Breaking News
Home / ಜಿಲ್ಲೆ / ಕಲಬುರ್ಗಿ (page 4)

ಕಲಬುರ್ಗಿ

ನಾನು ಮನೆ ಬಿಟ್ಟು ಬರಲ್ಲ: 2 ದಿನದಿಂದ ಛಾವಣಿ ಮೇಲೆ ‘ಬಂಡೆ’ಯಂತೆ ಕೂತ ವೃದ್ಧೆ ಕಲ್ಲಮ್ಮ

ಕಲಬುರಗಿ: ಭೀಮಾ ನದಿಗೆ 5.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಪರಿಣಾಮವಾಗಿ ಜಿಲ್ಲೆಯ ಫಿರೋಜಾಬಾದ್‌ಗೆ ಪ್ರವಾಹದ ನೀರು ನುಗ್ಗಿದೆ. ಹಾಗಾಗಿ, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಡಳಿತ ಮುನ್ಸೂಚನೆ ನೀಡುತ್ತಿದೆ. ಜೊತೆಗೆ, ನದಿ ಪಾತ್ರದ ಹಳ್ಳಿಗಳ ಗ್ರಾಮಸ್ಥರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ನೋಡಲ್ ಅಧಿಕಾರಿಗಳು ವಿನಂತಿ ಸಹ ಮಾಡುತ್ತಿದ್ದಾರೆ. ಆದರೆ, ಬಂದಿದ್ದು ಬರಲಿ ನಾನು ಇಲ್ಲೇ ಇರುವೆ …

Read More »

ಕರ್ನಾಟಕದ ಜಿಲ್ಲೆಗಳು ಕಲಬುರಗಿ ನಿಲ್ಲದ ಮಳೆ, ಬಾರದ ಜನಪ್ರತಿನಿಧಿ, ಕಲಬುರಗಿ ಜನ ಕಂಗಾಲು

ಕಳೆದ ಮೂರು ದಿನಗಳಿಂದ ಸತತವಾಗಿ ಮತ್ತು ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ , ಯಾದಗಿರಿ , ಬಾಗಲಕೋಟೆ , ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಬಹಳಷ್ಟು ಪ್ರದೇಶಗಳು ಜಲಾವೃತಗೊಂಡು ನಡುಗಡ್ಡೆಗಳಂತೆ ಗೋಚರಿಸುತ್ತಿವೆ . ಕುಂಭದ್ರೋಣದಿಂದ ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಪ್ರಭಾವಕ್ಕೊಳಗಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ . ಅನೇಕ ಕಡೆ ರಸ್ತೆ ಮತ್ತು ಸೇತುವೆಗಳು ಕೊಚ್ಚಿಹೋಗಿವೆ . ಕಮಲಾಪುರ ಹತ್ತಿರವಿರುವ ಜವಳಗಾ , ಸೇಡಂ ತಾಲುಕಿನಲ್ಲಿರುವ ಸಮಖೇಡ್ ತಾಂಡಾ …

Read More »

ಕಲಬುರಗಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ 6 ಶಾಲಾ ಸಿಬ್ಬಂದಿ ರಕ್ಷಣೆ..

ಕಲಬುರಗಿ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಕಷ್ಟ ಪಡುತ್ತಿದೆ. ಪ್ರವಾಹಕ್ಕೆ ಸಿಲುಕಿ ನರಳುತ್ತಿದೆ. ಕಾಗಿಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಶಾಲೆ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಮಳಖೇಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ಜನ ಸಿಬ್ಬಂದಿ ಸಿಲುಕಿದ್ದರು. ಅವರನ್ನು NDRF ತಂಡ ರಕ್ಷಿಸಿದೆ. ನಿನ್ನೆ ಬೆಳಗ್ಗೆ ಶಾಲೆಗೆ ಕಾಗಿಣಾ ನದಿಯ ನೀರು ನುಗ್ಗಿ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದರು. ವಸತಿ ಶಾಲೆಯಿಂದ …

Read More »

