ಈಗಾಗಲೇ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ …
Read More »ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ
ಬೆಳಗಾವಿ: ಕಾಂಗ್ರೆಸ್ ಪ್ರತಿಭಟನೆಗೂ ಮೊದಲೇ ಸರ್ಕಾರ ಬೆದರಿತಾ ಎಂಬ ಪ್ರಶ್ನೆಯೊಂದು ಎದ್ದಿದೆ. ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕರೋನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಿಸಿದೆ. ವೀಕೆಂಡ್ ಕರ್ಫ್ಯೂ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಾಸ್ಕ್ ಹಾಕದೇ …
Read More »ಕಳ್ಳ ಸಹೋದರರ ಸೆರೆ: ಐದು ಬೈಕ್ ಜಪ್ತಿ
ಕಲಬುರಗಿ: ನಗರದಲ್ಲಿ ಹಾಡು ಹಗಲೇ ಬೈಕ್ಗಳ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಸಹೋದರರನ್ನು ಉತ್ತರ ಉಪವಿಭಾಗದ ಚೌಕ್ ಠಾಣೆ ಪೊಲೀಸರು ಬಂಧಿಸಿ, 3.5 ಲಕ್ಷ ರೂ. ಮೌಲ್ಯದ ಐದು ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಕಾಳಗಿ ತಾಲೂಕಿನ ಕೊರವಾರ ಗ್ರಾಮದ ವಿಕಾಸ ಹೊಸಮನಿ, ರಾಮಚಂದ್ರ ಹೊಸಮನಿ ಬಂಧಿತ ಸಹೋದರರು. ಬುಧವಾರ ಬೆಳಗ್ಗೆ ತಾಜ್ ಸುಲ್ತಾಪುರ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ತೆರಳುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಈ ಕಳ್ಳರು …
Read More »ಬೆಳಗಾವಿ: ಕಣಕುಂಬಿಯಲ್ಲಿ ಮರಕ್ಕೆ ಅಪ್ಪಿಳಿಸದ ಕಾರು: ಸ್ಥಳದಲ್ಲೇ ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ
ಬೆಳಗಾವಿ: ಚಾಲಕನ ನಿಯಂತ್ರಣ ಕೈ ತಪ್ಪಿ ಕಾರೊಂದು ಮರಕ್ಕೆ ಅಪ್ಪಳಿಸಿದ ಪರಿಣಾಮ ಮಹಿಳೋರ್ವಳು ಸ್ಥಳದಲ್ಲೇ ಅಸುನೀಗಿರುವ ಘಟನೆ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಗುಲಾಬಿ ಪಾಂಡುರಂಗ ಗವಸ್( 38) ಮೃತ ಮಹಿಳೆ. ಸಂಬಂಧಿಕರ ಮನೆಯಲ್ಲಿಕಾರ್ಯಕ್ರಮ ಮುಗಿಸಿಕೊಂಡು ಬೆಳಗಾವಿ ಆಗಮಿಸುವ ವೇಳೆಯಲ್ಲಿ ಕಣಕುಂಬಿ ಪ್ರವಾಸಿ ಮಂದಿರದ ಬಳಿಯ ಈ ಅವಘಡ ಸಂಭವಿಸಿದೆ. ಕಾರನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಬೃಹತ್ ತಿರುವಿನಲ್ಲಿ ಚಾಲಕನ …
Read More »ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ.. ಅಪಾರ ವನಸಂಪತ್ತು ನಾಶ
ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವನಸಂಪತ್ತು ನಾಶವಾಗಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಸುಮಾರು 2 ಕಿ.ಮೀ ವಾಪ್ತಿವರೆಗೂ ಬೆಂಕಿ ಆವರಿಸಿದೆ. ಇನ್ನು, ನವಿಲು, ಚಿರತೆ, ಜಿಂಕೆಗಳು ಸೇರಿದಂತೆ ಅನೇಕ ಪ್ರಾಣಿಗಳು ಅಗ್ನಿಗೆ ಆಹುತಿಯಾಗಿವೆ ಅಂತಾ ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
Read More »ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆ
ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಜಮೀನಿಗೆ ಆಕಳು ಮೇಯಿಸಲು ಬಿಟ್ಟಿದ್ದಿಯಾ ಎಂದು ಜಗಳ ತೆಗೆದು ಶ್ರೀಕಾಂತ ಕಟಾಬಳಿ ಎನ್ನುವ ಯುವಕನ ಮೇಲೆ ಲಕ್ಷ್ಮಣ್ ದಡ್ಡಿ, ಲಕ್ಷ್ಮಣ್ ಪುತ್ರ ಸಚಿನ್ ಹಾಗೂ ರಂಜಿತ್ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಶ್ರೀಕಾಂತ ಕಟಾಬಳಿ ತಲೆಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಡ್ಡಿ …
Read More »ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ
ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ಚುನಾವಣೆ ಮುಗಿದು, ನೂತನ ಸದಸ್ಯರು ಚುನಾಯಿತರಾಗಿ ಬರೋಬ್ಬರಿ ಐದು ತಿಂಗಳುಗಳೇ ಕಳದಿದ್ದರೂ ಅವರಿಗೆ ಅಧಿಕಾರದ ಭಾಗ್ಯ ಸಿಕ್ಕಿಲ್ಲ. ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ ಮುಂದುವರಿದಿದೆ. ಮಹಾನಗರಪಾಲಿಕೆ ಚುನಾವಣೆ ಮತದಾನ ಸೆ.3ರಂದು ನಡೆದಿತ್ತು. .6ರಂದು ಫಲಿತಾಂಶ ಪ್ರಕಟವಾಗಿತ್ತು. ಆಗಿನಿಂದಲೂ ಸದಸ್ಯರು ಪ್ರಮಾಣವಚನ ಸ್ವೀಕರಿಸುವ ಪ್ರಕ್ರಿಯೆಯೇ ನಡೆಯದಿರುವುದು ಅವರು ಅಧಿಕೃತವಾಗಿ ಅಧಿಕಾರ ಚಲಾಯಿಸುವುದಕ್ಕೆ ಅಡ್ಡಿಯಾಗಿ ಪರಿಣಮಿಸಿದೆ. ವಾರ್ಡ್ಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಚುರುಕುಗೊಳಿಸುವುದಕ್ಕೆ ಅವರಿಂದ ಸಾಧ್ಯವಾಗಿಲ್ಲ. ಈಚೆಗೆ ವಾಲ್ವ್ಮನ್ಗಳ ಮುಷ್ಕರದಿಂದ …
Read More »ಬೆಳಗಾವಿಯಲ್ಲಿ ಚುಚ್ಚುಮದ್ದು ಪಡೆದ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ.
