ಕೊಪ್ಪಳ: ಕೊರೊನಾ ಮಹಾಮಾರಿ ಶಾಲಾ ಮಕ್ಕಳಿಗೆ ಶಾಲೆಯ ಮುಖ ನೋಡದಂತೆ ಮಾಡಿತ್ತು. ಇದೀಗ ವೈರಸ್ನ ಅಬ್ಬರ ಕಡಿಮೆಯಾಗಿದ್ದು ಮಕ್ಕಳು ಸಂತಸದಿಂದ ಶಾಲೆಗೆ ಮರಳಿದ್ದಾರೆ. ಆದರೂ ಕೊರೊನಾ ಗುಮ್ಮ ಇನ್ನೂ ಇರುವುದರಿಂದ ಎಲ್ಲ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಳೆದ 10 ತಿಂಗಳಿಂದ ಬಂದ್ ಆಗಿದ್ದ ಶಾಲಾ ಕಾಲೇಜುಗಳು ಹೊಸ ವರ್ಷಕ್ಕೆ ಆರಂಭವಾದ ಹಿನ್ನೆಲೆಯಲ್ಲಿ ಒಂದಡೆ ಶಾಲೆಗಳಿಗೆ ತಳಿರು ತೋರಣಗಳಿಂದ ಶೃಂಗಾರಗೊಳಿಸುವ ಮೂಲಕ ಸಾಮಾಜಿಕ ಅಂತರ ಪಾಲನೆ, ಥರ್ಮಲ್ ಸ್ಕ್ರೀನಿಂಗ್ ಸೇರಿ ಕೋವಿಡ್ …
Read More »ಕೊಪ್ಪಳ ಗವಿಮಠದ ಜಾತ್ರೆ ಸದ್ಯ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್……..
ಕೊಪ್ಪಳ: ದಕ್ಷಿಣ ಭಾರತದ ಮಹಾಕುಂಭಮೇಳ ಎಂದೇ ಪ್ರಖ್ಯಾತಿ ಪಡೆದಿರುವ ಕೊಪ್ಪಳ ಗವಿಮಠದ ಜಾತ್ರೆ ನಡೆಯುತ್ತಾ? ಇಲ್ಲವಾ? ಅನ್ನೋ ಅನುಮಾನ ಭಕ್ತರಲ್ಲಿ ಮೂಡಿದೆ. ಸದ್ಯ ಜಾತ್ರೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಪ್ರತಿ ವರ್ಷ ಈ ಜಾತ್ರೆಯಲ್ಲಿ ಸುಮಾರು ಐದು ಲಕ್ಷಕ್ಕೂ ಅಧಿಕ ಜನ ಸೇರುತ್ತಾರೆ. ಲಕ್ಷಾಂತರ ಜನರು ಸೇರುವ ಜಾತ್ರೆಗೆ ನಾವು ಅನುಮತಿ ನೀಡಲ್ಲ. ಸರ್ಕಾರದ ನಿರ್ದೇಶನದಂತೆ ಕೋವಿಡ್ ನಿಯಮಗಳ ಪ್ರಕಾರ ಜಾತ್ರೆಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಜಿಲ್ಲೆಯ ಯಾವುದೇ ಜಾತ್ರೆಗೆ …
Read More »ಕಾಂಗ್ರೆಸ್ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ಗೆ ಬರುತ್ತಾರೆ:ಡಿ.ಕೆ.ಶಿವಕುಮಾರ್
ಕೊಪ್ಪಳ, ನ.23: ಬಿಜೆಪಿಯಿಂದಲೇ ಕಾಂಗ್ರೆಸ್ಗೆ ಸೇರ್ಪಡೆ ಆಗುವವರು ಬಹಳಷ್ಟು ಮಂದಿ ಇದ್ದಾರೆ. ಕಾಂಗ್ರೆಸ್ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ಗೆ ಬರುತ್ತಾರೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಮ್ಮ ಸರಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ …
Read More »ಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ.
