Breaking News
Home / ಅಂತರಾಷ್ಟ್ರೀಯ (page 39)

ಅಂತರಾಷ್ಟ್ರೀಯ

ಕಾಂಗ್ರೆಸ್​ ಹೈಕಮಾಂಡ್​​ನಿಂದ ಬಿಗ್​ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್‌ ಅವರ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್‌ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್‌ ಸಿಂಗ್‌ ರಾಠೋಡ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್‌ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …

Read More »

‘ಕೇಸರಿ’ ಮನೆಯಲ್ಲಿ ಮುಂದುವರಿದ ಉಸ್ತುವಾರಿ ಫೈಟ್ -ಕೊನೆಗೂ ಮೌನ ಮುರಿದ ಆರ್​​.ಅಶೋಕ್

ಬೆಂಗಳೂರು: ಜಿಲ್ಲಾ ಉಸ್ತುವಾರಿ ಪಟ್ಟಿ ಕೇಸರಿ ಮನೆಯಲ್ಲಿ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ. ಲಿಸ್ಟ್ ರಿಲೀಸ್‌ ಆಗಿ ಮೂರು ದಿನ ಕಳೆದ್ರೂ ಸಂಪುಟ ಸಹೋದ್ಯೋಗಿಗಳ ಬೇಸರ ಮಾತ್ರ ಕಡಿಮೆಯಾಗಿಲ್ಲ. ಕೆಲವರು ಪರೋಕ್ಷವಾಗೇ ತಮ್ಮ ಇಂಗಿತ ಹೊರಹಾಕ್ತಿದ್ರೆ, ಇನ್ನೂ ಕೆಲವರು ಬೇಸರವನ್ನ ನುಂಗಿಕೊಂಡು ಕೊಟ್ಟಿರೋ ಜಿಲ್ಲೆಯಲ್ಲಿ ಕೆಲಸವನ್ನ ಆರಂಭಿಸಿದ್ದಾರೆ. ಉಸ್ತುವಾರಿ ಬಗ್ಗೆ ಕೊನೆಗೂ ಮಾತನಾಡಿದ ‘ಸಾಮ್ರಾಟ್’ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಿಸಲಾಗಿದ್ದು, ಕೆಲ ಜಿಲ್ಲೆಗಳಲ್ಲಿ ಕೇಸರಿ ಹೈ ಕಮಾಂಡ್ ಅದಲು-ಬದಲು …

Read More »

ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್‌ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ

ಸವದತ್ತಿ: ಪೊಲೀಸ್ ಅರ್ಥ ರಕ್ಷಕ ಮತ್ತು ಕಾನೂನು ಪಾಲಕ. ಇವೆರಡರ ಜೊತೆಗೂ ಇಲ್ಲೊಂದು ಸಮಾಜಮುಖಿ ಕಾರ್ಯ ನಡೆದಿದೆ. ಸವದತ್ತಿ ಠಾಣೆಯ ಪೊಲೀಸ್ ಅಧಿಕಾರಿ ಕಾನೂನು ಪಾಲನೆ ಜೊತೆಗೆ ಸಂಗೀತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಾವೂ ಸಹ ಮುಂದಿದ್ದೇವೆಂದು ನಿಖರವಾಗಿ ತೋರಿಸಿ ಸಾರ್ವಜನಿಕ ವಲಯದಲ್ಲಿ ಅತೀವ ಪ್ರಂಶಸೆಗೆ ಪಾತ್ರರಾಗಿದ್ದಾರೆ. ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್‌ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಬೆತ್ತದ ಜೊತೆಗೆ …

Read More »

ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಸರ್ವೋತ್ತಮ ಜಾರಕಿಹೊಳಿ

ಕಕಮರಿ (ಬೆಳಗಾವಿ ಜಿಲ್ಲೆ): ‘ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಹೈನುಗಾರಿಕೆ ಮಾಡಬೇಕು. ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದು ಸವಲತ್ತುಗಳನ್ನು ಗಳಿಸಿಕೊಂಡು ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಬೇಕು’ ಎಂದು ಗೋಕಾಕದ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಸಲಹೆ ನೀಡಿದರು. ಗ್ರಾಮದ ರಾಯಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.   ‘ಹಾಲು ಉತ್ಪಾದಕರ ಸಂಘದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದನ್ನು …

Read More »

ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.

ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು.   ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.

Read More »

ಭೂಮಿಯ ಮೇಲೆ ಸಂಗೊಳ್ಳಿ ರಾಯಣ್ಣನ ಹೆಸರನ್ನು ಶಾಶ್ವತವಾಗಿಸಲು ಸರಕಾರ ಕ್ರಮ-ಸಚಿವ ಗೋವಿಂದ ಕಾರಜೋಳ್

ಬೆಳಗಾವಿ ನಗರದಲ್ಲಿ ಸಂಗೊಳ್ಳಿ ರಾಯಣ್ಣನ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ನಗರದಲ್ಲಿ ಜನೇವರಿ 26 ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತಿ ಪ್ರಯುಕ್ತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಬಸವರಾಜ ಕಟ್ಟಿಮನಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ್ ಕಾರಜೋಳ್ ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಾಡಿನಾದ್ಯಂತ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನವನ್ನು ಆಚರಿಸುತ್ತಿದ್ದೇವ. ರಾಯಣ್ಣ ದೇಶಕ್ಕಾಗಿ, ಹಾಗೂ …

