Breaking News
Home / ಅಂತರಾಷ್ಟ್ರೀಯ (page 3)

ಅಂತರಾಷ್ಟ್ರೀಯ

ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ….

ಗೋಕಾಕ: ನಗರದ ಮಯೂರ ಶಾಲೆಯಲ್ಲಿ ಆಚರಿಸಲಾದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಆಡಳಿತಾಧಿಕಾರಿ ಎಸ್ ಡಿ ಮುರಗೋಡ ನೆರವೇರಿಸಿದರು. ಮುಖ್ಯೋಪಾಧ್ಯಾಯಿನಿ ಸಿ ಬಿ ಪಾಗದ, ಶಿಕ್ಷಕ ಎನ್ ಕೆ ಮಕಾನದಾರ ಇದ್ದರು.

Read More »

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

*ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ (ಗಿರಿಸಾಗರ) ಗ್ರಾಮದಲ್ಲಿ ಇತ್ತಿಚೆಗೆ ಜೈ ಭವಾನಿ ಕಟ್ಟಡ ಮತ್ತು ಇತರೆ ನಿರ್ಮಾಣದ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರ …

Read More »

ಸಂವಿಧಾನದ ಆಶಯದಂತೆ ಸಹಬಾಳ್ವೆಯಿಂದ ಬದುಕುವಂತಾಗಲಿ: ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ‘ಸರ್ವಜನಾಂಗದ ಶಾಂತಿಯ ತೋಟ’ವೆಂದು ರಾಷ್ಟಕವಿ ಕುವೆಂಪು ಅವರು ಕರ್ನಾಟಕವನ್ನು ವ್ಯಾಖ್ಯಾನಿಸಿದ್ದಾರೆ. ಇಂತಹ ತೋಟದಲ್ಲಿ ನಾವೆಲ್ಲಾ ಸಾಮರಸ್ಯದಿಂದ ಬೆಳೆದುನಿಂತ ಫಲಪುಷ್ಪಗಳು. ಈ ನೆಲದ ಮಣ್ಣಿನ ಗುಣ, ಗಣತಂತ್ರ ವ್ಯವಸ್ಥೆಯ ಮತ್ತು ಸಂವಿಧಾನದ ಮೂಲ ಆಶಯಗಳನ್ನಿಟ್ಟುಕೊಂಡು ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಅವರು ನಗರದಲ್ಲಿ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗಣರಾಜ್ಯ ದಿನವು ದೇಶದ ನಾಗರಿಕರಿಗೆ ತನ್ನ ರಾಷ್ಟ್ರದ …

Read More »

ಬೆಳಗಾವಿ : ಧ್ವಜಾರೋಹಣದ ವೇಳೆ ಎಡವಟ್ಟು ಮಾಡಿಕೊಂಡ ಚಿಕ್ಕೋಡಿ ಉಪ ವಿಭಾಗಾಧಿಕಾರಿ.!

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಧ್ವಜಾರೋಹಣ ವೇಳೆ ಭಾರೀ ಎಡವಟ್ಟು ಮಾಡಿಕೊಂಡಿದ್ದಾರೆ.   ಧ್ವಜಾರೋಹಣ ಕಾರ್ಯಕ್ರಮಕ್ಕೆ ತಡವಾಗಿ ಬಂದಿದ್ದಲ್ಲದೆ, ತರಾತುರಿಯಲ್ಲಿ ಬೂಟು ಕಾಲಿನಲ್ಲೇ ಧ್ವಜಾರೋಹಣ ಮಾಡಿದ್ದಾರೆ. ಅಲ್ಲದೇ ಅಂಬೇಡ್ಕರ್ ಹಾಗೂ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲು ಮುಂದಾಗಿದ್ದಾರೆ.   ಸಿಬ್ಬಂದಿಗಳು ಹೇಳಿದ ಬಳಿಕ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ ಶೂ ಬಿಚ್ಚಿದ್ದಾರೆ. ಶೂವನ್ನ ಸಿಬ್ಬಂದಿಗಳು ಕೈಯಿಂದ ತೆಗೆದು ಬೇರೆಡೆಗೆ ಇಟ್ಟಿದ್ದಾರೆ.   ಮಾಧವ …