ಬೆಳಗಾವಿ: ಚುಚ್ಚುಮದ್ದು ಪಡೆದು ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖಾ ವರದಿಯನ್ನು ಸಿಎಂಗೆ ಕಳುಹಿಸಿ ಕೊಟ್ಟಿದ್ದೇವೆ. ಜಿಲ್ಲಾ ಲಸಿಕಾಕರಣ ಅನುಷ್ಠಾನ ಅಧಿಕಾರಿ ಡಾ.ಈಶ್ವರ್ ಗಡಾದ್ ಪರಿಶೀಲನೆ ನಡೆಸಿ, ವರದಿ ಕೊಟ್ಟಿದ್ದಾರೆ. ಟೆಕ್ನಿಕಲ್ ವರದಿ ಇರುವ ಕಾರಣ ಅದರಲ್ಲಿರುವ …
Read More »ಫ್ಯಾನ್ಸ್ಗೆ ನಟ ದುನಿಯಾ ವಿಜಯ್ ಭಾವುಕ ಮನವಿ
ಸ್ಯಾಂಡಲ್ವುಡ್ ನಟ ದುನಿಯಾ ವಿಜಿ ನಾಳೆ ತಮ್ಮ 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸುವುದಿಲ್ಲ ಅಂತ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. “ಅಭಿಮಾನಿಗಳಿಗೆ ನಮಸ್ಕಾರ. ಇಡಿ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂತಹ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರ. ಇಂತಹ ಹೊತ್ತಿನಲ್ಲಿ ನನ್ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನು ಸಹ ನಿಮ್ಮನ್ನೆಲ್ಲ …
Read More »ಬೊಮ್ಮಾಯಿ ಸರ್ಕಾರದಲ್ಲಿ ಮಂತ್ರಿಗಿರಿಗಾಗಿ ಚೌಕಾಸಿ.. ಸಿಎಂ ಬೊಮ್ಮಾಯಿಗೆ ವಲಸಿಗರದ್ದೇ ತಲೆನೋವು
ಬೆಂಗಳೂರು: ಸಂಕ್ರಾಂತಿ ಬಳಿಕ ಬೊಮ್ಮಾಯಿ ಕ್ಯಾಬಿನೆಟ್ಗೆ ಸರ್ಜರಿ ನಡೆಯುತ್ತೆ ಅನ್ನೋ ಚರ್ಚೆ ಬಿಜೆಪಿ ಪಾಳಯದಲ್ಲಿ ಜೋರಾಗೇ ನಡೀತಿದೆ. ಇದ್ರ ಬೆನ್ನಲ್ಲೇ ಬೆಳಗಾವಿಯ ವಲಸಿಗ ಶಾಸಕರು ಸಚಿವ ಸ್ಥಾನಕ್ಕಾಗಿ ಈ ಬಾರಿ ಜೋರಾಗೇ ಲಾಬಿ ನಡೆಸ್ತಿದ್ದಾರೆ. ಬಿಜೆಪಿ ವರಿಷ್ಠರು ಮಾತ್ರವಲ್ಲದೆ ಸಂಘದ ನಾಯಕರ ಬಳಿಯೂ ಮಂತ್ರಿಗಿರಿಗಾಗಿ ಚೌಕಾಸಿ ನಡೆಸ್ತಿದ್ದಾರೆ. ಸಂಕ್ರಾಂತಿ ಮುಗೀತು.. ಇನ್ನೇನಿದ್ರೂ ಬೊಮ್ಮಾಯಿ ಸರ್ಕಾರದಲ್ಲಿ ಬದಲಾವಣೆಯ ಸಂಕ್ರಮಣ ಶುರುವಾಗಬೇಕಷ್ಟೇ. ಸದ್ಯ ಸರ್ಕಾರದಲ್ಲಿ ನಡೀತಿರೋದು ಎಲೆಕ್ಷನ್ ಕ್ಯಾಬಿನೆಟ್ ರಚನೆಯ ತಯಾರಿ. …
Read More »
Laxmi News 24×7