Breaking News

ಕೋಲಾರ

ಮದ್ಯಕ್ಕೆ ಮೊದಲಿದ್ದ ಬೇಡಿಕೆ ಈಗಿಲ್ಲ : ಸಚಿವ ನಾಗೇಶ್

ಕೋಲಾರ, ಮೇ 19- ರಾಜ್ಯದಲ್ಲಿ ಮದ್ಯಕ್ಕೆ ಮೊದಲು ಇದ್ದ ಬೇಡಿಕೆ ಸದ್ಯಕ್ಕಿಲ್ಲ ಹಾಗಾಗಿ ಆದಾಯ ಕಡಿಮೆಯಾಗಿದೆ ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ನಂತರ ಮದ್ಯ ಪೂರೈಕೆಗೆ ಅವಕಾಶ ನೀಡಿದ ಮೊದಲ ವಾರದಲ್ಲಿ ಕಲೆಕ್ಷನ್ ಚೆನ್ನಾಗಿ ಆಗಿತ್ತು. ಆದರೆ, ಈಗಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಲಾಡ್ಜ್‍ಗಳಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಮಾಡಿರುವ ಹಿನ್ನೆಲೆಯಲ್ಲಿ ಆದಾಯ ಕಡಿತವಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು

Read More »

ಕೊರೊನಾ ಸೋಂಕಿತ ಕೋಲಾರದಿಂದ ಎಸ್ಕೇಪ್, ಬೆಂಗಳೂರಲ್ಲಿ ಪ್ರತ್ಯಕ್ಷ………..

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸೋಂಕಿತರ ಸಂಖ್ಯೆ 6ಕ್ಕೇರಿದೆ. ಸೋಂಕಿತ ಕೋರ್ಟ್ ಉದ್ಯೋಗಿಯ ಟ್ರಾವಲ್ ಹಿಸ್ಟರಿ ಮೂರು ನಗರಗಳ ನಿದ್ದೆಗೆಡಿಸಿದೆ. ಯಾಕೆಂದರೆ ಸೋಂಕಿತನೊಬ್ಬ ಎಸ್ಕೇಪ್ ಆಗಿದ್ದು, ಎಲ್ಲರ ಕಣ್ಣುತಪ್ಪಿಸಿ ಬೆಂಗಳೂರಿಗೆ ಬಂದುಬಿಟ್ಟಿದ್ದ. ಕೊನೆಗೆ ಆರೋಗ್ಯಾಧಿಕಾರಿಗಳು ಹುಡುಕಾಟ ನಡೆಸಿ ಎಸ್ಕೇಪ್ ಆಗಿದ್ದ ಸೋಂಕಿತನ್ನು ಲಾಕ್ ಮಾಡಿ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಐಸೋಲೇಶನ್ ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ವಾಸವಿದ್ದ ಮಂಡ್ಯ ಮೂಲದ ಕೋರ್ಟ್ ಉದ್ಯೋಗಿಯಲ್ಲಿ ಕೊರೊನಾ ಸೋಂಕು ಲಕ್ಷಣ ಕಂಡುಬಂದಿತ್ತು. ಗಂಟಲು …

Read More »

ರಮೇಶ್ ಕುಮಾರ್ ಲಾಕ್‍ಡೌನ್ ಉಲ್ಲಂಘನೆ- ನೂರಾರು ಜನ ಸೇರಿಸಿ ಕೆರೆ ಪೂಜೆ….

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂರಾರು ಜನರನ್ನು ಸೇರಿಸಿ ಕರೆಯಲ್ಲಿ ಪೂಜೆ ಮಾಡುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ್ದಾರೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ತಮ್ಮದೆ ಮುಖಂಡರು, ಸ್ಥಳೀಯರನ್ನು ಸೇರಿಸಿಕೊಂಡು ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಪೂಜೆ ವೇಳೆ ನೂರಾರು ಜನರ ಜಮಾವಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಜಿ ಸ್ಪೀಕರ್ ವಿರುದ್ಧ ಹಲವರು …

Read More »

ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಯತ್ನ- ಮೂವರ ಸಾವು, ಇಬ್ಬರು ಅರೆಸ್ಟ್………..