Read More »

ವಿದ್ಯಾರ್ಥಿ ನಿಲಯಗಳನ್ನು ಮರು ನಿರ್ಮಾಣಕ್ಕೆ ಅನುದಾನ : ಮುಖ್ಯ ಮಂತ್ರಿಗಳ ಭರವಸೆ

  ಧಾರವಾಡ : ಧಾರವಾಡದ ಮುರುಘಾ ಮಠದ ಅಭಿವೃದ್ಧಿಗಾಗಿ ಈ ವರ್ಷ ಈಗಾಗಲೇ 3 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲ್ಲಿನ ವಿದ್ಯಾರ್ಥಿ ನಿಲಯಗಳನ್ನು ಮರು ನಿರ್ಮಾಣ ಮಾಡಬೇಕಿದೆ. ಅದಕ್ಕೂ ಅಗತ್ಯ ಸಹಾಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಧಾರವಾಡದ ಮುರುಘಾ ಮಠದಲ್ಲಿ ಇಂದು ಶ್ರೀ ಮೃತ್ಯುಂಜಯ- ಮಹಾಂತ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು. ಪಶುಪತಿಹಾಳ ಮಠಕ್ಕೆ ಒಂದು ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನ ಮಾಡಲಾಗಿದೆ ಎಂದರು. ಮಠ …

Read More »

106 ಜನರಿಗೆ ಪದ್ಮ ಪ್ರಶಸ್ತಿ ಪ್ರಕಟ : ರಾಜ್ಯದ 8 ಸಾಧಕರಿಗೆ ಪ್ರಶಸ್ತಿ

ನವದೆಹಲಿ : ದೇಶದ 106 ಜನರಿಗೆ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ 8 ಜನರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಪದ್ಮ ಭೂಷಣ ನೀಡಲಾಗಿದೆ. ಕೊಡಗಿನ ಜಾನಪದ ನರ್ತಕಿ ರಾಣಿ ಮಾಚಯ್ಯ, ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಖಾದರ್ ವಲ್ಲಿ ದೂದೇಕುಲ, ಕಲೆ ವಿಭಾಗದಲ್ಲಿ ತಮಟೆಯ …

Read More »

ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರ ಎಲ್ಲ ಸೌಲಭ್ಯ ಒದಗಿಸಲಿ: ಯುವ ನಾಯಕ ರಾಹುಲ್ ಜಾರಕಿಹೊಳಿ

ಬೆಳಗಾವಿ : ಬೀದಿಬದಿ ವ್ಯಾಪಾರಿಗಳು ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ರಸ್ತೆ ಬದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಾರೆ, ಅವರ ಆರೋಗ್ಯ, ಬದುಕು, ಭವಿಷ್ಯದ ಬಗ್ಗೆ ಸರ್ಕಾರ ವಿಚಾರ ಮಾಡಿ ಸೌಲಭ್ಯ ಒದಗಿಸಬೇಕು, ಮೊದಲಿನಿಂದಲೂ ನಮ್ಮ ತಂದೆಯವರು, ಬಡವರ ಶೋಷಿತರ ಪರವಾಗಿ ನಿಂತವರು, ನಮ್ಮ ಕುಟುಂಬ ಹಾಗೂ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರು ಶ್ರಮಿಕ ಬೀದಿಬದಿ ವ್ಯಾಪಾರಿಗಳ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದಲ್ಲಿ …

Read More »

ಗೋಕಾಕ : ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸುತ್ತಿರುವ ಗಣ್ಯರು.

ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ …

Read More »

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ*

  *ಮೂಡಲಗಿ*: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ ಕವಿ, ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಬಾಂಧವರು ಈ ಸಮುದಾಯ …

Read More »

ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!

ಗೋಕಾಕ :  ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ.   ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.   ಗೋಕಾಕ ಗ್ರಾಮೀಣ ಪೊಲೀಸ್ …

Read More »