Read More »

ಬೆಳಗಾವಿ ಪಾಲಿಕೆ: ಮೇಯರ್-ಸಾಮಾನ್ಯ ಮಹಿಳೆ, ಉಪಮೇಯರ್-ಹಿಂದುಳಿಗ ವರ್ಗ ಬ ಮಹಿಳೆ, ಮೀಸಲಾತಿ ಪ್ರಕಟ

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಮೀಸಲಾತಿ ಘೋಷಣೆ ಆಗಿದೆ:ಮೇಯರ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರೆ, ಉಪಮೇಯರ್ ಸ್ಥಾನ ಹಿಂದುಳಿಗ ವರ್ಗ ಬ ಮಹಿಳೆಗೆ ಮೀಸಲಾಗಿದ್ದು. ಪಾಲಿಕೆ ಚುನಾವಣೆ ಮುಗಿದ ಹಲವು ತಿಂಗಳು ಕಳೆದರೂ ಮೇಯರ್, ಉಪಮೇಯರ್ ಆಯ್ಕೆಗೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಇದೀಗ ಮೀಸಲಾತಿ ಘೋಷಣೆ ಆಗಿದ್ದು. ಬಿಜೆಪಿಯಲ್ಲಿಯೇ ಯಾರಿಗೆ ಮೇಯರ್, ಉಪಮೇಯರ್ ಭಾಗ್ಯ ಸಿಗುತ್ತದೆ ಎಂದು ಕಾದು ನೋಡಬೇಕಿದೆ.

Read More »

ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್

ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …

Read More »

ಕೊವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ತಯಾರಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ದೆಹಲಿ : ಭಾರತವೂ ಕೂಡ ಲಸಿಕೆ ತಯಾರಿಕೆಯಲ್ಲಿ ಹಿಂದೆ ಬೀಳಲಿಲ್ಲ. ಅಸಲಿಗೆ ಭಾರತವೇ ಲಸಿಕೆ ತಯಾರಿಕೆಯ ವೇಗ ಹೆಚ್ಚಿಸಿ ಅಪಾರ ಪ್ರಮಾಣದ ಲಸಿಕೆ ಪೂರೈಕೆ ಮಾಡಿತು. ಭಾರತದ ಜನರಿಗೆ ಮಾತ್ರವಲ್ಲದೆ ಇತರ ಕೆಲವು ದೇಶಗಳಿಗೆ ಕೂಡ ಭಾರತದಿಂದ ಲಸಿಕೆ ರಫ್ತಾಯಿತು. ಈ ಲಸಿಕಾ ಅಭಿಯಾನದಲ್ಲಿ ಮುಖ್ಯವಾಗಿ ಕೆಲಸ ಮಾಡಿದ ಎರಡು ಭಾರತೀಯ ಸಂಸ್ಥೆಗಳು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಹಾಗೂ ಪುಣೆ ಮೂಲದ ಸೆರಂ ಇನ್​ಸ್ಟಿಟ್ಯೂಟ್. ಇದೀಗ ಆ ಎರಡೂ …

Read More »

ಗಣರಾಜ್ಯೋತ್ಸವಕ್ಕೆ ವಿಶೇಷ ಡೂಡಲ್​ ರಚಿಸಿ ಶುಭ ಕೋರಿದ ಗೂಗಲ್​

ಈ ಬಾರಿ ಗಣರಾಜ್ಯೋತ್ಸವಕ್ಕೂ ಕೊರೋನಾ ಕರಿನೆರಳು ಆವರಿಸಿದೆ. ಹೆಚ್ಚು ಜನರು ಸೇರುವಂತಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆಗೂ ಬ್ರೇಕ್​ ಬಿದ್ದಿದೆ. ಈ ನಡುವೆ ದೆಹಲಿ ರಾಜಪಥನ್​ನಿಂದ ನ್ಯಾಷನಲ್​ ಸ್ಟೇಡಿಯಂವರೆಗೆ ಮೆರವಣಿಗೆ ನಡೆಯಲಿದೆ. ವಿವಿಧ ರಾಜ್ಯಗಳ ಜಾನಪದ ಕಲಾ ಪ್ರದರ್ಶನ ಜತೆಗೆ ಬಾನಂಗಳದಲ್ಲಿ ವಿಮಾನಗಳ ಹಾರಾಟ ನಡೆಯಲಿದೆ. ಇನ್ನು ಕೊರೋನಾ ಕಾರಣದಿಂದ ದೆಹಲಿಯಲ್ಲೂ ಕಟ್ಟೆಚ್ಚರವಹಿಸಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಎರಡೂ ಡೋಸ್​ ವ್ಯಾಕ್ಸಿನೇಷನ್​ ಕಡ್ಡಾಯಗೊಳಿಸಲಾಗಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪ್ರವೇಷವನ್ನು ನಿಷೇಧಿಸಲಾಗಿದೆ. ಹೀಗಾಗಿ …

Read More »