Breaking News

ಅಂತರಾಷ್ಟ್ರೀಯ

ಸತೀಶ್ ಜಾರಕಿಹೊಳಿಯವರು ಬಿ ಜೆ ಪಿಗೆ ಕೆಂಡ ಕಾರಿದರು….

ಗೋಕಾಕ : ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಸ್ಪಂಧಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಗುಡುಗಿದರು.   ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಧಿವೇಶನ ನಡೆಸುವ ಇಚ್ಛಾಶಕ್ತಿ ಇಲ್ಲ. ಆದ ಕಾರಣ ಅಧಿವೇಶನ ನಡೆಸಲು ಹಿಂದೇಟು ಹಾಕುತ್ತಿದ್ದಾರೆ. ಈ ಭಾಗದ ಜನರ ಸಮಸ್ಯೆಗಳನ್ನು ಬಗೆ ಹರಿಸುವ ಮೂಲಕ, …

Read More »

ಯುವಕ ಮಂಡಳಗಳಿಗೆ ಕ್ರೀಡಾ ಸಾಮಗ್ರಿ ವಿತರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ

    ಗೋಕಾಕ : ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳ ಯುವಕ ಮಂಡಳಗಳಿಗೆ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನೀಡಿದ ಕ್ರೀಡಾ ಸಾಮಗ್ರಿಗಳನ್ನು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಇಂದು ವಿತರಿಸಿದರು.   ಹುಕ್ಕೇರಿ ತಾಲ್ಲೂಕಿನ ಬಗರನಾಳ ಗ್ರಾಮದ ಗಜಾನನ ಯುವ ಮಂಡಳ, ಶಹಾಬಂದರದ ಮೆಹಬೂಬ ಸುಬಾನಿ ಯುವಕ ಮಂಡಳ, ಬೆಳಗಾವಿ ತಾಲ್ಲೂಕಿನ ಮುಚ್ಚಂಡಿ ಗ್ರಾಮದ ಅಮರಜ್ಯೋತಿ ಯುವಕ ಮಂಡಳಕ್ಕೆ ಕ್ರೀಡಾ ಸಾಮಗ್ರಿಗಳನ್ನು …

Read More »

50ಕ್ರೀಡಾ ಪಟುಗಳಿಗೆ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಅಮರನಾಥ ಜಾರಕಿಹೊಳಿ ವಿತರಿಸಿದರು.

ಗೋಕಾಕ: ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಇಂದು ( ಸೋಮವಾರ) ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯಿಂದ SCP /TSP ಯೋಜನೆ ಅಡಿಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಭಾಗವಹಿಸಿದ 50ಕ್ರೀಡಾ ಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್ ಗಳನ್ನು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ವಿತರಿಸಿದರು.     ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಟಿ , ಆರ್ ಕಾಗಲ …

Read More »

ಬೆಳಗಾವಿ ಉಪಚುನಾವಣೆಗೆ 13.54 ಕೋಟಿ ರು. ಖರ್ಚು

ಬೆಳಗಾವಿ (ಜು.05): ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸರ್ಕಾರದಿಂದ 13.54 ಕೋಟಿ ರು. ಖರ್ಚು ಆಗಿರುವುದು ಮಾಹಿತಿ ಹಕ್ಕಿನಿಂದ ಬಹಿರಂಗಗೊಂಡಿದೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಅವರು ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಅಧಿಕಾರಿಗಳು ನೀರಿನಂತೆ ಪೋಲು ಮಾಡಿದ್ದಾರೆ ಎಂದು ಆರೋಪಿಸಿದರು. ಯಾವುದೇ ಜನಪ್ರತಿನಿಧಿ ಅವಧಿಗೆ ಮುನ್ನ ಪಕ್ಷಾಂತರ ಮಾಡುವ, ರಾಜೀನಾಮೆ ನೀಡಿದ ಮೇಲೆ …

Read More »

ಬೆಳಗಾವಿ : ದಾಂಪತ್ಯ ಜೀವಕ್ಕೆ ಕಾಲಿಟ್ಟ ಅಂಧ ಜೋಡಿ

ಬೆಳಗಾವಿ : ದೇವರ ಶಾಪಕ್ಕೆ ಗುರಿಯಾಗಿ ಹುಟ್ಟಿನಿಂದ ಅಂಧತ್ವದಲ್ಲೇ ಬದುಕು ಕಳೆಯುತ್ತಿದ್ದ ಅಂಧರಿಬ್ಬರು ಕೊರೊನಾ ನಿಯಮಾವಳಿಯಂತೆ ಸರಳ ಮದುವೆ ಮಾಡಿಕೊಂಡರು. ಇಲ್ಲಿನ ಹನುಮಾನ ನಗರದ ಭಕ್ತಿವಾಸ ಸಾಂಸ್ಕೃತಿಕ ಭವನದ ಕಾರ್ಯಾಲಯದಲ್ಲಿ ಉಷಾ ತಾಯಿ ಪೋತದಾರ್ ಫೌಂಡೇಶನ್‍ನ ಆಶ್ರಯದಲ್ಲಿ ಬೆಳಗಾವಿಯ ದೀಪಾ ಹಾಗೂ ಬೆಂಗಳೂರಿನ ರವಿ ಅಂಧ ಜೋಡಿಯ ಮಂಗಲ ಕಾರ್ಯ ನೆರವೇರಿತು. ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬೆಳಗಾವಿಯ ಉಷಾ ಪೋತದಾರ್ ಫೌಂಡೇಶನ್ ಮುಖ್ಯಸ್ಥರು ಅಂಧ ಜೋಡಿಯ ಮದುವೆ …

Read More »

50 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಸ್ಪತ್ರೆ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಯಾದವಾಡ ಹಾಗೂ ಸುತ್ತಲಿನ ಗ್ರಾಮಗಳ ರೋಗಿಗಳ ಅನುಕೂಲಕ್ಕೋಸ್ಕರ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಕಾಮಗಾರಿಯನ್ನು ಒಂದು ವಾರದೊಳಗೆ ಆರಂಭಿಸಲಾಗುವುದು. ಇದಕ್ಕಾಗಿ 50 ಲಕ್ಷ ರೂ.ಗಳನ್ನು ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ತಾಲೂಕಿನ ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಿವಾರದಂದು ಭೇಟಿ ನೀಡಿ ಆಸ್ಪತ್ರೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರದಿಂದ …

Read More »

ಸರ್ಕಾರಿ ಹೊಸ ಮಾಧ್ಯಮಿಕ ಶಾಲೆ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕೆ ಎಂ ಎಫ್ ನಿರ್ದೇಶಕರು ಅಮರನಾಥ ಜಾರಕಿಹೊಳಿ….

ಗೋಕಾಕ ಜು 4 : ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಇಲ್ಲಿನ ಸರಕಾರಿ ಹೊಸ ಮಾಧ್ಯಮಿಕ ಶಾಲೆಗೆ ಆರ್ ಐ ಡಿ ಎಫ್ ಯೋಜನೆಯಡಿ 62.80 ಲಕ್ಷ ರೂ, ನ್ಯಾಯಾಂಗ ಇಲಾಖೆ ವತಿಯಿಂದ 15 ಲಕ್ಷ ರೂ ಹಾಗೂ ಕೆ ಆರ್ ಡಿ ಸಿ ಯೋಜನೆಯಡಿ 30 ಲಕ್ಷ ರೂ ಒಟ್ಟು ರೂ 1.7 ಕೋಟಿ ವೆಚ್ಚದಲ್ಲಿ ಮಂಜೂರಾದ 7 ಶಾಲಾ ಕೊಠಡಿ, 6 ಶೌಚಾಲಯಗಳಿಗೆ ಹಾಗೂ ಲೋಕೋಪಯೋಗಿ …

Read More »

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ನವದೆಹಲಿ(ಜು.04): ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಶೇ.53.5ರಷ್ಟುವಿದ್ಯಾರ್ಥಿಗಳು ಕನ್ನಡದಲ್ಲಿ ಕಲಿಯುತ್ತಿದ್ದರೆ, ಶೇ.42.2ರಷ್ಟುಮಕ್ಕಳು ಇಂಗ್ಲಿಷ್‌ನಲ್ಲಿ ಕಲಿಯುತ್ತಿದ್ದಾರೆ ಎಂದು ಯುಡಿಐಎಸ್‌ಇ (ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ) ವರದಿ ಬಿಡುಗಡೆ ಮಾಡಿದೆ. ಇನ್ನು ದಕ್ಷಿಣದ ಇತರ ರಾಜ್ಯಗಳ ಪೈಕಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯ ಮಕ್ಕಳು ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ತಮಿಳುನಾಡು ಮತ್ತು ಕೇರಳದಲ್ಲೂ ಮಾತೃಭಾಷೆಗಿಂತ ಇಂಗ್ಲಿಷ್‌ ಭಾಷೆಯಲ್ಲಿ …

Read More »

ಕೊರೋನಾ ಲಸಿಕೆಯ ಒಂದು ಡೋಸ್‌ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ.

ನವದೆಹಲಿ(ಜು.04): ಕೊರೋನಾ ಲಸಿಕೆಯ ಒಂದು ಡೋಸ್‌ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ. 2 ಡೋಸ್‌ ಲಸಿಕೆಯಿಂದ ರಕ್ಷಣೆಯ ಪ್ರಮಾಣ ಶೇ.98ಕ್ಕೆ ಏರಿಕೆ ಆಗಲಿದೆ ಎಂದು ಅಧ್ಯಯನವೊಂದನ್ನು ಆಧರಿಸಿ ಕೇಂದ್ರ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ.   ಪಂಜಾಬ್‌ ಸರ್ಕಾರದ ಸಹಯೋಗದೊಂದಿಗೆ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆ ಪಂಜಾಬ್‌ ಪೊಲೀಸರ ಮೇಲೆ ನಡೆಸಿದ ಅಧ್ಯಯನದ ಮಾಹಿತಿಯನ್ನು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್‌ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. …

Read More »

ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ.

ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸಿ ಚುಡಾಯಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ನಗರಸ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.   ಗೋಪಾಲ ಗುರಣ್ಣವರ ಮಹಿಳೆಯಿಂದ ಚಪ್ಪಲಿ ಸೇವೆ ಮಾಡಿಸಿಕೊಂಡ ವ್ಯಕ್ತಿಗೆ ಹಲವು ಸಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಹಿಂಬಾಲಿಸುವುದು ನಿಲ್ಲಿಸಿಲ್ಲ. ಸಿಳ್ಳೆ ಹೊಡೆದು ಚುಡಾಯಿಸುತ್ತಿದ್ದನು. ಇಂದು ಮಹಿಳೆ ಹಾಗೂ ಆಕೆಯ …

Read More »