Breaking News

ಅಂತರಾಷ್ಟ್ರೀಯ

ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ

ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್‌.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ವಾಷಿಂಗ್ಟನ್‌: ಮೈಕ್ರೋಸಾಪ್ಟ್ ಸಂಸ್ಥೆಯ ಉದ್ಯೋಗಿಯೊಬ್ಬರ ಜೊತೆ ಇಪ್ಪತ್ತು ವರ್ಷಗಳ ಹಿಂದೆ ಮೈಕ್ರೋ ಸಾಫ್ಟ್ ನ ಸಹ-ಸಂಸ್ಥಾಪಕ ಬಿಲ್‌ ಗೇಟ್ಸ್‌ ಹೊಂದಿದ್ದ ಪ್ರಣಯ ಪ್ರಕರಣದ ತನಿಖೆಯನ್ನು ಆ ಸಂಸ್ಥೆಯು ಆಂತರಿಕ ತನಿಖೆಗೊಳಪಡಿಸಿದೆ. ಈ ಹಿನ್ನೆಲೆಯಲ್ಲಿ, ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ ನೀಡಿದ್ದಾರೆ. ತನಿಖೆ ಮುಗಿಯುವವರಿಗೆ ತಾವು ಸಂಸ್ಥೆಯ ಪ್ರಭಾವಿ ಹುದ್ದೆಯಲ್ಲಿ ಇರಬಾರದೆಂಬ ನೈತಿಕತೆಯಿಂದಾಗಿ ಅವರು ಆಡಳಿತ ಸಂಸ್ಥೆಯಿಂದ ಹೊರಬಂದಿದ್ದಾರೆಂದು ಮೂಲಗಳು ತಿಳಿಸಿವೆ. ಮತ್ತೂಂದೆಡೆ, ಪ್ರಕರಣದ ಕೇಂದ್ರಬಿಂದುವಾಗಿರುವ ಉದ್ಯೋಗಿಗೆ …

Read More »

ಗೋಕಾಕದಲ್ಲಿ ಭೀಕರ ಸರಣಿ ಅಪಘಾತ: ಮೂವರಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಗೋಕಾಕ: ನಗರದ ಬ್ಯಾಳಿಕಾಟಾ ಬಳಿ ಸೋಮವಾರ ಸಂಜೆ ಭೀಕರ ಸರಣಿ ಅಪಘಾತ ಸಂಭವಿಸಿ, ಮೂವರು ಗಂಭಿರವಾಗಿ ಗಾಯಗೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ನಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ನಗರದ ಕಡೆ ಆಗಮಿಸುತ್ತಿದ್ದ ಇಂಡಿಕಾ ಕಾರ್, ಇಲ್ಲಿನ ನಾಕಾ 1 ರಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಆಟೊ ರಿಕ್ಷಾಗೆ ಡಿಕ್ಕಿ …

Read More »

ಮೂಡಲಗಿಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಕಲ ವ್ಯವಸ್ಥೆ: ತಹಶೀಲ್ದಾರ್ ಮೋಹನಕುಮಾರ್

ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕಿನ ಯಾದವಾಡ ಗ್ರಾಮದಲ್ಲಿ ಸೋಮವಾರ ಕೋವಿಡ್-19 ಜಾಗೃತಿ ಸಭೆ ಜರುಗಿತು. ಮೂಡಲಗಿ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಮಾತನಾಡಿ, “ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ, ಈಗಾಗಲೇ ಇದರ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಬಗ್ಗೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು. ಆದರೆ ಇದರಿಂದ ಯಾರೂ ಗಾಬರಿಯಾಗಬಾರದು” ಎಂದು ಹೇಳಿದರು. ಸಕಲ ವ್ಯವಸ್ಥೆ: “ಸೋಂಕಿತರಿಗೆ ಈಗಾಗಲೇ ಅಗತ್ಯ ಇರುವ ಚಿಕಿತ್ಸೆ …

Read More »

ಕೋವಿಡ್: ಗಡಿ ಜಿಲ್ಲೆ ಶಿಕ್ಷಕರು ಗಢಗಢ…. ದೊಡ್ಡ ಬೆಲೆ ತೆರುತ್ತಿದೆ ಶಿಕ್ಷಕ ಸಮುದಾಯ…

ಕೋವಿಡ್ ಸೋಂಕಿಗೆ ಗಡಿ ಜಿಲ್ಲೆಯಲ್ಲಿ ಶಿಕ್ಷಕ ಸಮುದಾಯ ದೊಡ್ಡ ಬೆಲೆ ತೆತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 90 ಶಿಕ್ಷಕರು ಕೋವಿಡ್ ಸೋಂಕಿಗೆ ಶಿಕಾರಿಯಾಗಿದ್ದಾರೆ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 23, ಎರಡನೇ ಅಲೆಯಲ್ಲಿ 20 ಶಿಕ್ಷಕರು ಬಲಿಯಾಗಿದ್ದಾರೆ. ಹತ್ತು ಶಿಕ್ಷಕರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದವರಾಗಿದ್ದವರು ಎಂದು ಸರಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಎಂದು ಬೆಳಗಾವಿ ಡಿಡಿಪಿಐ ಆನಂದ ಪುಂಡಲೀಕ ಅವರು “ಜನ ಜೀವಾಳ”ಕ್ಕೆ ಮಾಹಿತಿ ನೀಡಿದ್ದಾರೆ. …

