ಗೋಕಾಕ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ೭೧ನೇಯ ಜನ್ಮದಿನದ ಅಂಗವಾಗಿ ಗೋಕಾಕ ಬಿಜೆಪಿ ವತಿಯಿಂದ ಶಾಸಕ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಶಾಸಕರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ ಸಿಹಿ ಹಂಚಿ ಸರಳವಾಗಿ ಆಚರಿಸಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು. …
Read More »ಇಲ್ಲಿನ ಎಲ್ಲ ವಿದ್ಯಾರ್ಥಿಗಳು 20 ಕಿ.ಮೀ. ದೂರ ಪ್ರಯಾಣ ಮಾಡಿದರಷ್ಟೇ ಶಾಲಾ ಕಾಲೇಜು ಗಳಿಗೆ ತಲುಪಲು ಸಾಧ್ಯ.
ಗೋಕಾಕ: ಸಾರಿಗೆ ಸಂಸ್ಥೆ ಬಸ್ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗೆ ಸಮಯಕ್ಕೆ ಸರಿಯಾಗಿ ತಲುಪಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕೋವಿಡ್ ಮಾರ್ಗಸೂಚಿ ತೆರವಾದ ನಂತರ ಗ್ರಾಮೀಣ ಪ್ರದೇಶದಲ್ಲಿ ಬಸ್ಗಳ ಸೇವೆ ಅಪರೂಪವಾಗಿದೆ. ಮುಖ್ಯ ರಸ್ತೆಗಳು ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಕಡೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಬಸ್ ಸೇವೆ ಆರಂಭಗೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳು ಬಸ್ಗಳಿಗಾಗಿ ರಸ್ತೆ ಬದಿಯಲ್ಲಿ ಕಾದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಗೋಕಾಕ …
Read More »ಕ್ಷೀರಭಾಗ್ಯ ಯೋಜನೆ ಹಾಲಿನಪುಡಿ ಅಕ್ರಮ ಸಾಗಾಟ, ಗ್ರಾಮಸ್ಥರಿಂದ ಓರ್ವನ ಸೆರೆ..
ಆಂಕರ್: ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ …
Read More »– ಹೊಸೂರು ರಸ್ತೆಯಲ್ಲಿ ಲಾರಿಗೆ ಆಂಬುಲೆನ್ಸ್ ಡಿಕ್ಕಿ; ಮೂವರು ಸಾವು, ನಾಲ್ವರಿಗೆ ಗಂಭೀರ ಗಾಯ
– ಮುಂಬೈನ ಕಲ್ಯಾಣ್ನಿಂದ ಚೆನ್ನೈಗೆ ಹೋಗುತ್ತಿದ್ದ ಆಂಬುಲೆನ್ಸ್ವೊಂದು ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾಗಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ನಾಲ್ವರ ಸ್ಥಿತಿ ಗಂಭೀರವಿದೆ. ಆನೇಕಲ್: ಕಳೆದೊಂದು ತಿಂಗಳಿನಿಂದ ಎಲ್ಲಿ ನೋಡಿದರೂ ಅಪಘಾತಗಳದ್ದೇ ಸುದ್ದಿ. ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ಯಮರಾಜ ಬೇಟೆಗೆ ನಿಂತಿರುವಂತಿದೆ. ಮೊನ್ನೆಯಷ್ಟೇ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓರ್ ಮೇಲೆ ಆದ ಅಪಘಾತದಿಂದ ಜನ ಹೊರ ಬಂದಿಲ್ಲ, ಅಷ್ಟರಲ್ಲೇ ಇಂದು ಗುರುವಾರ ಬೆಳಿಗ್ಗೆ ನಡೆದ ಭೀಕರ …
Read More »ಮನೆಯಲ್ಲಿಯೇ ಡ್ರಗ್ಸ್ ತಯಾರಿ, ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು – ಸಿಸಿಬಿ ಬಲೆಗೆ ಬಿದ್ದ ನೈಜೀರಿಯಾ ಪ್ರಜೆ
ಬೆಂಗಳೂರು:ಮನೆಯಲ್ಲಿಯೇ ಡ್ರಗ್ಸ್ (ಮಾದಕವಸ್ತು) ತಯಾರಿ ಮಾಡಿ ನ್ಯೂಜಿಲೆಂಡ್ ಸೇರಿ ವಿದೇಶಗಳಿಗೆ ಸರಬರಾಜು ಮಾಡುತ್ತಿದ್ದ ಜಾಲವೊಂದನ್ನು ಬಯಲಿಗೆಳೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಜಾಲದಲ್ಲಿ ಭಾಗಿಯಾಗಿದ್ದ ನೈಜೀರಿಯಾ ಮೂಲದ ಡೇವಿಡ್ ಜೊಹೊ ಮಲ್ವೆ ಎಂಬಾತನನ್ನು ಬಂಧಿಸಿರುವ ಸಿಸಿಬಿ ಮಾದಕವಸ್ತು ನಿಗ್ರಹ ಘಟಕ ಆರೋಪಿ ಬಳಿಯಿಂದ ಐದು ಕೋಟಿ ರೂ. ಮೌಲ್ಯದ ಕ್ರಿಸ್ಟೆಲ್, ಎಂಡಿಎಂಎ ಡ್ರಗ್ಸ್, ಹಾಗೂ ಈ ಡ್ರಗ್ಸ್ ತಯಾರಿಕೆಗೆ ಬಳಸಲಾಗುತ್ತಿದ್ದ ರಸಾಯನಿಕ ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ಜಪ್ತಿ …
Read More »ಡೇಟಿಂಗ್ ಆ್ಯಪ್ ಸುಂದರಿ ಬೀಸಿದ ಮೋಹಕ ಬಲೆಗೆ ಬಿದ್ದ ಚಾಲಕ- ಹಣ ಕಳೆದುಕೊಂಡು ಕಕ್ಕಾಬಿಕ್ಕಿ!
