Breaking News

ಅಂತರಾಷ್ಟ್ರೀಯ

ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು

ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.

Read More »

ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ

ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …

Read More »

ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಪ್ರತಿಭಟನೆ

ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು ಗೋಕಾಕದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಭಿಮಾನಿಗಳು, ಸಿಡಿ ಪ್ರಕರಣಕ್ಕೆ ಸಂಬಂದಪಟ್ಟವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಈ ವೇಳೆ ಪ್ರತಿಭಟನೆ ನಿರತ ಮಹಿಳೆ ಮಾತನಾಡಿ, ರಾಜಕೀಯ ಮಾಡಲಿ ಆದರೆ ಹೆಣ್ಣನ್ನು ಮುಂದೆ ಇಟ್ಟುಕೊಂಡು ಶಿಖಂಡಿ ತರಹ …

Read More »

ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.

ಬೆಳಗಾವಿ-ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ,ಎಸ್‌ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್‌ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …

Read More »

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …

Read More »

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.  

Read More »

ಗೋಕಾಕ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..

ಗೋಕಾಕ ಫಾಲ್ಸ್‌ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …

Read More »

‘ನಾನು ನಿರಪರಾಧಿ, ಅಪರಾಧಿಯಲ್ಲ’ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಬಿಚ್ಚಿಟ್ಟ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಹೊರಬಂದ ದಿನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಬಳಿಕ ನಾಪತ್ತೆಯಾಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಂಗಳೂರಿನ ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಮೇಶ್ ಜಾರಕಿಹೊಳಿ ನಡೆಸುತ್ತಿರುವ ಮೊದಲ ಸುದ್ದಿಗೋಷ್ಠಿ ಇದಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ‘ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ. ನನಗೆ ಮಾನಸಿಕವಾಗಿ ಧೈರ್ಯ ತುಂಬಿದ ಸಿಎಂ ಬಿಎಸ್‌ ಯಡಿಯೂರಪ್ಪ, ಮಾಜಿ …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »