ದಾವಣಗೆರೆ: ಪಂಚಮಸಾಲಿ ಮಠದ ವಿವಾದ ಭಾರೀ ಭುಗಿಲೆದ್ದಿದೆ. ಮಠದ ಟ್ರಸ್ಟಿಗಳ ವಿರುದ್ಧ ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್ ಆಕ್ರೋಶ ಹೊರಹಾಕಿದ್ದು, 2008 ರಲ್ಲಿ ಪಂಚಮಸಾಲಿ ಮಠ ಆರಂಭವಾಗಿದೆ. ಕೋಟ್ಯಂತರ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ. ಲೆಕ್ಕ ಕೊಡಿ ಎಂದರೆ ಟ್ರಸ್ಟ್ನವರು ಯಾಕೆ ಕೊಡಬೇಕು ಎನ್ನುತ್ತಿದ್ದಾರೆ. ಅದರೆ ತರಾತೂರಿಯಲ್ಲಿ ಈಗ ಲೆಕ್ಕ ಕೊಡಲು ಮುಂದಾಗಿದ್ದಾರೆ. ನೀವು ಪ್ರಾಮಾಣಿಕವಾಗಿದ್ದರೆ ಕೊಟ್ಟೂರು ಅಥವಾ ಧರ್ಮಸ್ಥಳಕ್ಕೆ ಬನ್ನಿ ಪ್ರಮಾಣ ಮಾಡಿ. ನಾವು ಬರುತ್ತೇವೆ ಎಂದು ಸವಾಲು ಹಾಕಿದ್ದಾರೆ. …
Read More »ಶ್ರೀ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿದ: ಸತೀಶ್ ಜಾರಕಿಹೊಳಿ,
ಹಾವೇರಿಯ ಶ್ರೀ ವಾಲ್ಮೀಕಿ ವೃತ್ತದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಯನ್ನು ಇಂದು ಲೋಕಾರ್ಪಣೆಗೊಳಿಸಿ, ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದೆ. ಸಮಾನತೆ ಮತ್ತು ಸಂಸ್ಕೃತಿಯ ಹರಿಕಾರರಾದ ಮಹರ್ಷಿಯವರ ತತ್ವಗಳು ನಮ್ಮ ಸಮಾಜಕ್ಕೆ ಎಂದಿಗೂ ದಾರಿದೀಪ. ಈ ಸಂದರ್ಭದಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೂಜ್ಯ ಡಾ. ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು, ಹಾವೇರಿ ಹುಕ್ಕೇರಿ ಮಠದ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು, ವಿಧಾನಸಭೆಯ ಉಪಸಭಾಪತಿ ಶ್ರೀ ರುದ್ರಪ್ಪಾ …
Read More »ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ
ಬೆಂಗಳೂರು: ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ (GKVK) ನಡೆದ ದ್ವೈವಾರ್ಷಿಕ 22ನೇ ರಾಜ್ಯ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನ ಉದ್ಘಾಟನೆ ಮಾಡಿ, ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಅವಶ್ಯಕತೆ ಇದೆ ಅಂತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರತಿಪಾದಿಸಿದರು. ಸಮ್ಮೇಳನದಲ್ಲಿ ಮಾತಾಡಿದ ಅವರು, ಜಗತ್ತಿನ ಸಂಸ್ಥೆಗಳು ತಾಂತ್ರಿಕ ಬದಲಾವಣೆಗಳಿಂದ ರೂಪಾಂತರಗೊಳ್ಳುತ್ತಿರುವ ಈ ಸಮಯದಲ್ಲಿ, ಕೃತಕ …
Read More »ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಬೆಂಗಳೂರು: ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆ ಪವಿತ್ರಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆಯನ್ನೂ ನೀಡಿದ್ದಾರೆ. ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ …
Read More »ಸಿಎಂ ಸ್ಥಾನ ಬದಲಾವಣೆ ಚರ್ಚೆ ಸಹಜ
ಬೆಳಗಾವಿ : ಎಲ್ಲ ಸರ್ಕಾರದಲ್ಲೂ ಸಿಎಂ ಬದಲಾವಣೆ ಚರ್ಚೆಗಳಾಗಿವೆ. ಬಿಜೆಪಿ ಅವಧಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿದೆ. ಎಲ್ಲ ಸರ್ಕಾರದಲ್ಲೂ ಸಿಎಂ ಸ್ಥಾನದ ಆಕಾಂಕ್ಷಿಗಳು ಕೇಳಿಯೇ ಕೇಳುತ್ತಾರೆ. ತಂದೆಯವರೇ ಐದು ವರ್ಷದ ಅವಧಿ ಮುನ್ನಡೆಸಿಕೊಂಡು ಹೋಗಲಿ ಎಂಬುದು ನಮ್ಮ ವೈಯಕ್ತಿಕ ಬೇಡಿಕೆಯಾಗಿದ್ದು, ಈ ಚರ್ಚೆಗಳಿಗೆ ಮುಖ್ಯಮಂತ್ರಿಯೇ ಸ್ಪಷ್ಟನೆ ಕೊಟ್ಟಿರುವುದರಿಂದ ಹೆಚ್ಚಿಗೆ ಮಾತನಾಡಲಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಬೈಲಹೊಂಗಲ ತಾಲೂಕಿನ ಸುಖದೇವಾನಂದ ಮಠದಲ್ಲಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ …
Read More »ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆಗೆ ನಿವೃತ್ತರಾದ ಪಿಂಚಣಿದಾರರ ಆಗ್ರಹ
ಬೆಳಗಾವಿ: ಬಿಎಸ್ಎನ್ಎಲ್ ಮತ್ತು ಎಂಟಿಎನ್ಎಲ್ನಿಂದ ನಿವೃತ್ತರಾದ ಪಿಂಚಣಿದಾರರಿಗೆ ಸರ್ಕಾರದಿಂದ ಬರಬೇಕಿರುವ ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆ ಮಾಡುವಂತೆ ಆಗ್ರಹಿಸಿ ನಗರದ ಬಿಎಸ್ಎನ್ಎಲ್ ಕಚೇರಿ ಎದುರು ಗುರುವಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತೀಯ ಬಿಎಸ್ಎನ್ಎಲ್ ಪಿಂಚಣಿದಾರರ ಸಂಘ ಸೇರಿದಂತೆ ಒಟ್ಟು 12 ಸಂಘಟನೆಗಳ ನೇತೃತ್ವದಲ್ಲಿ ಇಲ್ಲಿನ ಪ್ರಧಾನ ಕಚೇರಿ ಎದುರು ಸೇರಿದ ಪಿಂಚಣಿದಾರರು ತಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸದೇ ಹೋದಲ್ಲಿ ಏ.30ರಂದು ದೇಶಾದ್ಯಂತ ಎಲ್ಲ ಬಿಎಸ್ಎನ್ಎಲ್ ಕಚೇರಿಗಳ ಎದುರು …
Read More »ನಷ್ಟದಲ್ಲಿರುವ ಉದ್ಯಮಗಳಿಗೆ ಡಿಸಿಸಿ ಬ್ಯಾಂಕ್ ಸಾಲ ನೀಡದಂತೆ ಆಗ್ರಹ
ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿ ನಷ್ಟದಲ್ಲಿರುವ ಕೆಲವು ಕಾರ್ಖಾನೆ ಮತ್ತು ಉದ್ಯಮಗಳಿಗೆ ಕೋಟ್ಯಂತರ ರೂಪಾಯಿ ಸಾಲ ಕೊಡಲು ಮುಂದಾಗಿದ್ದ, ಇದು ಬ್ಯಾಂಕಿನ ಭವಿಷ್ಯಕ್ಕೆ ಮಾರಕವಾಗಲಿದ್ದು, ಆಡಳಿತ ಮಂಡಳಿ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಮುಂಬರುವ ಸಭೆಯಲ್ಲಿ ಸಾಲ ಮಂಜೂರಾತಿಗಾಗಿ ಈಗಾಗಲೇ ಅನೇಕ ಸಕ್ಕರೆ ಕಾರ್ಖಾನೆಗಗಳು ಹಾಗೂ ಕೆಲ ರಾಜಕಾರಣಿಗಳು ಜಮೀನು …
Read More »ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು
ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು ಅತ್ಯಂತ ಪ್ರಖರವಾಗಿವೆ ಎಂದು ಹಿರಿಯ ಸಾಹಿತಿ ಡಾ.ರಾಘವೇಂದ್ರ ಪಾಟೀಲ ಹೇಳಿದರು. ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುವಾರ ಮಹಾಂತ ಭವನದಲ್ಲಿ ಏರ್ಪಡಿಸಿದ್ದ ಡಾ.ಬೆಟಗೇರಿ ಕೃಷ್ಣ್ಣಶರ್ಮ ಜಯಂತಿ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನವೋದಯದ ಪ್ರತಿಭಾವಂತ ಕವಿಯಾಗಿದ್ದ ಕೃಷ್ಣಶರ್ಮರು ಕಾವ್ಯಗಳಲ್ಲಿ ಸ್ತ್ರೀಗೆ …
Read More »ಖಾನಾಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೊಲೀಸರ ನಡೆಗೆ ಖಂಡನೆ
ಬೆಳಗಾವಿ : ಅಪರಾಧ ಚಟುವಟಿಕೆಗಳ ಹಿನ್ನೆಲೆವುಳ್ಳವರಿಗೆ ಖಾನಾಪುರ ಪೊಲೀಸ್ ಠಾಣೆಯಲ್ಲಿ ಈಚೆಗೆ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಶಾಂತಿ ಸಭೆಯಲ್ಲಿ ಪ್ರಾತಿನಿಧ್ಯ ನೀಡಿರುವುದನ್ನು ಖಂಡಿಸಿ ಖಾನಾಪುರ ಪಟ್ಟಣದಲ್ಲಿ ಗುರುವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರಿಗೆ ಮನವಿ ಸಲ್ಲಿಸಿದರು. ಸಮಾಜಕ್ಕೆ ಸಂಬಂಧಿಸಿದಂತೆ ಯಾವುದೇ ಒಂದು ಸಭೆಗಳಿದ್ದಾಗ, ಆಯಾ ಊರಿನ ಅಥವಾ ಸಮುದಾಯದ ಹಿರಿಯರನ್ನು ಆಹ್ವಾನಿಸುವ …
Read More »ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ
ಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದು, ಇದಕ್ಕೆ ಪೂರಕವಾದ ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಷ್ಟ್ರೀಯ ಯೋಜನಾ ಸಮನ್ವಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೂರು ವರ್ಷಗಳ ಈ ಯೋಜನೆ ಕುರಿತು ವಿಸ್ತೃತ ಕ್ರಿಯಾಯೋಜನೆ ರೂಪಿಸಿ ಇತರೆ …
Read More »
Laxmi News 24×7