Breaking News

ಕೋಲಾರ

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

ಕೋಲಾರ: ನಮಗೆ ಐಪಿಎಲ್‌ ಟಿಕೆಟ್‌ ಬೇಕು ಎಂದು ಕೇಳುವ ಶಾಸಕರಿಗೆ ನಾಚಿಕೆಯಾಗಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಕಿಡಿಕಾರಿದ್ದಾರೆ. ಕೋಲಾರದಲ್ಲಿ ಶ್ರೀರಾಮಸೇನೆ ಸಂಘಟನೆಯ ಶೋಭಾಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ರಿಯಾಯಿತಿ ಬೇಕು. ಮೀಸಲಾತಿ ಬೇಕು, ಟಿಕೆಟ್‌ ವೀಕ್ಷಿಸಲು ಮುಂದಿನ ವಿಐಪಿ ಚೇರ್ ಬೇಕು ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಸದನದಲ್ಲಿ ಅಯಾ ಕ್ಷೇತ್ರದ ಸಮಸ್ಯೆಗಳು, ನೀರಾವರಿ ಯೋಜನೆಗಳು, ಕೈಗಾರಿಕೆಗಳ ಬಗ್ಗೆ …

Read More »

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

ಕೋಲಾರ: ಹೃದಯಾಘಾತಕ್ಕೊಳಗಾಗಿ ಪೊಲೀಸ್ ಮುಖ್ಯಪೇದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ  ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್‌ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ತೂಕ ಕಡಿಮೆ ಮಾಡುವ ಹಿನ್ನೆಲೆ ವೆಂಕಟರಮಣಪ್ಪ ಡಯಟ್ ಸೇರಿದಂತೆ ಔಷಧ ತೆಗೆದುಕೊಳ್ಳುತ್ತಿದ್ದರು. ಇಂದು ಮುಂಜಾನೆ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Read More »

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

ಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಬೆವರಿಳಿಸಿದ ಪ್ರಸಂಗ ನಡೆಯಿತು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಬೇಸಿಗೆ ಶುರುವಾಗಿದ್ದು, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾದರೆ, ಜನರಿಂದ ದೂರುಗಳು ಬಂದರೆ ಸುಮ್ಮನಿರಲ್ಲ. ನೆಪ ಹೇಳದೆ ಕೆಲಸ ಮಾಡಿ …

Read More »

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ

ಕೋಲಾರ: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಸಂಜೆ 4.20ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು …

Read More »

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

ಕೋಲಾರ: ಬೈಕ್‌ ವ್ಹೀಲಿಂಗ್‌ ಮಾಡ್ತಿದ್ದ ಐವರನ್ನು ಮಾಲೂರು (Maluru) ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ ನಹೀಂ, ಮಹಮ್ಮದ್ ಇಂಜುಮಾನ್, ಇಕ್ಬಾಲ್ ಶೇಕ್ ವಿಕ್ರಂ ಹಾಗೂ ಮಹಮ್ಮದ್ ತೋಹಿದ್ ಎಂದು ಗುರುತಿಸಲಾಗಿದೆ. ಇವರೆಲ್ಲ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಳಿ ವ್ಹೀಲಿಂಗ್‌ ಮಾಡುತ್ತಿದ್ದರು. ಆರೋಪಿಗಳು ಬಳಸಿದ್ದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

Read More »

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

ಕೋಲಾರ: ಪ್ರಧಾನಿ ಮೋದಿಯವರು ಶನಿ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ರವಿವಾರ ಆಯೋಜಿಸಲಾಗಿದ್ದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. “ಮೋದಿ ಸಾಹೇಬರೇ, ದೇವರ ಮೇಲೆ ನಂಬಿಕೆ ಇರಿಸಿಕೊಂಡು ಕಾಯುತ್ತಿದ್ದೇವೆ. ಜೂ. 4ರಂದು ದೇಶಕ್ಕೆ ಹಿಡಿದ ಶನಿ ಬಿಡುತ್ತದೆ. ನೀನು ದೇಶಕ್ಕೆ ಹಿಡಿದ ಶನಿ ಕಣಯ್ನಾ’ ಎಂದು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ನಾಯಕಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಡವರಿಗೆ, ಹೆಣ್ಣು …

Read More »

ಸಿದ್ದರಾಮಯ್ಯಗೆ ಒಂದು ಮತವನ್ನೂ ಹಾಕಲ್ಲ; ಇಡೀ ಗ್ರಾಮದಿಂದ ವರ್ತೂರು ಪ್ರಕಾಶ್‌ಗೆ ಭರವಸೆ

ಕೋಲಾರ: ತಾಲೂಕಿನ ವೇಮಗಲ್‌ ಹೋಬಳಿಯ ಕುರುಬರಹಳ್ಳಿ ಗ್ರಾಮಕ್ಕೆ ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದ್ದ ಬೆನ್ನಲ್ಲಿಯೇ ಗ್ರಾಮಸ್ಥರು ವರ್ತೂರು ಪ್ರಕಾಶ್‌ ಅವರನ್ನು ಆಹ್ವಾನಿಸಿ ಸಿದ್ದರಾಮಯ್ಯರಿಗೆ ಒಂದು ಮತವನ್ನೂ ಹಾಕುವುದಿಲ್ಲ ಎಂದು ಭರವಸೆ ನೀಡಿರುವ ಕುತೂಹಲ ಸಂಗತಿ ನಡೆದಿದೆ. ಕುರುಬರಹಳ್ಳಿ ಗ್ರಾಮಸ್ಥರು ಸಾಮೂಹಿಕವಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಅವರನ್ನು ಗ್ರಾಮಕ್ಕೆ ಕರೆಯಿಸಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಿ ಸನ್ಮಾನಿಸಿ, ನಮ್ಮ ಗ್ರಾಮದಿಂದ ಒಂದು ಮತ ಕೂಡ ಸಿದ್ಧರಾಮಯ್ಯನವರಿಗೆ …

Read More »

ಪ್ರೀತಿಸಿ ಮದುವೆಯಾಗಿ ದಾರಿ ತಪ್ಪಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ.

ಕೋಲಾರ: ದಾರಿ ತಪ್ಪಿದ ಪತ್ನಿ ಅಕ್ರಮ ಸಂಬಂಧ ಬೆಳೆಸಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ನಡೆದಿದೆ. ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ. 28 ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನಂದ್ ನಾಪತ್ತೆಯಾಗಿರುವುದಾಗಿ ಆತನ ಅಣ್ಣ ವೆಂಕಟೇಶ್ ದೂರು ನೀಡಿದ್ದರು. ನಂತರ ಎರಡು ದಿನಗಳ ಬಳಿಕ ಮತ್ತೊಂದು ದೂರು ನೀಡಿ ತಮ್ಮನ ಪತ್ನಿ …

Read More »

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

ಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ. ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು. ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು. ಬಿಜೆಪಿ ಕಾರ್ಯಕರ್ತರು …

Read More »

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ

ಕೋಲಾರ: ಬೈಕ್​ನಲ್ಲಿ ಅಕ್ರಮವಾಗಿ ಗಾಂಜಾ (Ganja) ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ‌ ವೆಂಕಟರಾಮಪ್ಪ‌ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.  

Read More »