ಫೈನಲ್ ಆಗಿರೋ ಅರ್ಹ ಶಾಸಕರು ಮುಂದಿನ ರಾಜಕೀಯ ಜೀವನ ಒಳ್ಳೆಯದು ಮಾಡಪ್ಪ ಅಂತ ಬೇಡಿಕೊಳ್ಳಲು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗ್ತಿದ್ದಾರೆ. ಗೆದ್ದ 11 ಶಾಸಕರ ಪೈಕಿ 10 ಜನರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಗುರುವಾರ ಸಂಪುಟ ಸೇರ್ಪಡೆ ಆಗೋಕು ಮುಂಚೆ ಸಾಹುಕಾರ್ ಟೀಂ ತಿರುಪತಿಗೆ …
Read More »ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನ ವೈರಸ್ಗೆ ಥೈಲ್ಯಾಂಡ್ನಲ್ಲಿ ಔಷಧಿ ಕಂಡು ಹಿಡಿಯಲಾಗಿದೆ.
ಬ್ಯಾಂಕಾಕ್, ಫೆ.3- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನ ವೈರಸ್ಗೆ ಥೈಲ್ಯಾಂಡ್ನಲ್ಲಿ ಔಷಧಿ ಕಂಡು ಹಿಡಿಯಲಾಗಿದೆ.ಬ್ಯಾಂಕಾಕ್ನ ವೈದ್ಯರು ಮಾರಕ ಸಾಂಕ್ರಾಮಿಕ ರೋಗಗಳು ಹಾಗೂ ಎಚ್ಐವಿಗೆ ನೀಡಲಾಗುವ ಔಷಧಿಗಳನ್ನು ಮಿಶ್ರಣ ಮಾಡಿ ಕೊರೋನ ಸೋಂಕು ಪೀಡಿತ ರೋಗಿಗೆ ಚಿಕಿತ್ಸೆ ನೀಡಿದ್ದು, 48 ಗಂಟೆಯಲ್ಲಿ ವೈರಾಸ್ ನಿರ್ನಾಮವಾಗಿ ರೋಗಿ ಗುಣಮುಖರಾಗಿದ್ದಾರೆ ಎಂದು ಥೈಲ್ಯಾಂಡ್ ಸರ್ಕಾರ ಪ್ರಕಟಿಸಿದೆ. ಚೀನಾದ 71 ವರ್ಷದ ಮಹಿಳೆಯೊಬ್ಬರು ಥೈಲ್ಯಾಂಡ್ನಲ್ಲಿ ಪ್ರವಾಸ ಮಾಡುವಾಗ ಸೋಂಕಿನಿಂದ ಬಳಲುತ್ತಿರುವುದು ಪತ್ತೆಯಾಗಿತ್ತು. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ …
Read More »ನಿರ್ಭಯಾ ಪ್ರಕರಣದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಶೀಘ್ರವೇ ಗಲ್ಲು ಶಿಕ್ಷೆಗೆ ಒಳಪಡಿಸಬೇಕೆಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಬಳಿಕ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ದೆಹಲಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವಾಲಯ ಪಟಿಯಾಲ ಹೌಸ್ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದವು. ಪಟಿಯಾಲ ಕೋರ್ಟ್ ನಿರ್ಭಯಾ ಪ್ರಕರಣದ ದೋಷಿಗಳ ಡೆತ್ ವಾರೆಂಟ್ ಗೆ ತಡೆಯನ್ನು ನೀಡಿದೆ. ಈ ವೇಳೆ ವಾದ …
Read More »ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ
ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …
Read More »ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್ಲೈಫ್ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್
ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟೀಂ ಮತ್ತೆ ಕಾಡಿನತ್ತ ಮುಖಮಾಡಿದ್ದು, ಈ ಬಾರಿ ಉತ್ತರಾಖಂಡ್ನ ಸತ್ತಲ್ ಫಾರೆಸ್ಟ್ ನಲ್ಲಿ ವನ್ಯಜೀವಿಗಳ ಛಾಯಾಗ್ರಹಣ ಮಾಡಲಿದೆ. ಹೌದು. ಇತ್ತೀಚೆಗಷ್ಟೇ ಕೀನ್ಯಾ ಕಾಡಿನಲ್ಲಿ ವೈಲ್ಡ್ಲೈಫ್ ಫೋಟೋಗಳನ್ನು ಸೆರೆಹಿಡಿದಿದ್ದ ದರ್ಶನ್ ಈಗ ಉತ್ತರಾಖಂದದ ಕಾಡಿನತ್ತ ಕ್ಯಾಮರಾ ಹಿಡಿದು ಹೊರಟಿದ್ದಾರೆ. ದೊಡ್ಡ ಕ್ಯಾಮೆರಾ ಹೆಗಲಿಗೆ ಹಾಕೊಂಡು ವೈಲ್ಡ್ಲೈಫ್ ಫೋಟೋಗ್ರಾಫರ್ ಟೀಂ ಜೊತೆ ಕಲ್ಲು, ಬಂಡೆಯ ನಡುವೆ ಸಾಗಿ ಕಾಡು ಸುತ್ತಿದ್ದಾರೆ. ಆ ದಟ್ಟಕಾಡಿನಲ್ಲಿ ದಾಸ ಮಾಡಿರುವ ಸಾಹಸಮಯ …