ಕೋಲಾರ: ಚಿನ್ನದ ಗಣಿಯಲ್ಲಿ ಚಿನ್ನ ಕಳ್ಳತನಕ್ಕೆಂದು ತೆರಳಿದ್ದ ಐವರಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರನ್ನ ಬಂಧಿಸಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮಾರಿಕುಪ್ಪಂನ ಮೈಸೂರು ಮೈನಿಂಗ್ ನಲ್ಲಿ ಈ ಘಟನೆ ಜರುಗಿದ್ದು, ಮೂವರು ಕಳ್ಳರು ಮೃತಪಟ್ಟಿದ್ದಾರೆ. ಕಳೆದ ರಾತ್ರಿ ಕೆಜಿಎಫ್ ನ ಐವರು ನಿವಾಸಿಗಳು ಚಿನ್ನದ ಗಣಿಯಲ್ಲಿ ಚಿನ್ನ ಕಳ್ಳತನಕ್ಕೆಂದು ತೆರಳಿದ್ದರು. ಚಿನ್ನದ ಗಣಿಯ ಗುಂಡಿಯಲ್ಲಿ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಕೆಜಿಎಫ್ ನಗರದ ಬಿ-ಶಾಪ್ ನ …

Read More »

ಕೋಲಾರಕ್ಕೆ ಕೊರೊನಾ ಭಯ!- ಕೆಜಿಎಫ್‍ಗೆ ಹೊಂದಿಕೊಂಡಿರುವ ವಿ.ಕೋಟಾದಲ್ಲಿ 5 ಪ್ರಕರಣ

ಕೋಲಾರ: ಲಾಕ್‍ಡೌನ್ ಸಡಿಲಿಕೆ ಹಾಗೂ ಗಡಿ ರಾಜ್ಯಗಳಲ್ಲಿ ಪತ್ತೆಯಾಗಿರುವ ಕೊರೊನಾ ಪ್ರರಕಣಗಳ ಸಂಖ್ಯೆಯಿಂದ ಜಿಲ್ಲೆಯ ಜನರದಲ್ಲಿ ಆತಂಕ ಮೂಡಿದ್ದು, ಗ್ರೀನ್ ಝೋನ್‍ನಲ್ಲಿರುವ ಜಿಲ್ಲೆ ತನ್ನ ಬಣ್ಣ ಬದಲಿಸುವ ಭಯ ಶುರುವಾಗಿದೆ. ರಾಜ್ಯದಲ್ಲಿ ಗ್ರೀನ್ ಝೋನ್‍ನಲ್ಲಿರುವ ಜಿಲ್ಲೆಗಳ ಪೈಕಿ ಕೋಲಾರವೂ ಒಂದು. ಆದರೆ ಕೋಲಾರ ಗ್ರೀನ್ ಝೋನ್‍ನಲ್ಲಿದ್ದರು ಡೇಂಜರ್ ಝೋನ್‍ನಲ್ಲಿರುವ ಜಿಲ್ಲೆಗಳೊಂದಿಗೆ ಗಡಿ ಹಂಚಿಕೊಂಡಿದೆ. ಜಿಲ್ಲೆಯ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಸುತ್ತಲೂ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಆಂಧ್ರದ …

Read More »

