Breaking News
Home / ಅಂತರಾಷ್ಟ್ರೀಯ (page 29)

ಅಂತರಾಷ್ಟ್ರೀಯ

ಬೆಳಗಾವಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್

ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ-ನಿಪ್ಪಾಣಿ ನಡುವಿನ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ಚಿಕ್ಕೋಡಿಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೂ ಅನುದಾನ ಬಿಡುಗಡೆ ಮಾಡಲಾಗಿದೆ.   ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಬೆಳಗಾವಿ ಜಿಲ್ಲೆಯ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. 32 ಕೋಟಿ ರೂ ವೆಚ್ಚದಲ್ಲಿ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು.   ಹಲವು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ : ಅಶೋಕ ಪಾಟೀಲ…

  ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-45 ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ

  ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.   ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …

Read More »

ಇದೊಂದು ಹೀನ ಕೃತ್ಯ… ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’* *ಬಾಲಚಂದ್ರ ಜಾರಕಿಹೊಳಿ,* *ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ*     *ಮೂಡಲಗಿ ಹಳ್ಳದಲ್ಲಿ …

Read More »

ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್‌ ಜಾರಕಿಹೊಳಿ

    ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …

Read More »

ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು.   ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆ …

Read More »

ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್‌ ಜಾರಕಿಹೊಳಿ

  ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್‌ ಪಾಟೀಲ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …

Read More »

ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು

ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು   ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …

Read More »