Read More »ನಿರ್ಭಯಾ ಪ್ರಕರಣ ನಾಲ್ವರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ನವದೆಹಲಿ, ಜ.29-ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಗಲ್ಲು ಶಿಕ್ಷೆ ಸಮೀಪಿರುತ್ತಿರುವಂತೆ ನಿರ್ಭಯಾ ಗ್ಯಾಂಗ್ರೇಪ್ ಮತ್ತು ಹಂತಕರು ಮರಣ ದಂಡನೆಯನ್ನು ವಿಳಂಬ ಮಾಡಲು ಮತ್ತೆ ಮತ್ತೊಂದು ತಂತ್ರ ಅನುಸರಿಸಿದ್ದಾರೆ. ಈ ಪ್ರಕರಣದಲ್ಲಿ ಗಲ್ಲು ಶಿಕ್ಷೆ ಎದುರಿಸಲಿರುವ ನಾಲ್ವರು ದೋಷಿಗಳಲ್ಲಿ ಅಕ್ಷಯ್ ಕುಮಾರ್ ಇಂದು ಸುಪ್ರೀಂಕೋರ್ಟ್ಗೆ ಕ್ಯುರೇಟಿವ್ (ಪರಿಹಾರಾತ್ಮಕ) ಅರ್ಜಿ ಸಲ್ಲಿಸಿದ್ದಾನೆ. ಇದರಿಂದಾಗಿ ಫೆ.1ರಂದು ಬೆಳಗ್ಗೆ 6 ಗಂಟೆಗೆ ನಾಲ್ವರು ದೋಷಿಗಳಿಗೆ ನೇಣುಗಂಬಕ್ಕೇರಿಸುವುದು ವಿಳಂಬವಾಗುವ ಸಾಧ್ಯತೆಯ ಅನುಮಾನ ಹುಟ್ಟು ಹಾಕಿದೆ. ಅಕ್ಷಯ್ ಕುಮಾರ್ ಪರ …
Read More »ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿರುವ ಕೊಹ್ಲಿ ಹುಡುಗರು
ಹ್ಯಾಮಿಲ್ಟನ್, ಜ.28- ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿರುವ ಕೊಹ್ಲಿ ಹುಡುಗರು ಇಂದು ಇಲ್ಲಿ ನಡೆಯಲಿರುವ 3ನೆ ಟ್ವೆಂಟಿ-20 ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ಗೆ ಸರಣಿ ಸೋಲನ್ನು ನೀಡಲು ಸಜ್ಜಾಗಿ ನಿಂತಿದೆ. 2020ರ ವರ್ಷದ ಆರಂಭದಿಂದಲೂ ಗೆಲುವಿನ ಸಿಂಚನವನ್ನೇ ಕಂಡಿರುವ ಭಾರತ ತಂಡದ ನಾಯಕ ವೆಸ್ಟ್ಇಂಡೀಸ್, ಆಸ್ಟ್ರೇಲಿಯಾ ವಿರುದ್ಧ ಗೆದ್ದ ನಂತರ ಈಗ ಸ್ವದೇಶದಲ್ಲೇ ನ್ಯೂಜಿಲೆಂಡ್ಗೆ ಸೋಲಿನ ಕಹಿ ಉಣಿಸಲು ಸಜ್ಜಾಗಿದೆ. ಅಕ್ಲೆಂಡ್ನಲ್ಲಿ ನಡೆದ ಎರಡು ಪಂದ್ಯಗಳಲ್ಲೂ ಜಯ …
Read More »ನೇಣು ಕುಣಿಕೆಯಿಂದ ಪಾರಾಗಲು ಕುತಂತ್ರ ಮತ್ತು ಹೊಸ ಕ್ಯಾತೆ
ನವದೆಹಲಿ, ಜ.25- ನೇಣು ಕುಣಿಕೆಯಿಂದ ಪಾರಾಗಲು ಕುತಂತ್ರ ಮತ್ತು ಹೊಸ ಕ್ಯಾತೆಗಳನ್ನು ತೆಗೆಯುತ್ತಿರುವ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹಂತಕರಾದ ದೋಷಿಗಳಿಗೆ ಕಾನೂನು ಸಮರದಲ್ಲಿ ಮತ್ತೆ ಹಿನ್ನಡೆಯಾಗಿದೆ.ತಾವು ಕ್ಷಮಾದಾನ ಮತ್ತು ಕ್ಯುರೇಟಿವ್ (ಪರಿಹಾರಾತ್ಮಕ) ಅರ್ಜಿಗಳನ್ನು ಸಲ್ಲಿಸಲು ತಿಹಾರ್ ಜೈಲಿನ ಪೊಲೀಸ್ ಅಧಿಕಾರಿಗಳು ಸೂಕ್ತ ದಾಖಲೆ ಪತ್ರಗಳನ್ನು ನೀಡುತ್ತಿಲ್ಲ ಎಂದು ದೋಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಇಂದು ಮುಂದಿನ ಯಾವುದೇ ನಿರ್ದೇಶನಗಳಿಗೆ ಆಸ್ಪದವಿಲ್ಲದಂತೆ ಅರ್ಜಿಗಳನ್ನು ವಿಲೇವಾರಿ ಮಾಡಿ ಈ ಕಾನೂನು …
Read More »
Laxmi News 24×7