ಕಲ್ಬುರ್ಗಿ ನಗರದಲ್ಲಿ ಭಾರಿ ಮಳೆ

ಕಲಬುರ್ಗಿ: ಇಲ್ಲಿನ ಕುಸನೂರು ರಸ್ತೆಯ ರಾಜಾಜಿ ನಗರದ ನಿವಾಸಿಗಳಾದ ಗುರುರಾಜ ಕುಲಕರ್ಣಿ, ಮೀನಾಕ್ಷಿ, ಚಂದ್ರಕಾಂತ ಅವರ ಕುಟುಂಬಗಳಿಗೆ ಮಂಗಳವಾರದ ರಾತ್ರಿ ಎಂದಿನಂತಿರಲಿಲ್ಲ. ಸಂಜೆಯವರೆಗೂ ಮಳೆಯ ಸುದ್ದಿಯೇ ಇರದಿದ್ದರಿಂದ ನಿರಾಳರಾಗಿ ನಿದ್ದೆಗೆ ಜಾರಿದವರಿಗೆ ಕೆಲವೇ ನಿಮಿಷಗಳಲ್ಲಿ ಪ್ರವಾಹದ ನೀರಿನ ಸದ್ದು ಕೇಳಿಸಿತು. ಎದ್ದು ನೋಡುವಷ್ಟರಲ್ಲಿ ಕುಲಕರ್ಣಿ ಅವರ ಕೆಳಗಿನ ಮನೆಯಲ್ಲಿ ಕ್ರಮೇಣ ನೀರು ತುಂಬಿಕೊಳ್ಳಲಾರಂಭಿಸಿತು. ಎದುಗಿನ ರಸ್ತೆಯಲ್ಲೇ ಹೊಳೆ ಹರಿದು ಬಂತೇನೋ ಎಂಬಷ್ಟು ಮಳೆಯ ರಭಸ ಅವರನ್ನು ಎಬ್ಬಿಸಿತು. ಗಂಗಾಧರ ಕುಲಕರ್ಣಿ ಅವರು …

Read More »

ಪ್ರವಾಹದಲ್ಲಿ ಸಿಲುಕಿದ್ದ ಮೂವರು ಬಿಹಾರಿ ಕಾರ್ಮಿಕರ ರಕ್ಷಣೆ.. ಯಾವೂರಲ್ಲಿ?

ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಚಿಂಚೋಳಿ ತಾಲೂಕಿನ ಐನೊಳ್ಳಿ ಗ್ರಾಮದ ಬಳಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕೆಲಸದ ಸ್ಥಳದಲ್ಲೇ ಬಿಹಾರ ಮೂಲದ ಮೂವರು ಕಾರ್ಮಿಕರು ಶೆಡ್ ನಿರ್ಮಿಸಿಕೊಂಡಿದ್ದರು. ಆದರೆ ಶೆಡ್​ಗೆ ಏಕಾಏಕಿ ಮಳೆ ನೀರು ನುಗ್ಗಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಬಳಿಕ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಮೂವರು ಕಾರ್ಮಿಕರ …

Read More »

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು …

Read More »

ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋದ ಮಹಿಳೆ ವಾಪಸ್​ ಬರಲೇ ಇಲ್ಲ..

ಕಲಬುರಗಿ: ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬಳ ಮೃತದೇಹ ಇಂದು ಪತ್ತೆಯಾಗಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾದ ನಿವಾಸಿ ಶಾಂತಾಬಾಯಿ(40) ಮೃತ ದರ್ದೈವಿ. ದಡದ ಮರದ ಕೊಂಬೆಯಲ್ಲಿ ಶವ ಪತ್ತೆ.. ಶಾಂತಾಬಾಯಿ ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದಳು. ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಇಂದು ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿಯಿರುವ ಹಳ್ಳದ ದಡದ ಮರದ ಕೊಂಬೆಯಲ್ಲಿ …

Read More »

ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತ

ಕಲಬುರಗಿ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಪಘಾತವಾಗಿರುವ ದಾರುಣ ಘಟನೆ ನಡಿದೆ. ನಿಂತಿದ್ದ ಲಾರಿಯೊಂದಕ್ಕೆ ಗರ್ಭಿಣಿ ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ನಸುಕಿನ ಜಾವ ಬಲವಾಗಿ ಗುದ್ದಿದೆ. ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮೃತರ ಪೈಕಿ ನಾಲ್ವರು ಮಹಿಳೆಯರು, ಮೂವರು ಪುರುಷರಿದ್ದರು. ಮೃತರೆಲ್ಲರೂ ಕಲಬುರಗಿ ಜಿಲ್ಲೆ ಆಳಂದದವರು ಎಂದು …

Read More »

ಫಾದರ್‌ ಲೈಂಗಿಕ ಕಿರುಕುಳ: SP ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನ

ಕಲಬುರಗಿ: ಫಾದರ್​ನಿಂದ‌ ಲೈಂಗಿಕ ಕಿರುಕುಳ ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ. ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಚರ್ಚ್​ನ ಫಾದರ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆಗೆ ಆರೋಪಿಸಿದ್ದಾರೆ. ಒಮ್ಮೆ ಚರ್ಚ್​ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು …

Read More »

ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು

ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವನೋರ್ವ ಭಯಗೊಂಡು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಕೂಕಿನ ಚಂದನಲ್ಲಿ ಗ್ರಾಮದ ಬಳಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಪೀರಶೆಟ್ಟಿ (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆ ನೀರಿನಿಂದ ಹಳ್ಳ ಕೊಳ್ಳಗಳು ತುಂಬಿ ರಭಸದಿಂದ ಹರಿಯುತ್ತಿವೆ. ಈ ಸಮಯದಲ್ಲಿ ಹಳ್ಳ ದಾಟಲು ಹೋದ ಪೀರಶೆಟ್ಟಿ ನೀರನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಆದರೆ ಹಳ್ಳಕ್ಕೆ ಆಡಲಾಗಿ ಹಾಕಿದ್ದ ಕಂಬವನ್ನು …

Read More »