ಕೊಪ್ಪಳ: ಕೊರೊನಾ ಹಿನ್ನೆಲೆ ಶಾಲೆಗಳನ್ನು ಆರಂಭಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿ ಸರ್ಕಾರ ಇದ್ದರೆ, ಇಲ್ಲೊಂದು ಖಾಸಗಿ ಶಾಲೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಶಾಲೆಯ ತರಗತಿಗಳನ್ನು ಆರಂಬಿಸಿದೆ. ಇದರಿಂದಾಗಿ ಪೋಷಕರು ಭಯಭೀತರಾಗಿದ್ದು, ಮಕ್ಕಳಿಗೆ ಸೋಂಕು ತಗುಲಿದರೆ ಏನು ಗತಿ ಎಂಬ ಆತಂಕದಲ್ಲಿದ್ದಾರೆ. ಜಿಲ್ಲೆಯ ಗಂಗಾವತಿಯ ಸೇಂಟ್ ಫಾಲ್ಸ್ ಖಾಸಗಿ ಶಾಲೆಯಲ್ಲಿ ತರಗತಿಗಳನ್ನು ಆರಂಭಿಸಲಾಗಿದ್ದು, ಸರ್ಕಾರದ ನಿಯಮ ಉಲ್ಲಂಘಿಸಿ ಖಾಸಗಿ ಶಾಲೆಯನ್ನು ಆಡಳಿತ ಮಂಡಳಿ ತೆರೆದಿದೆ. ಅಲ್ಲದೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ …
Read More »ಕೊರೊನಾ ಹೊತ್ತಲ್ಲೇ ಕೊಪ್ಪಳದಲ್ಲಿ ಇಲಿ ಜ್ವರ ಕಾಟ!
ಕೊಪ್ಪಳ: ಒಂದೇಡೆ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನರು ನಿರಾಳವಾಗುತ್ತಿದ್ದರು. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ಇಲಿ ಜ್ವರ ಆರಂಭವಾಗಿದ್ದು, ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ ಹೌದು. ಕೊಪ್ಪಳ ಜಿಲ್ಲೆಯಲ್ಲಿ ಇಲಿ ಜ್ವರದ್ದೇ ಮಾತಾಗಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 6 ಜನರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿ ಮುಖವಾಗುತ್ತಿರುವುದು ನೆಮ್ಮದಿ ತಂದಿರುವ ಮಧ್ಯೆಯೇ ಇದೀಗ …
Read More »ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.
Read More »ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!
ಕೊಪ್ಪಳ: ಸ್ಯಾಂಡಲ್ವುಡ್ ನಟ ಯಶ್ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ. …
Read More »ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಹೆಣ ಸಾಗಿಸಲು ಕುಟುಂಬಸ್ಥರ ಪರದಾಟ
ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ. ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ …
Read More »ಮಳೆ ಆರ್ಭಟಕ್ಕೆ ಕೊಚ್ಚಿ ಹೋಯ್ತು ಕೋಳೂರು ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ
ಕೊಪ್ಪಳ: ನಿನ್ನೆ ಸುರಿದ ಭಾರಿ ಮಳೆಗೆ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ನೀರುಪಾಲಾಗಿರುವ ಘಟನೆ ಕೊಪ್ಪಳ ತಾಲೂಕಿನ ಕೋಳೂರು ಬಳಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆಯೇ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ಕುಸಿದಿತ್ತು. ಮತ್ತೇ ಈಗ ನಿನ್ನೆ ಸುರಿದ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಈ ಪರಿಣಾಮ ಕೋಳು ಸುತ್ತ ಮುತ್ತ ಇರೋ ಜಮೀನಿಗೆ ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆಗಳು ನಾಶವಾಗಿವೆ. ಹಲವು ಬಾರಿ ತಡೆಗೋಡೆ ದುರಸ್ಥಿ …
Read More »ಸಂಸದ ಕರಡಿ ಸಂಗಣ್ಣ ಪುತ್ರ ಅಮರೇಶ್ ಕರಡಿ ಚಪ್ಪಲಿ ಹಾಕಿಕೊಂಡು ನೇಗಿಲು ಹಿಡಿದಿದ್ದಕ್ಕೆ ರೈತರು ಆಕ್ರೋಶ
ಕೊಪ್ಪಳ: ಪೋಸ್ ಕೊಡುವ ಭರದಲ್ಲಿ ಸಂಸದರ ಪುತ್ರ ರೈತರಿಗೆ ಅವಮಾನಿಸಿದ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಂಸದ ಕರಡಿ ಸಂಗಣ್ಣ ಪುತ್ರ ಅಮರೇಶ್ ಕರಡಿ ಚಪ್ಪಲಿ ಹಾಕಿಕೊಂಡು ನೇಗಿಲು ಹಿಡಿದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇಗಿಲು ಹಿಡಿದು ಉಳುಮೆ ಮಾಡುವಾಗ ಸಾಮಾನ್ಯವಾಗಿ ರೈತರು ಚಪ್ಪಲಿ ಧರಿಸುವುದಿಲ್ಲ. ಈ ಮೂಲಕ ನೇಗಿಲನ್ನು ಪೂಜ್ಯನೀಯ ಭಾವನೆಯಿಂದ ಕಾಣುತ್ತಾರೆ. ಆದರೆ ಕೊಪ್ಪಳ ಸಂಸದ ಕರಡಿ ಸಂಗಣ್ಣ …
Read More »
Laxmi News 24×7