Read More »

ಒಳಿತು ಮಾಡು ಮನುಷ್ಯಾ.. ನೀ ಇರೋದು ಮೂರು ದಿವಸಾ: ಹಿಂಗೆ ನಡೆದುಕೊಳ್ಳುತ್ತಿದ್ದಾರೆ ಹುಬ್ಬಳ್ಳಿ ಪೊಲೀಸರು…!

ಹುಬ್ಬಳ್ಳಿ: ಕೊರೋನಾ ಎಂಬ ಮಹಾಮಾರಿ ಪ್ರತಿಯೊಬ್ಬರ ನೆಮ್ಮದಿಯನ್ನ ಹಾಳು ಮಾಡುವುದಲ್ಲದೇ, ಬದುಕನ್ನ ನಿರ್ಜೀವಿಯನ್ನಾಗಿ ಮಾಡುತ್ತಿರುವುದು ಎಲ್ಲರಿಗೂ ಗೊತ್ತೆಯಿದೆ. ತಾನೂ ಇರುವುದೆಷ್ಟು ದಿನ ಎಂಬುದು ಗೊತ್ತೆಯಿಲ್ಲದಿದ್ದರೂ, ಮನುಷ್ಯ ಮಾತ್ರ ಮಾನವೀಯ ಇನ್ನೂ ಮೈಗೂಡಿಸಿಕೊಳ್ಳುತ್ತಿಲ್ಲ. ಆದರೆ, ಸದಾಕಾಲ ಸಾರ್ವಜನಿಕರಿಂದ ವಿನಾಕಾರಣ ಬೈಸಿಕೊಳ್ಳುವ ಪೊಲೀಸರು ಮಾತ್ರ, ತಾವೂ ಎಷ್ಟು ಮಾನವೀಯತೆ ಹೊಂದಿದ್ದೇವ ಎಂಬುದನ್ನ ಸದ್ದಿಲ್ಲದೇ ತೋರಿಸಿಕೊಂಡು ಹೋಗುತ್ತಿದ್ದಾರೆ.. ಹುಬ್ಬಳ್ಳಿ ಪೊಲೀಸ್ ಕಮೀಷನರ್ ಲಾಬುರಾಮ್ ಅವರು ಬಂದ ನಂತರ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಉತ್ತಮ ಬೆಳವಣಿಗೆಗಳು …

Read More »

ಕೊರೋನಾ ಭಯ ಬೇಡ- ನಿಮ್ಮೊಂದಿಗೆ ಡಾ.ಸೀಮಾ ಸಾಧಿಕಾ ಇರ್ತಾರೆ…!

ಬೆಂಗಳೂರು: ಕೊರೋನಾ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ಬಹುತೇಕರಿಗೆ ಈಗಾಗಲೇ ಸಹಾಯ ಮಾಡುತ್ತಿರುವ ನಮ್ಮ ಮಿತ್ರ ಫೌಂಡೇಷನ್ ಸಂಸ್ಥಾಪಕಿ ಡಾ.ಸೀಮಾ ಸಾಧಿಕಾ ಅವರು, ಪ್ರತಿಯೊಂದು ಮಾಹಿತಿಯನ್ನ ನೀಡಲು ಮುಂದಾಗಿದ್ದಾರೆ.     ಕೊರೋನಾ ಸಮಯದಲ್ಲಿ ಆರೋಗ್ಯ ಏರುಪೇರಾದ ತಕ್ಷಣ ಏನು ಮಾಡಬೇಕು. ಮನೆಯಲ್ಲಿಯೇ ಹೇಗೆ ಆರೋಗ್ಯ ಸುಧಾರಿಸಿಕೊಳ್ಳಬಹುದು. ನೀವು ಯಾವ ಔಷಧ ತೆಗೆದುಕೊಳ್ಳಬಹುದೆಂಬ ಮಾಹಿತಿಯನ್ನ ನೀಡಲಿದ್ದಾರೆ. ಅವಶ್ಯಕವಿದ್ದ ಸಮಯದಲ್ಲಿ ಆಸ್ಪತ್ರೆಗಳ ಮಾಹಿತಿಯನ್ನೂ ತಮಗೆ ನೀಡಲಿದ್ದಾರೆ.     ಜ್ವರ, ಕೆಮ್ಮು …

Read More »

ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು

ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …

Read More »

ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …

Read More »