Breaking News

ಕಲಬುರ್ಗಿ

ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು  ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ …

Read More »

ದೇಶ ಹಾಳು ಮಾಡುವ ಮೋದಿಗೆ ತಕ್ಕಪಾಠ ಕಲಿಸಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ನೀತಿಯಿಂದ ದೇಶ ಹಾಳು ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕು ಎಂದು ರಾಜ್ಯಸಭೆ ವಿಪ ನಾಯಕರೂ ಆದ ಎಐಸಿಸಿ ಅಧ್ಯ ಮಲ್ಲಿಕಾರ್ಜುನ ರ್ಖಗೆ ಹೇಳಿದರು. ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ 1069.41 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಟ್ರಂಪ್​ ಒಬ್ಬ ಡಿಕ್ಟೇಟರ್​, ಮೋದಿ ಅವರ ಗುಲಾಮ. ರಷ್ಯಾದಿಂದ …

Read More »

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರಗಿ: ಬಾಲಕಿ ಜೊತೆ ಅನುಚಿತ ವರ್ತನೆ ಕೇಸ್‌ಗೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದ  ಮೆಟ್ಟಿಲೇರಿದ್ದಾರೆ. ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ನಡೆದುಕೊಂಡಿದ್ದರು. ಹೀಗಾಗಿ ಮುತ್ಯಾನ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಯಾದಗಿರಿ ಎಸ್ಪಿ ಅವರಿಗೆ ಪತ್ರವನ್ನೂ ಬರೆದಿದ್ದರು. ಅದರಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಮಲ್ಲಿಕಾರ್ಜುನ …

Read More »

ತಿಂಗಳೊಳಗೆ ಗುಲ್ಬರ್ಗ ವಿವಿ ಬಿ.ಇಡಿ ಫಲಿತಾಂಶಕ್ಕೆ ಸೂಚಿಸಿ ರಾಜ್ಯಪಾಲರ ಆದೇಶ

ಬೆಂಗಳೂರು: ಕಲಬುರಗಿಯ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ 2024ರ ಡಿಸೆಂಬರ್‌ನಲ್ಲಿ ನಡೆದಿದ್ದ ಬಿ.ಇಡಿ 2 ಮತ್ತು 4ನೇ ಸೆಮಿಸ್ಟರ್‌ಗಳಿಗೆ ನಡೆಸಿದ ಪರೀಕ್ಷೆಗಳ ಫಲಿತಾಂಶವನ್ನು ಮುಂದಿನ ಒಂದು ತಿಂಗಳೊಳಗೆ ನೀಡುವಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಏಕವ್ಯಕ್ತಿ ಸತ್ಯಶೋಧನಾ ಸಮಿತಿಯು ಮಧ್ಯಂತರ ವರದಿ ನೀಡಿದೆ. ಎರಡೂ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸೌಲಭ್ಯಗಳನ್ನು ಬಳಸಿಕೊಂಡು ಮೌಲ್ಯಮಾಪನ ಮಾಡಿಸಿ ಫಲಿತಾಂಶ ನೀಡಲು ಸೂಚಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು …

Read More »

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

ಕಲಬುರಗಿ: ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. ರಾಜ್ಯ ಸರ್ಕಾರದಲ್ಲಿ ಕಳೆದೊಂದು ವರ್ಷದಲ್ಲಿ ಬರೀ ಗೊಂದಲ ಇದೆ. ಸಿಎಂ ಸಿದ್ದರಾಮಯ್ಯ ಅನುಭವಸ್ಥರು. ಆದಷ್ಟು ಬೇಗ ಗೊಂದಲ ಬಗೆಹರಿಸಿ ಅಭಿವೃದ್ಧಿಯತ್ತ ಚಿತ್ತ ಹರಿಸಬೇಕು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 31 ಹೊಸ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಪತ್ರ ವಿಚಾರ ಪತ್ರ ಬರೆದಿದ್ದರಲ್ಲಿ ತಪ್ಪೇನಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ …

Read More »

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

ಕಲಬುರಗಿ: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ  ಶಿವಾಜಿ ಜಯಂತಿ  ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ  ತಾಲೂಕಿನ ರಾವೂರ್  ಗ್ರಾಮದಲ್ಲಿ ಘಟನೆ ನಡೆದಿದೆ. ರಾವೂರ್ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಫೋಟೋ ಇಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುವ ವೇಲೆ ಮತ್ತೊಂದು ಸಮುದಾಯ ಕಿರಿಕದ ಮಾಡಿದೆ. ಸೌಂಡ್ …

Read More »

ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ. ಶಹಬಾಜ್ ಎಂಬ ವಿದ್ಯಾರ್ಥಿ ಬ್ಲಾಕ್‌ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ.  ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಶಹಬಾಜ್ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ಶಹಬಾಜ್‌ಗೆ ಪ್ರಶ್ನಿಸಿ ಉತ್ತರ ಪತ್ರಿಕೆ ಪಡೆದಿದ್ದರು. ಬಳಿಕ ಕ್ಲಾಸ್ ರೂಮ್‌ನಿಂದ ಆಚೆ ಹೋಗುವಂತೆ ಹೇಳಿದ್ದರು. ಇದಕ್ಕೆ ಕೆರಳಿ ಕೆಂಡವಾದ ಶಹಬಾಜ್ ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದ. ವಿದ್ಯಾರ್ಥಿಯ ನಡುವಳಿಕೆ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಪಾಲಕರ ಗಮನಕ್ಕೆ ತಂದಿದೆ. ಜೊತೆಗೆ ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದೆ. ಕಾಲೇಜ್ ಆಡಳಿತ ಮಂಡಳಿಯಿಂದಾದಲಿ ಅಥವಾ ಹಲ್ಲೆಗೆ ಒಳಗಾದ ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್‌ನಿಂದ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ.

ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡ್ತಿರೋದನ್ನ ಪ್ರಶ್ನಿಸಿ ತಡೆದಿದಕ್ಕೆ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿಯ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ. ಶಹಬಾಜ್ ಎಂಬ ವಿದ್ಯಾರ್ಥಿ ಬ್ಲಾಕ್‌ನ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್ ನಡೆಯುತ್ತಿತ್ತು. ಈ ವೇಳೆ ಶಹಬಾಜ್ ಮೊಬೈಲ್ ಬಳಸಿ ನಕಲು ಮಾಡಲು ಮುಂದಾಗಿದ್ದ. ಇದನ್ನು ನೋಡಿದ ಪ್ರಾಧ್ಯಾಪಕರು ಶಹಬಾಜ್‌ಗೆ ಪ್ರಶ್ನಿಸಿ ಉತ್ತರ …

Read More »

ಕಲಬುರಗಿ| ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ: ಪ್ರೀತಿಸಿ ಮದುವೆಯಾದ ನವವಿವಾಹಿತೆ ಎರಡೇ ತಿಂಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅನಸೂಯಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಕಲಬುರಗಿ ನಗರದ ಆಜಾದಪುರ್ ಬಡಾವಣೆಯ ನಿವಾಸಿಯಾಗಿದ್ದು, ಈಕೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಅತ್ತೆ ಮಗ ಅವಿನಾಶ್ ಜೊತೆ ಪ್ರೀತಿಸಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಾದ ಎರಡೇ ತಿಂಗಳಲ್ಲಿ ಈಕೆಗೆ ತನ್ನ ಮೂರು ಜನ ಸಹೋದರಿಯರು ಕ್ಯಾಪಿಟಲ್ ಸಿಟಿಗಳಲ್ಲಿ ವಾಸವಿದ್ರು, ತಾನು ಮಾತ್ರ ಹಳ್ಳಿಯಲ್ಲಿ …

Read More »

ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ ಲಿಂಗೈಕ್ಯ

ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ (91) ಅವರು ಇಂದು ಲಿಂಗೈಕ್ಯರಾದರು. ವಯೋಸಹಜ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಇವರು ದಾಸೋಹ ಮಹಾ ಮನೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯ ಸುಮಾರಿಗೆ ಆಂಬ್ಯುಲೆನ್ಸ್ ಮೂಲಕ ದಾಸೋಹ ಮಹಾಮನೆಗೆ ಕರೆತರಲಾಗಿತ್ತು. ಬಳಿಕ ಆಂಬ್ಯುಲೆನ್ಸ್ ನಲ್ಲೇ …

Read More »

ಕಾಲೇಜು ಪ್ರಾಂಶುಪಾಲ ಹೃದಯಾಘಾತದಿಂದ ಸಾವು

ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ಉಪ ಪ್ರಾಂಶುಪಾಲ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗುರುಬಸವಯ್ಯ ಸಾಲಿಮಠ (೫೧) ಹೃದಯಾಘಾತಕ್ಕೆ ಬಲಿಯಾದವರು. ಕಲಬುರಗಿಯ ಕೊಹಿನೂರ್ ಕಾಲೇಜಿನ ಉಪ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದವರು ಸ್ವಲ್ಪ ನೀರು ಕುಡಿದಿದ್ದಾರೆ. ನೀರು ಕುಡಿಯುತ್ತಿದ್ದಂತೆಯೇ ವಾಂತಿಯಾಗಿದೆ. ಹಠಾತ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Read More »