ಬೆಂಗಳೂರು: ಡೇಟಿಂಗ್ ವೆಬ್ ಸೈಟ್ ನಲ್ಲಿ ಪರಿಯಚಯವಾದ ಯುವತಿಯೊಬ್ಬಳನ್ನು ನಂಬಿ ಚಾಲಕನೊಬ್ಬ ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುಂದರಿ ಬೀಸಿದ ಮೋಹದ ಬಲೆಗೆ ಬಿದ್ದ ಚಾಲಕ ಆಕೆ ಹೇಳಿದ ಬಣ್ಣದ ಮಾತುಗಳನ್ನು ನಂಬಿದ್ದಾನೆ. ಅಷ್ಟೇ ಅಲ್ಲದೆ ಆಕೆಯ ಸನಿಹ ಸೇರಲು ಹರಸಾಹಸಪಟ್ಟು ಆಕೆ ಹೇಳಿದಂತೆ ಹಣ ನೀಡಿ ಕಳೆದುಕೊಂಡು ಇದೀಗ ಆಕೆ ಹೇಳಿದ ಜೀವ ಬೆದರಿಕೆ ಕೇಳಿ ಕಕ್ಕಾಬಿಕ್ಕಿಯಾಗಿದ್ದಾನೆ. ಯಲಹಂಕ ಉಪನಗರದ ನಿವಾಸಿ ಮನೋಹರ್ (ಹೆಸರು ಬದಲಿಸಲಾಗಿದೆ) ವೃತ್ತಿಯಲ್ಲಿ …
Read More »ಗೋಕಾಕ ತಾಲೂಕಿಗೆ 20 ಸಾವಿರ ಲಸಿಕೆ ಗುರಿ
ಗೋಕಾಕ: ರಾಜ್ಯ ಸರಕಾರಹಮ್ಮಿಕೊಂಡಿರುವ ಬೃಹತ್ ಹ ಅಭಿಯಾನದ ಪ್ರಯುಕ್ತ ತಾಲೂಕಿನಲ್ಲಿ ಸುಮಾರು 20 ಸಾವಿರ ಲಸಿಕೆ ಡ ಗಗುದಸದೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರಿತೆಗೆದು ತಾಲೂಕಿನಲ್ಲಿ 105) ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಪ್ರತಿ ಕೇಂದಕ್ಕೆ ನುರಿತ ವೈದ್ಯಕೀಯ, ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನ ಮನೆ ಭೇಟಿ Fಡಿ ಅರ್ಹ ವ್ಯಕ್ತಿಗಳನ್ನು ಕರೆತಂದು ಲಸಿಕೆ ಪಡೆಯಲು ಪೂರಕವಾಗಿ ಕಾರ್ಯ ನಿರ್ವಹಿಸಲಿದ್ದಾರೆ. …
Read More »ಬೆಳಗಾವಿಯ 46 ಅನಧಿಕೃತ ಧಾರ್ಮಿಕ ಕಟ್ಟಡಗಳ ಗುರುತು, ಶೀಘ್ರವೇ ತೆರವು ಎಂದ ಬೆಳಗಾವಿ ಡಿಸಿ….!
ಬೆಳಗಾವಿ: ಅನಧಿಕೃತ ಧಾರ್ಮಿಕ ಕೇಂದ್ರಗಳ ಕಟ್ಟಡ ತೆರವಿಗೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲಾಗಿದೆ. ಶೀಘ್ರವೇ ಈ ಎಲ್ಲವನ್ನೂ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಈ ಎಲ್ಲ 46 ಧಾರ್ಮಿಕ ಕೇಂದ್ರ ಕಟ್ಟಡಗಳು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿವೆ. ಈಗಾಗಲೇ ಒಟ್ಟು 17 ಅನಧಿಕೃತ ಧಾರ್ಮಿಕ ಕೇಂದ್ರದ ಕಟ್ಟಡಗಳ ತೆರವು ಮಾಡಲಾಗಿದೆ. ಇನ್ನುಳಿದ 29 ಅನಧಿಕೃತ ಧಾರ್ಮಿಕ ಕೇಂದ್ರ …
Read More »ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್ಐ ಅಮ್ಮಿನಭಾವಿಯನ್ನು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ
ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್ಐ ಅಮ್ಮಿನಭಾವಿ ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …
Read More »ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ
ಬೆಂಗಳೂರು: ಸೆಪ್ಟೆಂಬರ್ 14ರಂದು ದೇಶಾದ್ಯಂತ ಹಿಂದಿ ದಿವಸ್(Hindi Diwas) ಆಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಟ್ವಿಟರ್ನಲ್ಲಿ ದೇಶದ ಜನತೆಗೆ ಹಿಂದಿ ದಿನದ ಶುಭಾಶಯ ಕೋರಿದ್ದಾರೆ. ಆದ್ರೆ ಹಿಂದಿ ದಿವಸ್ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶ ಖಂಡಿಸಿ ಕರ್ನಾಟಕ …
Read More »
Laxmi News 24×7