5 ಸಾವಿರ ಕೊರೊನಾ ಸೇನಾನಿಗಳಿಗೆ ಗೌರವ- ಸಿದ್ದರಾಮಯ್ಯರಿಂದ ದಿನಸಿ ಕಿಟ್ ವಿತರಣೆ

ಕೋಲಾರ: ಕೊರೊನಾ ವಿರುದ್ಧ ಹೋರಾಡುತ್ತಿರುವ ಸುಮಾರು 5 ಸಾವಿರ ಜನ ವಾರಿಯರ್ಸ್‍ಗೆ ದಿನಸಿ ಕಿಟ್ ಜೊತೆಗೆ ಮಡಿಲು ತುಂಬಿ ಗೌರವಿಸುವ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿ ಮಾಲೂರು ಶಾಸಕ ನಂಜೇಗೌಡ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಗಲಿರುಳು ದುಡಿಯುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ದಿನಸಿ ಕಿಟ್ ವಿತರಿಸಿದರು. ಅಲ್ಲದೆ ಶಾಸಕರ ಕುಟುಂಬಸ್ಥರು ಅರಿಶಿನ ಕುಂಕುಮ ನೀಡಿ ಮಡಿಲು ತುಂಬಿದರು. ಮಾಲೂರು …

Read More »

ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಕೊಂದ ಭೂಪ……….

ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದ್ರೆ …

Read More »

ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್- ಎಚ್‍ಡಿಕೆ ಆರೋಪ……

ಕೋಲಾರ: ಸರ್ಕಾರಕ್ಕೆ ಲಾಕ್‍ಡೌನ್ ಮೇಲಿರುವ ಕಾಳಜಿ, ರೈತರ ಮೇಲೆ ಇಲ್ಲ. ಜನ ಸಾಮಾನ್ಯರ ನೋವಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೋಲಾರದಲ್ಲಿ ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರದ ಕಿಟ್‍ಗಳನ್ನು ವಿತರಣೆ ಮಾಡಿದರು. ಮುಳಬಾಗಿಲಿನ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಅವರು ತಾಲೂಕಿನಲ್ಲಿ 46 ಸಾವಿರ ಆಹಾರದ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮುಂಬೈನಿಂದ ಮಂಡ್ಯಗೆ …

Read More »

ಆಲಿಕಲ್ಲು ಸಹಿತ ಸುರಿದ ಮಳೆಯಿಂದ ಲಕ್ಷಾಂತರ ರೂ. ಬೆಳೆ ನಾಶ………..

ಕೋಲಾರ: ಜಿಲ್ಲೆಯಲ್ಲಿ ಎರಡು ದಿನದಿಂದ ಆಲಿಕಲ್ಲು ಸಹಿತ ಬಾರಿ ಮಳೆಯಾಗುತ್ತಿದೆ. ಕಳೆದ ದಿನ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಿಂದಾಗಿ ಟೊಮೆಟೊ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸೊಣ್ಣೇಗೌಡ ಎಂಬವರ ಲಕ್ಷಾಂತರ ಮೌಲ್ಯದ ಟೊಮೆಟೊ ಬೆಳೆ ಹಾನಿಯಾಗಿದೆ. ಬಂಗಾರಪೇಟೆ ತಾಲೂಕಿನ ಐತಾಂಡಹಳ್ಳಿ ಮುನಿರಾಜು ಸೇರಿದಂತೆ ಬಂಗಾರಪೇಟೆ ತಾಲೂಕಿನ ವಿವಿಧೆಡೆ ಲಕ್ಷಾಂತರ ರೂಪಾಯಿಯ ನೂರಾರು ಎಕರೆ ಬೆಳೆ ನಾಶವಾಗಿದೆ. ಕೋಲಾರ …

Read More »

ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ

ಕೋಲಾರ: ಜಿಲ್ಲೆಯ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದರು. ಕೆಜಿಎಫ್ ನಗರದಲ್ಲಿ ಪೌರಕಾರ್ಮಿಕರಿಗೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಹೀಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ಆಹಾರ ಪದಾರ್ಥ ಹಾಗೂ ಊಟವನ್ನ ನೀಡುತ್ತಿದ್ದ ತಾಲೂಕು ಬಿಜೆಪಿ ಮುಖಂಡರು ಮಂಗಳವಾರ ಪೌರಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ, ಆಹಾರ ಪದಾರ್ಥಗಳೊಂದಿಗೆ ಚಿಕನ್ ಬಿರಿಯಾನಿ ನೀಡಿದರು. …

Read More »